ಸಂತ್ರಸ್ತ ಕುಟುಂಬಕ್ಕೆ ಭದ್ರತೆ ಒದಗಿಸಲು ದೆಹಲಿ ಹೈಕೋರ್ಟ್ ಆದೇಶ!

ನವದೆಹಲಿ – ದೆಹಲಿಯ ಉತ್ತಮ ನಗರದಲ್ಲಿ ಹೋಳಿ ಹಬ್ಬದ ದಿನದಂದು ನಡೆದ ಹಿಂದೂ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂತ್ರಸ್ತ ಕುಟುಂಬದ ಭದ್ರತೆಯ ಬಗ್ಗೆ ದೆಹಲಿ ಹೈಕೋರ್ಟ್ ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದೆ. ಕುಟುಂಬದ ಭದ್ರತೆಯಲ್ಲಿ ಯಾವುದೇ ಲೋಪವಾಗಬಾರದು ಎಂದು ನ್ಯಾಯಾಲಯ ಸೂಚಿಸಿದೆ. ಏಪ್ರಿಲ್ 13, 2026: ಆರೋಪಿಗಳ ಕಡೆಯವನಾದ ಬಾಬು ಖಾನ್ ಮತ್ತು ಆತನ ಗುಂಪು ಸಂತ್ರಸ್ತ ಹಿಂದೂ ಕುಟುಂಬಕ್ಕೆ ಬೆದರಿಕೆ ಹಾಕಿದ್ದರು. “ಒಬ್ಬನನ್ನು ಕೊಂದಿದ್ದೇವೆ, ಈಗ ಎರಡನೇಯವನ ಸರದಿ” ಎಂದು ಎಚ್ಚರಿಸಿದ್ದರು. ಈ ಘಟನೆಯ ನಂತರ ಪ್ರದೇಶದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಸಂತ್ರಸ್ತ ಹಿಂದೂ ಕುಟುಂಬವು ಅನಿವಾರ್ಯವಾಗಿ ತಮ್ಮ ಮನೆಯ ಮುಂದೆ ‘ಮನೆ ಮಾರಾಟಕ್ಕಿದೆ’ ಎಂಬ ಫಲಕವನ್ನು ಹಾಕಿದ್ದಾರೆ.
ಈ ಘಟನೆಯು ಮಾರ್ಚ್ 4, 2026 ರಂದು ನಡೆದಿತ್ತು. ಉತ್ತಮ ನಗರದ ಜೆ.ಜೆ ಕಾಲೋನಿಯಲ್ಲಿ ಯುವಕನೊಬ್ಬ ಮುಸ್ಲಿಂ ಮಹಿಳೆಯ ಮೇಲೆ ನೀರಿನ ಬಲೂನ್ ಎಸೆದಿದ್ದನು. ಇದರಿಂದ ಕೆರಳಿದ ಮುಸ್ಲಿಂ ಗುಂಪೊಂದು ಆ ಯುವಕನ ಮೇಲೆ ಭೀಕರ ಹಲ್ಲೆ ಮಾಡಿತ್ತು, ಈ ಹಲ್ಲೆಯಲ್ಲಿ ಯುವಕ ಸಾವನ್ನಪ್ಪಿದ್ದನು. ಸದ್ಯ ಈ ಪ್ರಕರಣವು ದೆಹಲಿ ಹೈಕೋರ್ಟ್ನಲ್ಲಿ ವಿಚಾರಣೆಯ ಹಂತದಲ್ಲಿದೆ. ವಿಚಾರಣೆಯ ಸಂದರ್ಭದಲ್ಲಿ, ಸಂತ್ರಸ್ತ ಕುಟುಂಬದ ರಕ್ಷಣೆಗಾಗಿ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!
‘ಕಾರ್ಪೊರೇಟ್’ ಅಲ್ಲ, ಮತಾಂತರ ಮತ್ತು ಬಲಾತ್ಕಾರಗಳ ಕೇಂದ್ರ !
ಸ್ವದೇಶವೇ ಸರ್ವಸ್ವ !