ಸಂತ್ರಸ್ತ ಕುಟುಂಬಕ್ಕೆ ಭದ್ರತೆ ಒದಗಿಸಲು ದೆಹಲಿ ಹೈಕೋರ್ಟ್ ಆದೇಶ!

ನವದೆಹಲಿ – ದೆಹಲಿಯ ಉತ್ತಮ ನಗರದಲ್ಲಿ ಹೋಳಿ ಹಬ್ಬದ ದಿನದಂದು ನಡೆದ ಹಿಂದೂ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂತ್ರಸ್ತ ಕುಟುಂಬದ ಭದ್ರತೆಯ ಬಗ್ಗೆ ದೆಹಲಿ ಹೈಕೋರ್ಟ್ ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದೆ. ಕುಟುಂಬದ ಭದ್ರತೆಯಲ್ಲಿ ಯಾವುದೇ ಲೋಪವಾಗಬಾರದು ಎಂದು ನ್ಯಾಯಾಲಯ ಸೂಚಿಸಿದೆ. ಏಪ್ರಿಲ್ 13, 2026: ಆರೋಪಿಗಳ ಕಡೆಯವನಾದ ಬಾಬು ಖಾನ್ ಮತ್ತು ಆತನ ಗುಂಪು ಸಂತ್ರಸ್ತ ಹಿಂದೂ ಕುಟುಂಬಕ್ಕೆ ಬೆದರಿಕೆ ಹಾಕಿದ್ದರು. “ಒಬ್ಬನನ್ನು ಕೊಂದಿದ್ದೇವೆ, ಈಗ ಎರಡನೇಯವನ ಸರದಿ” ಎಂದು ಎಚ್ಚರಿಸಿದ್ದರು. ಈ ಘಟನೆಯ ನಂತರ ಪ್ರದೇಶದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಸಂತ್ರಸ್ತ ಹಿಂದೂ ಕುಟುಂಬವು ಅನಿವಾರ್ಯವಾಗಿ ತಮ್ಮ ಮನೆಯ ಮುಂದೆ ‘ಮನೆ ಮಾರಾಟಕ್ಕಿದೆ’ ಎಂಬ ಫಲಕವನ್ನು ಹಾಕಿದ್ದಾರೆ.
ಈ ಘಟನೆಯು ಮಾರ್ಚ್ 4, 2026 ರಂದು ನಡೆದಿತ್ತು. ಉತ್ತಮ ನಗರದ ಜೆ.ಜೆ ಕಾಲೋನಿಯಲ್ಲಿ ಯುವಕನೊಬ್ಬ ಮುಸ್ಲಿಂ ಮಹಿಳೆಯ ಮೇಲೆ ನೀರಿನ ಬಲೂನ್ ಎಸೆದಿದ್ದನು. ಇದರಿಂದ ಕೆರಳಿದ ಮುಸ್ಲಿಂ ಗುಂಪೊಂದು ಆ ಯುವಕನ ಮೇಲೆ ಭೀಕರ ಹಲ್ಲೆ ಮಾಡಿತ್ತು, ಈ ಹಲ್ಲೆಯಲ್ಲಿ ಯುವಕ ಸಾವನ್ನಪ್ಪಿದ್ದನು. ಸದ್ಯ ಈ ಪ್ರಕರಣವು ದೆಹಲಿ ಹೈಕೋರ್ಟ್ನಲ್ಲಿ ವಿಚಾರಣೆಯ ಹಂತದಲ್ಲಿದೆ. ವಿಚಾರಣೆಯ ಸಂದರ್ಭದಲ್ಲಿ, ಸಂತ್ರಸ್ತ ಕುಟುಂಬದ ರಕ್ಷಣೆಗಾಗಿ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ