ಸಂತ್ರಸ್ತ ಕುಟುಂಬಕ್ಕೆ ಭದ್ರತೆ ಒದಗಿಸಲು ದೆಹಲಿ ಹೈಕೋರ್ಟ್ ಆದೇಶ!

ನವದೆಹಲಿ – ದೆಹಲಿಯ ಉತ್ತಮ ನಗರದಲ್ಲಿ ಹೋಳಿ ಹಬ್ಬದ ದಿನದಂದು ನಡೆದ ಹಿಂದೂ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂತ್ರಸ್ತ ಕುಟುಂಬದ ಭದ್ರತೆಯ ಬಗ್ಗೆ ದೆಹಲಿ ಹೈಕೋರ್ಟ್ ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದೆ. ಕುಟುಂಬದ ಭದ್ರತೆಯಲ್ಲಿ ಯಾವುದೇ ಲೋಪವಾಗಬಾರದು ಎಂದು ನ್ಯಾಯಾಲಯ ಸೂಚಿಸಿದೆ. ಏಪ್ರಿಲ್ 13, 2026: ಆರೋಪಿಗಳ ಕಡೆಯವನಾದ ಬಾಬು ಖಾನ್ ಮತ್ತು ಆತನ ಗುಂಪು ಸಂತ್ರಸ್ತ ಹಿಂದೂ ಕುಟುಂಬಕ್ಕೆ ಬೆದರಿಕೆ ಹಾಕಿದ್ದರು. “ಒಬ್ಬನನ್ನು ಕೊಂದಿದ್ದೇವೆ, ಈಗ ಎರಡನೇಯವನ ಸರದಿ” ಎಂದು ಎಚ್ಚರಿಸಿದ್ದರು. ಈ ಘಟನೆಯ ನಂತರ ಪ್ರದೇಶದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಸಂತ್ರಸ್ತ ಹಿಂದೂ ಕುಟುಂಬವು ಅನಿವಾರ್ಯವಾಗಿ ತಮ್ಮ ಮನೆಯ ಮುಂದೆ ‘ಮನೆ ಮಾರಾಟಕ್ಕಿದೆ’ ಎಂಬ ಫಲಕವನ್ನು ಹಾಕಿದ್ದಾರೆ.
ಈ ಘಟನೆಯು ಮಾರ್ಚ್ 4, 2026 ರಂದು ನಡೆದಿತ್ತು. ಉತ್ತಮ ನಗರದ ಜೆ.ಜೆ ಕಾಲೋನಿಯಲ್ಲಿ ಯುವಕನೊಬ್ಬ ಮುಸ್ಲಿಂ ಮಹಿಳೆಯ ಮೇಲೆ ನೀರಿನ ಬಲೂನ್ ಎಸೆದಿದ್ದನು. ಇದರಿಂದ ಕೆರಳಿದ ಮುಸ್ಲಿಂ ಗುಂಪೊಂದು ಆ ಯುವಕನ ಮೇಲೆ ಭೀಕರ ಹಲ್ಲೆ ಮಾಡಿತ್ತು, ಈ ಹಲ್ಲೆಯಲ್ಲಿ ಯುವಕ ಸಾವನ್ನಪ್ಪಿದ್ದನು. ಸದ್ಯ ಈ ಪ್ರಕರಣವು ದೆಹಲಿ ಹೈಕೋರ್ಟ್ನಲ್ಲಿ ವಿಚಾರಣೆಯ ಹಂತದಲ್ಲಿದೆ. ವಿಚಾರಣೆಯ ಸಂದರ್ಭದಲ್ಲಿ, ಸಂತ್ರಸ್ತ ಕುಟುಂಬದ ರಕ್ಷಣೆಗಾಗಿ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ನಾಗಪುರ: ಮಾನಸಿಕ ಒತ್ತಡದಿಂದಾಗಿ ‘ನೀಟ್’ ಪರೀಕ್ಷೆಯ ವಿದ್ಯಾರ್ಥಿನಿ ಆತ್ಮಹತ್ಯೆ
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !
ಬೆಂಗಳೂರಿನಲ್ಲಿ ಕಸ ಹಾಯುವ ಸೈಬುಲ್ನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ!
ಗುಜರಾತ್ನಲ್ಲಿ ನುಸುಳುಕೋರರ ವಿರುದ್ಧ ‘ಆಪರೇಷನ್ ಡೆಲ್ಟಾ ಹಂಟ್’: 2 ದಿನಗಳಲ್ಲಿ 501 ಬಾಂಗ್ಲಾದೇಶಿ ನಾಗರಿಕರ ಬಂಧನ !