ಅಶ್ಲೀಲ ವಿಡಿಯೋ ಮತ್ತು ಸಂದೇಶ ಕಳುಹಿಸಿ ದೈಹಿಕ ಸಂಪರ್ಕಕ್ಕಾಗಿ ಒತ್ತಡ!

ಮುಂಬಯಿ – ಸಂಸ್ಥೆಯೊಂದರಲ್ಲಿ ‘ಟೆಲಿಕಾಲರ್’ (ಗ್ರಾಹಕರ ಸೇವೆಗಾಗಿ ಸಂಸ್ಥೆಯಲ್ಲಿರುವ ಸಂಪರ್ಕ ವ್ಯವಸ್ಥೆ) ಆಗಿ ಕೆಲಸ ಮಾಡುತ್ತಿದ್ದ ಅಶ್ರಫ್ ಸಿದ್ದಿಕಿ (ವಯಸ್ಸು 19 ವರ್ಷ) ತನ್ನ ಸಹೋದ್ಯೋಗಿ ಹಿಂದೂ ಯುವತಿಯ ಮೊಬೈಲ್ಗೆ ಅಶ್ಲೀಲ ವಿಡಿಯೋ ಮತ್ತು ಸಂದೇಶಗಳನ್ನು ಕಳುಹಿಸುವ ಮೂಲಕ ದೈಹಿಕ ಸಂಪರ್ಕ ಹೊಂದಲು ಅವಳ ಮೇಲೆ ಒತ್ತಡ ಹೇರಲು ಪ್ರಯತ್ನಿಸಿದ್ದಾನೆ. ಈ ಪ್ರಕರಣದಲ್ಲಿ ಯುವತಿ ನೀಡಿದ ದೂರಿನ ಮೇರೆಗೆ ಅಗ್ರಿಪಾಡಾ ಪೊಲೀಸರು ಅಶ್ರಫ್ ಸಿದ್ದಿಕಿಯನ್ನು ಬಂಧಿಸಿದ್ದಾರೆ. ಆತ ಕೆಲಸ ಮಾಡುತ್ತಿರುವ ಸಂಸ್ಥೆಯಲ್ಲಿ ಉದ್ಯೋಗಕ್ಕಾಗಿ ಸಂದರ್ಶನಕ್ಕೆ ಬಂದಿದ್ದ ಹಿಂದೂ ಯುವತಿಯರ ಮೊಬೈಲ್ ಸಂಖ್ಯೆಗಳನ್ನು ಸಂಪರ್ಕಿಸಿ ಅವರನ್ನೂ ಬಲೆಗೆ ಬೀಳಿಸಲು ಅಶ್ರಫ್ ಪ್ರಯತ್ನಿಸಿರುವುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.
ಸಂತ್ರಸ್ತ ಹಿಂದೂ ಯುವತಿ ಮಾಧ್ಯಮಗಳಿಗೆ ನೀಡಿದ ಮಾಹಿತಿಯ ಪ್ರಕಾರ, ಅಶ್ರಫ್ ನಿಯಮಿತವಾಗಿ ಅವಳಿಗೆ ಅಶ್ಲೀಲ ವಿಡಿಯೋ ಮತ್ತು ಸಂದೇಶಗಳನ್ನು ಕಳುಹಿಸುತ್ತಿದ್ದನು. ಈ ಸಂದೇಶಗಳಲ್ಲಿ ‘ನನಗೆ ಹಿಂದೂ ಹುಡುಗಿಯರೇ ಇಷ್ಟ’, ‘ಪ್ರಸ್ತುತ ಹಿಂದೂ ಯುವತಿಯರು ಮುಸ್ಲಿಂ ಯುವಕರನ್ನೇ ಇಷ್ಟಪಡುತ್ತಾರೆ’ ಎಂಬಂತಹ ಸಂದೇಶಗಳಿದ್ದವು ಎಂದು ಸಂತ್ರಸ್ತ ಯುವತಿ ಹೇಳಿದ್ದಾಳೆ. ಇದರಿಂದ ಅಶ್ರಫ್ ಹಿಂದೂ ಯುವತಿಯರನ್ನು ಪ್ರೀತಿಯ ಬಲೆಗೆ ಸಿಲುಕಿಸುತ್ತಿರುವುದು ಕಂಡುಬರುತ್ತದೆ. ಅಶ್ರಫ್ ನೀಡುತ್ತಿದ್ದ ಕಿರುಕುಳದ ಬಗ್ಗೆ ಸಂತ್ರಸ್ತ ಯುವತಿಯು ತನ್ನ ತಂದೆಗೆ ತಿಳಿಸಿದ ನಂತರ, ಅವರು ಪೊಲೀಸರಿಗೆ ದೂರು ನೀಡಿದರು. ಈ ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ. ಅಶ್ರಫ್, ಸಮಾಜವಾದಿ ಪಕ್ಷದ ನಗರಸೇವಕಿ (ಕಾರ್ಪೊರೇಟರ್) ಇರಮ್ ಸಿದ್ದಿಕಿ ಅವರ ಸೋದರಳಿಯನಾಗಿದ್ದಾನೆ. ಭಾಜಪದ ಸ್ಥಳೀಯ ಪದಾಧಿಕಾರಿ ನಿತಿನ್ ಬಂಕರ್ ಅವರು, ನಾಸಿಕ್ನಂತೆಯೇ ಇದೂ ಕೂಡ ‘ಕಾರ್ಪೊರೇಟ್ ಜಿಹಾದ್’ನ ಒಂದು ಪ್ರಕಾರವಾಗಿದೆ ಎಂದು ಹೇಳಿದ್ದು, ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!