ಮಾಜಿ ಮುಖ್ಯ ನ್ಯಾಯಮೂರ್ತಿ ಭೂಷಣ್ ಗವಾಯಿ ಅವರ ಮೇಲಿನ ಟೀಕೆಗೆ ಮುಖ್ಯಮಂತ್ರಿಗಳಿಂದ ತಿರುಗೇಟು!

ಧುಳೆ – ‘ಅಖಿಲ ಭಾರತೀಯ ಅಂಧಶ್ರದ್ಧಾ ನಿರ್ಮೂಲನಾ ಸಮಿತಿ’ಯ (ಅನ್ನಿಸ್) ಅಧ್ಯಕ್ಷ ಶ್ಯಾಮ್ ಮಾನವ್ ಅವರು ಇತ್ತೀಚೆಗೆ ಕೇವಲ ಪ್ರಚಾರ ಪಡೆಯುವುದಕ್ಕಾಗಿಯೇ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಮಾನವ್ ಅವರ ಟೀಕೆಗೆ ಕಟುವಾದ ಶಬ್ದಗಳಲ್ಲಿ ತಿರುಗೇಟು ನೀಡಿದ್ದಾರೆ. ಮಾಜಿ ಮುಖ್ಯ ನ್ಯಾಯಮೂರ್ತಿ ಭೂಷಣ್ ಗವಾಯಿ ಅವರು ಇತ್ತೀಚೆಗೆ ಬಾಗೇಶ್ವರ್ ಧಾಮದ ಪಂಡಿತ್ ಧೀರೇಂದ್ರ ಕೃಷ್ಣ ಶಾಸ್ತ್ರಿ ಅವರನ್ನು ಭೇಟಿಯಾಗಿದ್ದಕ್ಕಾಗಿ ಶ್ಯಾಮ್ ಮಾನವ್ ಅವರನ್ನು ಟೀಕಿಸಿದ್ದರು. ಮುಖ್ಯಮಂತ್ರಿಗಳು ಈ ಟೀಕೆಯನ್ನು ತಳ್ಳಿಹಾಕುವ ಮೂಲಕ ಮಾನವ್ ಅವರ ಬೂಟಾಟಿಕೆಯನ್ನು ಬಯಲು ಮಾಡಿದ್ದಾರೆ.
ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಮುಂದೆ ಮಾತನಾಡುತ್ತಾ, ಭೂಷಣ್ ಗವಾಯಿ ಅವರು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಹೆಸರನ್ನು ತೆಗೆದುಕೊಳ್ಳಬೇಕೇ ಅಥವಾ ಬೇಡವೇ ಎಂಬುದನ್ನು ನಿರ್ಧರಿಸಲು ಶ್ಯಾಮ್ ಮಾನವ್ ಯಾರು? ಅವರು ಯಾರಿಗಾದರೂ ಪ್ರಮಾಣಪತ್ರ ನೀಡುವ ಅಧಿಕಾರಿಯೇ? ಇತ್ತೀಚಿನ ದಿನಗಳಲ್ಲಿ ಅವರನ್ನು ಯಾರೂ ಕೇಳುತ್ತಿಲ್ಲ, ಆದ್ದರಿಂದ ತಮ್ಮ ಅಂಗಡಿಗಳನ್ನು ನಡೆಸಲು ಮತ್ತು ಪ್ರಚಾರ ಪಡೆಯಲು ಅವರು ಪ್ರತಿದಿನ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಏನಿದು ಪ್ರಕರಣ?ಕೆಲವು ದಿನಗಳ ಹಿಂದೆ ಮಾಜಿ ಮುಖ್ಯ ನ್ಯಾಯಮೂರ್ತಿ ಭೂಷಣ್ ಗವಾಯಿ ಅವರು ಪಂಡಿತ್ ಧೀರೇಂದ್ರ ಕೃಷ್ಣ ಶಾಸ್ತ್ರಿ ಅವರನ್ನು ಭೇಟಿಯಾಗಿ ಅವರ ಆಶೀರ್ವಾದ ಪಡೆದಿದ್ದರು. ಈ ಬಗ್ಗೆ ಅಮರಾವತಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಶ್ಯಾಮ್ ಮಾನವ್, ಗವಾಯಿ ಅವರು ತಮ್ಮನ್ನು ಅಂಬೇಡ್ಕರ್ ವಿಚಾರಧಾರೆಯವರು ಎಂದು ಕರೆದುಕೊಳ್ಳುತ್ತಾರೆ, ಆದರೂ ಧೀರೇಂದ್ರ ಶಾಸ್ತ್ರಿಗಳ ಪಾದಗಳಿಗೆ ನಮಸ್ಕರಿಸುವುದು ಆಘಾತಕಾರಿಯಾಗಿದೆ. ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಹೆಸರನ್ನು ಹೇಳುವ ಹಕ್ಕನ್ನು ಅವರು ಈಗ ಕಳೆದುಕೊಂಡಿದ್ದಾರೆ ಎಂದಿದ್ದರು. ಈ ಹೇಳಿಕೆಯ ನಂತರ ಮಹಾರಾಷ್ಟ್ರದ ಜನತೆಯಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. |
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ