ರಾಯ್ಪುರ (ಛತ್ತೀಸ್ಗಢ)ನಲ್ಲಿ ನಡೆದ ಘಟನೆ
ಮಹಫೂಜ್ ಖಾನ್ ಕವಿತಾಳ ಹತ್ಯೆ ಮಾಡಿದ್ದಾನೆಂದು ಕುಟುಂಬಸ್ಥರ ಆರೋಪದ ನಂತರ ಬಂಧನ

ರಾಯ್ಪುರ (ಛತ್ತೀಸ್ಗಢ) – ಇಲ್ಲಿನ ಸಂತೋಷಿ ನಗರ ಪ್ರದೇಶದಲ್ಲಿ ಏಪ್ರಿಲ್ ೧೯ ರಂದು ರಾತ್ರಿ ೧೯ ವರ್ಷದ ಕವಿತಾ ದಾಸ್ ಎಂಬಾಕೆಯ ಶವ, ಪ್ರಿಯಕರ ಮಹಫೂಜ್ ಖಾನ್ನ ಮನೆಯಲ್ಲಿ ಸಂಶಯಾಸ್ಪದ ಪರಿಸ್ಥಿತಿಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಹಫೂಜ್ ಖಾನ್ ಆಕೆಗೆ ಕಿರುಕುಳ ನೀಡಿ ಹತ್ಯೆ ಮಾಡಿದ್ದಾನೆ ಎಂದು ಯುವತಿಯ ಕುಟುಂಬಸ್ಥರು ಆರೋಪಿಸಿದ್ದಾರೆ. ಘಟನೆಯ ಗಂಭೀರತೆಯನ್ನು ಅರಿತ ಪೊಲೀಸರು ಮಹಫೂಜ್ ಖಾನ್ನನ್ನು ಬಂಧಿಸಿದ್ದು, ವಿಚಾರಣೆ ಮಾಡುತ್ತಿದ್ದಾರೆ.
ಕವಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಪೊಲೀಸರ ವಾದವನ್ನು ಕವಿತಾಳ ಕುಟುಂಬಸ್ಥರು ಒಪ್ಪುತ್ತಿಲ್ಲ. ಆಕೆಯ ಕುಟುಂಬವು, ‘ಮಹಫೂಜ್ ಖಾನ್ ಕವಿತಾಳಿಗೆ ಪದೇ ಪದೇ ಮದುವೆಗಾಗಿ ಒತ್ತಾಯಿಸುತ್ತಿದ್ದನು, ಇದರಿಂದ ಕವಿತಾ ತೀವ್ರ ಮಾನಸಿಕ ಒತ್ತಡದಲ್ಲಿದ್ದಳು. ಅವನು ಕವಿತಾಳನ್ನು ಹೊಡೆಯುತ್ತಿದ್ದನು ಮತ್ತು ಇನ್ಸ್ಟಾಗ್ರಾಮ್ನಲ್ಲಿ ನೇರ ಪ್ರಸಾರ ಕೂಡ ಮಾಡುತ್ತಿದ್ದನು. ಇದರಿಂದ ಆಕೆಗೆ ಮಾನಸಿಕ ಆಘಾತ ಉಂಟಾಗಿತ್ತು’, ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ