
ಟೊರೊಂಟೊ (ಕೆನಡಾ) – ಇಲ್ಲಿನ ನ್ಯಾಯಾಲಯವು ಭಾರತೀಯ ವಿದ್ಯಾರ್ಥಿ ಕಾರ್ತಿಕ ವಾಸುದೇವ್ ಹತ್ಯೆ ಪ್ರಕರಣದ ದೋಷಿಗೆ ಇತ್ತೀಚೆಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಟೊರೊಂಟೊ ಹೈಕೋರ್ಟ್ ನ್ಯಾಯಾಧೀಶರಾದ ಜೇನ್ ಕೆಲ್ಲಿ ಅವರು ಆರೋಪಿ ರಿಚರ್ಡ್ ಎಡ್ವಿನ್ನನ್ನು 2 ಪ್ರತ್ಯೇಕ ಕೊಲೆ ಪ್ರಕರಣಗಳಲ್ಲಿ ದೋಷಿ ಎಂದು ತೀರ್ಪು ನೀಡಿದ್ದಾರೆ. ಈ ಕೊಲೆಗಳನ್ನು ಆತ 2022 ರ ಏಪ್ರಿಲ್ 7 ಮತ್ತು ಏಪ್ರಿಲ್ 9 ರಂದು ಮಾಡಿದ್ದನು. ಈ ಪ್ರಕರಣದಲ್ಲಿ ಆರೋಪಿಯು 21 ವರ್ಷದ ಕಾರ್ತಿಕ ವಾಸುದೇವ್ ಮೇಲೆ ಗುಂಡು ಹಾರಿಸಿರುವುದನ್ನು ಒಪ್ಪಿಕೊಂಡಿದ್ದನು. ಘಟನೆಯ ಸಮಯದಲ್ಲಿ ಆರೋಪಿಯು ‘ಸ್ಕಿಜೋಫ್ರೇನಿಯಾ’ ಎಂಬ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದನು ಮತ್ತು ಸರಿ-ತಪ್ಪುಗಳ ನಡುವಿನ ವ್ಯತ್ಯಾಸವನ್ನು ಗುರುತಿಸುವ ಸ್ಥಿತಿಯಲ್ಲಿರಲಿಲ್ಲ ಎಂದು ಪ್ರತಿವಾದಿ ಪರ ವಕೀಲರು ವಾದಿಸಿದ್ದರು. ಆದ್ದರಿಂದ ಅವನನ್ನು ಹೊಣೆಗಾರನನ್ನಾಗಿ ಮಾಡಬಾರದು; ಆದರೆ ನ್ಯಾಯಾಲಯವು ಈ ವಾದವನ್ನು ತಳ್ಳಿಹಾಕಿತು.
ಕಾರ್ತಿಕ ವಾಸುದೇವ್ ಗಾಜಿಯಾಬಾದ್ ನಿವಾಸಿಯಾಗಿದ್ದನು. ಆತ 2022 ರ ಜನವರಿಯಲ್ಲಿ ಉನ್ನತ ವ್ಯಾಸಂಗಕ್ಕಾಗಿ ಕೆನಡಾಕ್ಕೆ ಹೋಗಿದ್ದನು; ಆದರೆ ಕೆಲವೇ ತಿಂಗಳುಗಳಲ್ಲಿ ಅಲ್ಲಿ ಆತನ ಹತ್ಯೆಯಾಗಿತ್ತು. 4 ವರ್ಷಗಳ ಕಾನೂನು ಹೋರಾಟದ ನಂತರ ಕುಟುಂಬಕ್ಕೆ ಅಂತಿಮವಾಗಿ ನ್ಯಾಯ ಸಿಕ್ಕಿದೆ ಎಂದು ಕಾರ್ತಿಕ ತಂದೆ ಜಿತೇಶ್ ವಾಸುದೇವ್ ಹೇಳಿದ್ದಾರೆ. ಅಂತಿಮ ವಿಚಾರಣೆಗಾಗಿ ಅವರು ಮತ್ತು ಅವರ ಪತ್ನಿ ಕೆನಡಾದಲ್ಲಿ ಹಾಜರಿದ್ದರು.
ಅಮೆರಿಕದ ಸಂಸತ್ತಿನಲ್ಲಿ ಇರಾನ್ ವಿರುದ್ಧದ ಯುದ್ಧ ನಿಲ್ಲಿಸುವ ಪ್ರಸ್ತಾವನೆ ಅಂಗೀಕಾರ
India-Nepal Border Dispute : ನೇಪಾಳದೊಂದಿಗಿನ ಗಡಿ ವಿವಾದದಲ್ಲಿ ಮೂರನೇ ಪಕ್ಷದ ಅಗತ್ಯವಿಲ್ಲ! – ಭಾರತ
Trump Tariff : ಭಾರತ ಸೇರಿದಂತೆ ಹಲವು ದೇಶಗಳ ಮೇಲೆ ಶೇ. ೧೨.೫% ರಷ್ಟು ಹೆಚ್ಚುವರಿ ಆಮದು ಸುಂಕ ವಿಧಿಸಲಿರುವ ಟ್ರಂಪ್
Japan Illegal Mosque : ಜಪಾನ್ : ಪಾಕಿಸ್ತಾನ ನಿರ್ಮಿಸಿದ ಅಕ್ರಮ ಮಸೀದಿ ಧ್ವಂಸ !
ಫ್ರಾನ್ಸ್ ಸರಕಾರವು ಇನ್ನು ಮುಂದೆ ‘ಶೂನ್ಯ ಸಹಿಷ್ಣುತೆ’ಯ ನೀತಿಯನ್ನು ಅಳವಡಿಸಿಕೊಳ್ಳಲಿ !
ಕೋರ್ಟ್ ಆದೇಶ: ಕಾಶಿಯಲ್ಲಿ ರೈಲ್ವೆ ಜಾಗದ ಮಸೀದಿ ತೆರವು