ತನಿಖೆಯಲ್ಲಿ ಕೃಪಾನಿಧಿ ಕಾಲೇಜಿನ ದುಷ್ಕೃತ್ಯ ಬಯಲು!
ಕೃಪಾನಿಧಿ ಕಾಲೇಜಿನಲ್ಲಿ ಇನ್ಮುಂದೆ ಯಾವುದೇ ಸರಕಾರಿ ಪರೀಕ್ಷೆಗಳನ್ನು ನಡೆಸದಂತೆ ಜಿಲ್ಲಾಧಿಕಾರಿಗಳಿಂದ ಸರಕಾರಕ್ಕೆ ಶಿಫಾರಸು

ಬೆಂಗಳೂರು – ನಗರದ ‘ಸಾಮಾನ್ಯ ಪ್ರವೇಶ ಪರೀಕ್ಷೆ’ ಅಥವಾ ‘ಸಿಇಟಿ’ (ಕಾಮನ್ ಎಂಟ್ರೆನ್ಸ್ ಟೆಸ್ಟ್) ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳ ಜನಿವಾರವನ್ನು ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕೆ.ಎ. ಜಗದೀಶ್ ಅವರು ಸರಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಇದರಲ್ಲಿ ಕೃಪಾನಿಧಿ ಕಾಲೇಜಿನ ದುಷ್ಕೃತ್ಯ ಬಯಲಾಗಿದೆ. ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರವನ್ನು ಉದ್ದೇಶಪೂರ್ವಕವಾಗಿಯೇ ತೆಗೆಸಲಾಗಿದೆ ಎಂಬುದು ತನಿಖೆಯಿಂದ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಕೃಪಾನಿಧಿ ಕಾಲೇಜನ್ನು ಇನ್ಮುಂದೆ ಪರೀಕ್ಷಾ ಕೇಂದ್ರಗಳ ಪಟ್ಟಿಯಿಂದ ಕೈಬಿಡಬೇಕೆಂದು ವರದಿಯಲ್ಲಿ ಶಿಫಾರಸು ಮಾಡಲಾಗಿದೆ. ‘ಮುಂದಿನ ವರ್ಷದಿಂದ ಈ ಕಾಲೇಜಿನಲ್ಲಿ ಸಿಇಟಿ ಸೇರಿದಂತೆ ಯಾವುದೇ ರೀತಿಯ ಸರಕಾರಿ ಪರೀಕ್ಷೆಗಳನ್ನು ನಡೆಸಬಾರದು’ ಎಂದು ಜಿಲ್ಲಾಧಿಕಾರಿಗಳು ಸರಕಾರಕ್ಕೆ ವರದಿ ನೀಡಿದ್ದಾರೆ.
೧. ಈ ಘಟನೆಗೆ ಸಂಬಂಧಿಸಿದಂತೆ ಸರಕಾರ ಈಗಾಗಲೇ ಕ್ರಮ ಕೈಗೊಂಡಿದೆ. ಪರೀಕ್ಷಾ ಕೇಂದ್ರಕ್ಕೆ ಅಧಿಕಾರಿಗಳನ್ನು ಕಳುಹಿಸಿ ಆಳವಾದ ತನಿಖೆ ನಡೆಸಲಾಗಿದ್ದು, ಕರ್ತವ್ಯ ಲೋಪ ಎಸಗಿದ ಮತ್ತು ವಿದ್ಯಾರ್ಥಿಗಳ ಭಾವನೆಗಳಿಗೆ ಧಕ್ಕೆ ತಂದ ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
೨. ವಿಶೇಷವೆಂದರೆ ಕಳೆದ ವರ್ಷವೂ ಇದೇ ಕಾಲೇಜಿನಲ್ಲಿ ಇಂತಹದ್ದೇ ಒಂದು ಅಹಿತಕರ ಘಟನೆ ನಡೆದಿತ್ತು ಎಂಬ ಆಘಾತಕಾರಿ ವಿಷಯವೂ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ‘ಕಳೆದ ಬಾರಿಯೂ ಇಂತಹದ್ದೇ ದೂರು ಬಂದಿತ್ತು. ಆದ್ದರಿಂದ ವಿವರವಾದ ತನಿಖಾ ವರದಿಯ ಆಧಾರದ ಮೇಲೆ ಅಂತಹ ಕೇಂದ್ರಗಳಲ್ಲಿ ಪರೀಕ್ಷೆಗಳನ್ನು ನಡೆಸಬಾರದು ಎಂಬ ವರದಿಯನ್ನು ನಾನು ಸರಕಾರಕ್ಕೆ ಸಲ್ಲಿಸಿದ್ದೇನೆ’ ಎಂದು ಜಿಲ್ಲಾಧಿಕಾರಿ ಜಗದೀಶ್ ಮಾಹಿತಿ ನೀಡಿದ್ದಾರೆ.
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)
ಗೋಪಾಲಗಡ ಸರಕಾರದ್ದಾಗಿದ್ದು ಎಲ್ಲರಿಗೂ ಮುಕ್ತವಾಗಿದೆ : ವದಂತಿಗಳನ್ನು ನಂಬಿ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ !
ಪಾಟಲಿಪುತ್ರ (ಬಿಹಾರ) ಇಲ್ಲಿ ಪ್ರಸಿದ್ಧ ಖಾನ್ ಸರ್ ಅವರ ತರಬೇತಿ ಕೇಂದ್ರದ ಮೇಲೆ ದಾಳಿ