ಎಲ್ಲಾ ಓದುಗರಿಗೆ, ಹಿತಚಿಂತಕರಿಗೆ ಮತ್ತು ಧರ್ಮಪ್ರೇಮಿಗಳಿಗೆ ಸವಿನಯ ವಿನಂತಿ !

೧. ಅಧಿಕ ಮಾಸದಲ್ಲಿ ಜ್ಞಾನದಾನಕ್ಕೆ ಇರುವ ವಿಶೇಷ ಮಹತ್ವ
೧೭.೫.೨೦೨೬ ರಿಂದ ೧೫.೬.೨೦೨೬ ರ ಅವಧಿಯಲ್ಲಿ ‘ಅಧಿಕ ಮಾಸ’ ಇದೆ. ‘ಅಧಿಕ ಮಾಸದಲ್ಲಿ ಮಂಗಳಕಾರ್ಯಗಳನ್ನು ಮಾಡದೆ ವಿಶೇಷ ವ್ರತಗಳು ಮತ್ತು ಪುಣ್ಯಕಾರಕ ಕೃತಿಗಳನ್ನು ಮಾಡಬೇಕು’, ಎಂದು ಶಾಸ್ತ್ರಕಾರರು ಹೇಳಿದ್ದಾರೆ. ಈ ಮಾಸದಲ್ಲಿ ದಾನ ಮಾಡಿದರೆ ಅದರ ಫಲವು ಹಲವು ಪಟ್ಟು ಹೆಚ್ಚಾಗಿ ಸಿಗುತ್ತದೆ. ಆದ್ದರಿಂದ ಈ ಅವಧಿಯಲ್ಲಿ ವಸ್ತ್ರದಾನ, ಅನ್ನದಾನ ಮತ್ತು ಜ್ಞಾನದಾನ ಮಾಡುವುದಕ್ಕೆ ವಿಶೇಷ ಮಹತ್ವವಿದೆ. ಭಾರತೀಯ ಸಂಸ್ಕೃತಿಯಲ್ಲಿ ‘ಜ್ಞಾನದಾನ ಮಾಡುವುದನ್ನು’ ಸರ್ವಶ್ರೇಷ್ಠವೆಂದು ಪರಿಗಣಿಸಲಾಗುವುದರಿಂದ ಅನೇಕರು ಇದಕ್ಕಾಗಿ ಪ್ರಯತ್ನಿಸುತ್ತಿರುತ್ತಾರೆ.
೨. ಸನಾತನದ ಸರ್ವಸ್ಪರ್ಶಿ ಗ್ರಂಥಸಂಪತ್ತು : ಜ್ಞಾನದಾನ ಮಾಡಲು ಸರ್ವೋತ್ತಮ ಮಾಧ್ಯಮ !

ಸನಾತನದ ವೈವಿಧ್ಯಮಯ ಮತ್ತು ಸರ್ವಸ್ಪರ್ಶಿ ಗ್ರಂಥಸಂಪತ್ತು ಎಂದರೆ ಶಾಶ್ವತ ಜ್ಞಾನದ ಅಮೂಲ್ಯ ನಿಧಿ ! ಸನಾತನವು ‘ಅಧ್ಯಾತ್ಮ, ಸಾಧನೆ, ದೇವತೆಗಳ ಉಪಾಸನೆ, ಆಚಾರಧರ್ಮ, ಧರ್ಮಾಚರಣೆ, ಬಾಲಸಂಸ್ಕಾರ, ರಾಷ್ಟ್ರರಕ್ಷಣೆ, ಧರ್ಮಜಾಗೃತಿ, ಈಶ್ವರಪ್ರಾಪ್ತಿಗಾಗಿ ಕಲೆ, ಆಪತ್ಕಾಲದಲ್ಲಿ ಜೀವಿಸಲು ಉಪಾಯಗಳು’ ಇತ್ಯಾದಿ ವಿಷಯಗಳ ಕುರಿತು ಸುಮಾರು ೩೭೦ ಗ್ರಂಥಗಳು ಮತ್ತು ಕಿರುಗ್ರಂಥಗಳನ್ನು ಪ್ರಕಟಿಸಿದೆ. ಈ ಗ್ರಂಥಗಳು ಸರಳ ಭಾಷೆಯಲ್ಲಿ ಓದುಗರಿಗೆ ಅಮೂಲ್ಯ ಜ್ಞಾನವನ್ನು ನೀಡುತ್ತವೆ, ಅಷ್ಟೇ ಅಲ್ಲದೆ ಧರ್ಮದ ಬಗ್ಗೆ ಶ್ರದ್ಧೆಯನ್ನೂ ಹೆಚ್ಚಿಸುತ್ತವೆ. ಆದ್ದರಿಂದ, ಈ ಅಧಿಕ ಮಾಸದಲ್ಲಿ ಇಂತಹ ಗ್ರಂಥದಾನದ ಮೂಲಕ ಜ್ಞಾನದಾನ ಮಾಡಿ ಪುಣ್ಯಸಂಚಯದ ಜೊತೆಗೆ ಆಧ್ಯಾತ್ಮಿಕ ಲಾಭವನ್ನು ಪಡೆದುಕೊಳ್ಳಿ.
ಇತರರಿಗೆ ನೀಡಲು ನಿಮಗೆ ಸನಾತನದ ಗ್ರಂಥಗಳು ಮತ್ತು ಕಿರುಗ್ರಂಥಗಳು ಬೇಕಿದ್ದರೆ, ಅವುಗಳ ಬೇಡಿಕೆಯನ್ನು ಆದಷ್ಟು ಬೇಗ ಸ್ಥಳೀಯ ವಿತರಕರಿಗೆ ತಿಳಿಸಿ ಅಥವಾ https://sanatanshop.com/shop ಈ ಲಿಂಕ್ನಲ್ಲಿ ನೋಂದಾಯಿಸಿ.
ಸಾಧಕರು ಓದುಗರಿಗೆ, ಹಿತೈಷಿಗಳು ಮತ್ತು ಧರ್ಮಪ್ರೇಮಿಗಳಿಗೆ ವಿವಿಧ ವಿಷಯಗಳ ಗ್ರಂಥಗಳ ಮಾಹಿತಿಯನ್ನು ‘ವಾಟ್ಸಾಪ್’ ಮೂಲಕ ಕಳುಹಿಸಿ ಮತ್ತು ಅವರ ಆಸಕ್ತಿಯಂತೆ ಗ್ರಂಥಗಳನ್ನು ಆಯ್ಕೆ ಮಾಡಲು ತಿಳಿಸಿ
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸನಾತನದ ಗ್ರಂಥಗಳ ೧ ಕೋಟಿಗೂ ಅಧಿಕ ಪ್ರತಿಗಳು ಪ್ರಕಟ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
‘ವಾಟ್ಸಾಪ್’ ನಲ್ಲಿ ಮದುವೆ ಆಮಂತ್ರಣ ಪತ್ರಿಕೆಯನ್ನು ಕಳುಹಿಸುವ ಮೂಲಕ ಮೊಬೈಲ್ ನಲ್ಲಿರುವ ಮಾಹಿತಿಯನ್ನು ಕದಿಯುವುದರಿಂದ ನಾಗರಿಕರು ಎಚ್ಚರದಿಂದಿರಬೇಕು!
ಮುಸಲ್ಮಾನರ ಒತ್ತಡಕ್ಕೆ ಮಣಿದು ಶಾಸಕ ಟಿ. ರಾಜಾಸಿಂಗ್ ಅವರ ಧರ್ಮಸಭೆಗೆ ಅನುಮತಿ ನಿರಾಕರಿಸಿದ ಪೊಲೀಸರು !
‘ಗೋಕುಲ್’ ನ ಹಲಾಲ್ ಪ್ರಮಾಣಪತ್ರವನ್ನು ತಕ್ಷಣ ರದ್ದುಗೊಳಿಸಿ : ಕೊಲ್ಲಾಪುರದಲ್ಲಿ ಹಿಂದುತ್ವನಿಷ್ಠ ಸಂಘಟನೆಗಳ ಆಕ್ರೋಶ !