2006ರ ಮಾಲೆಗಾಂವ್ ಸ್ಫೋಟ ಪ್ರಕರಣ: ಮುಂಬಯಿ ಹೈಕೋರ್ಟ್ ತೀರ್ಪು
ನ್ಯಾಯಾಲಯಕ್ಕೆ ಕೃತಜ್ಞತೆ ಸಲ್ಲಿಸಿದ ಆರೋಪಿಗಳು!

ನಾಸಿಕ್ – ಮುಂಬಯಿ ಹೈಕೋರ್ಟ್ 2006ರಲ್ಲಿ ನಡೆದ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದ ನಾಲ್ವರು ಹಿಂದೂ ಆರೋಪಿಗಳ ಮೇಲಿನ ಆರೋಪಗಳನ್ನು ರದ್ದುಗೊಳಿಸಿದೆ. ರಾಜೇಂದ್ರ ಚೌಧರಿ, ಧಾನ್ ಸಿಂಗ್, ಲೋಕೇಶ್ ಶರ್ಮಾ ಮತ್ತು ಮನೋಹರ್ ನರ್ವಾರಿಯಾ ಬಿಡುಗಡೆಗೊಂಡವರು. ಸೆಷನ್ಸ್ ನ್ಯಾಯಾಲಯವು ಇವರ ಮೇಲೆ ಕೊಲೆ ಮತ್ತು ಕ್ರಿಮಿನಲ್ ಪಿತೂರಿಯ ಆರೋಪಗಳನ್ನು ಹೊರಿಸಿತ್ತು. ಈ ಆದೇಶವನ್ನು ಆರೋಪಿಗಳು ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು. ವಿಚಾರಣೆಯ ನಂತರ ಸಾಕ್ಷ್ಯಾಧಾರಗಳು ಅಪುರೆ (ಸಾಕಷ್ಟು ಇಲ್ಲ) ಎಂದು ತಿಳಿಸುತ್ತಾ ಮುಂಬಯಿ ಹೈಕೋರ್ಟ್ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿತು.
“ರಾಷ್ಟ್ರೀಯ ತನಿಖಾ ಸಂಸ್ಥೆಯು (NIA) ಯಾವುದೇ ಪ್ರತ್ಯಕ್ಷದರ್ಶಿ ಸಾಕ್ಷಿಗಳನ್ನು ಹಾಜರುಪಡಿಸಿಲ್ಲ. ಇದರಿಂದಾಗಿ ಆರೋಪಗಳ ತಳಹದಿಯೇ ದುರ್ಬಲವಾಗಿದೆ” ಎಂದು ಆರೋಪಿಗಳ ಪರ ವಕೀಲರು ವಾದಿಸಿದರು. “ಈಗಾಗಲೇ ಇತರ ಆರೋಪಿಗಳು ಬಿಡುಗಡೆಯಾಗಿರುವುದನ್ನು ಗಮನಿಸಿದರೆ ಈ ಪ್ರಕರಣವು ಕಾನೂನುಬದ್ಧವಾಗಿ ನಿಲ್ಲಲು ಸಾಧ್ಯವಿಲ್ಲ” ಎಂದೂ ವಾದಿಸಲಾಯಿತು. ಹೈಕೋರ್ಟ್ ಈ ಎಲ್ಲ ಅಂಶಗಳನ್ನು ಪರಿಗಣಿಸಿ ಆರೋಪಿಗಳಿಗೆ ಬಿಡುಗಡೆಯ ಸಮಾಧಾನ ನೀಡಿದೆ.
ಈ ತೀರ್ಪಿನ ನಂತರ ನ್ಯಾಯಾಲಯಕ್ಕೆ ಕೃತಜ್ಞತೆ ಸಲ್ಲಿಸಿದ ಆರೋಪಿಗಳು, “ನಮಗೆ ನ್ಯಾಯ ಸಿಗುವುದು ವಿಳಂಬವಾಗಿರಬಹುದು, ಆದರೆ ಅಂತಿಮವಾಗಿ ನ್ಯಾಯ ಸಿಕ್ಕಿದೆ” ಎಂದು ಹೇಳಿದರು.
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)
ಗೋಪಾಲಗಡ ಸರಕಾರದ್ದಾಗಿದ್ದು ಎಲ್ಲರಿಗೂ ಮುಕ್ತವಾಗಿದೆ : ವದಂತಿಗಳನ್ನು ನಂಬಿ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ !
ಪಾಟಲಿಪುತ್ರ (ಬಿಹಾರ) ಇಲ್ಲಿ ಪ್ರಸಿದ್ಧ ಖಾನ್ ಸರ್ ಅವರ ತರಬೇತಿ ಕೇಂದ್ರದ ಮೇಲೆ ದಾಳಿ