
ರೋಹತಾಸ್ (ಬಿಹಾರ) – ಸಾಸಾರಾಮ್ನ ರಾಮೂಡಿಹದ ಸರಕಾರಿ ಶಾಲೆಯೊಂದರಲ್ಲಿ ಅತ್ಯಂತ ಸೂಕ್ಷ್ಮ ಪ್ರಕರಣವೊಂದು ಮುನ್ನೆಲೆಗೆ ಬಂದಿದೆ. ಇದರಿಂದಾಗಿ ಸುತ್ತಮುತ್ತಲಿನ ಪರಿಸರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಈ ಬಗ್ಗೆ ಗ್ರಾಮಸ್ಥರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
ಲಭ್ಯವಾದ ಮಾಹಿತಿಯ ಪ್ರಕಾರ, ಏಪ್ರಿಲ್ 22, 2026 ರಂದು ಬೆಳಿಗ್ಗೆ ಶಾಲೆ ತೆರೆದಾಗ 4 ಪ್ಲಾಸ್ಟಿಕ್ ಚೀಲಗಳಲ್ಲಿ ಗೋಮಾಂಸ ಪತ್ತೆಯಾಗಿದೆ. ಈ ಸುದ್ದಿ ಇಡೀ ಪ್ರದೇಶದಲ್ಲಿ ಕಾಡ್ಗಿಚ್ಚಿನಂತೆ ಹರಡಿತು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಶಾಲಾ ಆವರಣದಲ್ಲಿ ಜಮಾಯಿಸಿದರು. ಗ್ರಾಮಸ್ಥರು ಶಾಲೆಯ ಮುಖ್ಯೋಪಾಧ್ಯಾಯ ಮಹಮ್ಮದ್ ಅನ್ವರ್ ಸೇರಿದಂತೆ ಒಟ್ಟು 5 ಮುಸಲ್ಮಾನ ಶಿಕ್ಷಕರ ಮೇಲೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಆಕ್ರೋಶಿತ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಶಾಲೆಯ ಮುಸಲ್ಮಾನ ಶಿಕ್ಷಕರು ಹಿಂದೂ ಮಕ್ಕಳಿಗೆ ಗೋಮಾಂಸ ತಿನ್ನಿಸುವ ಪ್ರಯತ್ನದಲ್ಲಿದ್ದರು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಶಾಲೆಯ ಸುತ್ತಮುತ್ತಲಿನ ಪ್ರದೇಶವು ಹಿಂದೂ ಬಹುಸಂಖ್ಯಾತವಾಗಿದ್ದು, ಶಾಲೆಯಲ್ಲಿ ಕಲಿಯುವ ಬಹುತೇಕ ಮಕ್ಕಳು ಹಿಂದೂ ಸಮುದಾಯಕ್ಕೆ ಸೇರಿದವರಾಗಿದ್ದಾರೆ; ಆದರೆ ಕೆಲವು ವರ್ಷಗಳ ಹಿಂದೆ ಒಂದು ಸಂಚಿನ ಅಡಿಯಲ್ಲಿ ಶಾಲೆಯ ಹೆಸರನ್ನು ‘ಉರ್ದು ಮಧ್ಯ ವಿದ್ಯಾಲಯ’ ಎಂದು ಇಡಲಾಗಿತ್ತು ಎಂದು ಗ್ರಾಮಸ್ಥರು ತಿಳಿಸಿದರು.
ಈ ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ವಿಕ್ರಮಗಂಜ್ನ ಉಪವಿಭಾಗೀಯ ದಂಡಾಧಿಕಾರಿ ಪ್ರಭಾತ ಕುಮಾರ್ ಅವರು ತಮ್ಮ ತಂಡದೊಂದಿಗೆ ಶಾಲೆಗೆ ಆಗಮಿಸಿದರು. ಉಪವಿಭಾಗೀಯ ದಂಡಾಧಿಕಾರಿಗಳು ಆಕ್ರೋಶಿತ ಗ್ರಾಮಸ್ಥರನ್ನು ಸಮಾಧಾನಪಡಿಸಿ ಈ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸುವ ಭರವಸೆ ನೀಡಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ರೋಹತಾಸ್ನ ಪೊಲೀಸ್ ವರಿಷ್ಠಾಧಿಕಾರಿ ರೋಷನ ಕುಮಾರ್ ಮಾಹಿತಿ ನೀಡಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ