
ಪಂಢರಪುರ – ಲಕ್ಷಾಂತರ ವಾರಕರಿ-ಭಕ್ತರ ಶ್ರದ್ಧಾಕೇಂದ್ರವಾಗಿರುವ ಶ್ರೀ ವಿಠ್ಠಲ-ರುಕ್ಮಿಣಿ ದೇವಸ್ಥಾನದ ಆವರಣದಲ್ಲಿ ಭಕ್ತರಿಗಾಗಿ ನಿರ್ಮಿಸಲಾದ ದರ್ಶನ ಮಂಟಪದ ಶೌಚಾಲಯದಲ್ಲಿ ಮದ್ಯದ ಬಾಟಲಿಗಳು, ಮಾವಾ-ಗುಟ್ಕಾ ಪ್ಯಾಕೆಟ್ ಗಳು ಮತ್ತು ಸಿಗರೇಟ್ ಪ್ಯಾಕೆಟ್ ಗಳು ಪತ್ತೆಯಾಗಿವೆ. ಭಾಜಪದ ಮಾಜಿ ನಗರಾಧ್ಯಕ್ಷ ವಿಕ್ರಮ ಶಿರಸಾಟ್ ಅವರು ಈ ಘಟನೆಯನ್ನು ಬೆಳಕಿಗೆ ತಂದಿದ್ದು, ಈ ಬಗ್ಗೆ ಕೂಲಂಕಷ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ೭ ಅಂತಸ್ತಿನ ದರ್ಶನ ಮಂಟಪದ ನೈರ್ಮಲ್ಯದ ಜವಾಬ್ದಾರಿಯನ್ನು ಬಿ.ವಿ.ಜಿ. ಸಂಸ್ಥೆ ಮತ್ತು ದೇವಸ್ಥಾನ ಸಮಿತಿ ಎರಡೂ ಹೊಂದಿದ್ದು, ಈ ಇಬ್ಬರ ನಿರ್ಲಕ್ಷ್ಯದಿಂದಾಗಿ ಭಕ್ತರಲ್ಲಿ ಆಕ್ರೋಶ ಭುಗಿಲೆದ್ದಿದೆ.(ಇಂತಹ ಪವಿತ್ರ ಸ್ಥಳದಲ್ಲಿ ಮದ್ಯದ ಬಾಟಲಿಗಳು, ಮಾವಾ-ಗುಟ್ಕಾ ಪ್ಯಾಕೆಟ್ ಗಳು ಮತ್ತು ಸಿಗರೇಟ್ ಪ್ಯಾಕೆಟ್ ಗಳು ಕಂಡುಬರುವುದು ಅತ್ಯಂತ ಗಂಭೀರ ವಿಷಯವಾಗಿದ್ದು, ಸಂಬಂಧಪಟ್ಟವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವುದು ಅಪೇಕ್ಷಿತವಾಗಿದೆ! – ಸಂಪಾದಕರು)
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ