ಭಾಜಪ ನಾಯಕನ ಮಗನಿಂದ ಶಾಲೆಯ ಗೆಳತಿಗೆ ಮದುವೆಯ ಆಮಿಷವೊಡ್ಡಿ ಲೈಂಗಿಕ ಶೋಷಣೆ ನಡೆಸಿದ ಪ್ರಕರಣ

ಬೆಂಗಳೂರು – ಕರ್ನಾಟಕ ಉಚ್ಚ ನ್ಯಾಯಾಲಯವು ಮಧ್ಯಂತರ ಆದೇಶವೊಂದರಲ್ಲಿ ಭಾಜಪ ನಾಯಕನ ಮಗನ ವಿರುದ್ಧ ದಾಖಲಾಗಿರುವ ಮೊಕದ್ದಮೆ ಮತ್ತು ಕೆಳ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿದೆ. ಈ ಯುವಕನ ಮೇಲೆ ತನ್ನ ಶಾಲಾ ದಿನಗಳ ಹಳೆಯ ಗೆಳತಿಗೆ ಮದುವೆಯ ಆಮಿಷವೊಡ್ಡಿ ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿದ ಆರೋಪವಿದೆ. ನ್ಯಾಯಾಲಯವು ತಡೆಯಾಜ್ಞೆ ನೀಡುವಾಗ, ಆರೋಪಿಯು ಸಂತ್ರಸ್ತ ಮಹಿಳೆ ಮತ್ತು ಅವರ ಸಂಬಂಧದಿಂದ ಜನಿಸಿದ ಮಗುವಿನ ಕಲ್ಯಾಣಕ್ಕಾಗಿ ಪ್ರತಿ ತಿಂಗಳು ೭೫ ಸಾವಿರ ರೂಪಾಯಿ ಜೀವನಾಂಶವನ್ನು ನೀಡುವಂತೆ ಆದೇಶಿಸಿದೆ.
೧. ಅರ್ಜಿದಾರನು ಆ ಮಗುವಿನ ಜೈವಿಕ ತಂದೆಯಾಗಿದ್ದಾನೆ ಎಂಬ ಸತ್ಯವನ್ನು ಒಪ್ಪಿಕೊಳ್ಳಲಾಗಿದೆ ಮತ್ತು ಪರೀಕ್ಷೆಯಲ್ಲೂ ಅದು ಸಾಬೀತಾಗಿದೆ ಎಂದು ನ್ಯಾಯಾಲಯವು ಹೇಳಿದೆ.
೨. ೨೨ ವರ್ಷದ ಆರೋಪಿಯು ಮೊಕದ್ದಮೆ ಮತ್ತು ವಿಚಾರಣೆಯನ್ನು ರದ್ದುಗೊಳಿಸುವಂತೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದನು. ಆರೋಪಿಯು ಮದುವೆಯಾಗಲು ಮತ್ತು ಮಗುವಿನ ಜವಾಬ್ದಾರಿಯನ್ನು ಹೊರಲು ನಿರಾಕರಿಸಿದ ನಂತರ ಸಂತ್ರಸ್ತೆಯು ೨೦೨೫ ರಲ್ಲಿ ದೂರು ದಾಖಲಿಸಿದ್ದರು.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ