ಮೂವರು ಆರೋಪಿಗಳ ಬಂಧನ

ಶ್ರೀನಗರ – ಜಮ್ಮು ಕಾಶ್ಮೀರ ಪೊಲೀಸರು ಕಳುವಾಗಿದ್ದ ಹಸುವನ್ನು ಕೇವಲ 6 ದಿನಗಳಲ್ಲಿ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಮತ್ತೊಬ್ಬನನ್ನು ವಶಕ್ಕೆ ಪಡೆಯಲಾಗಿದೆ.
ಲಭ್ಯವಿರುವ ಮಾಹಿತಿಯ ಪ್ರಕಾರ, ಏಪ್ರಿಲ್ 21 ರಂದು ತಡರಾತ್ರಿ ಆರೋಪಿಗಳು ಕತ್ತಲೆಯ ದುರುಪಯೋಗ ಪಡೆದು ಕೊಟ್ಟಿಗೆಯಿಂದ ಹಸುವನ್ನು ಕಳ್ಳತನ ಮಾಡಿ ಪರಾರಿಯಾಗಿದ್ದರು. ಮರುದಿನ ಬೆಳಿಗ್ಗೆ ಈ ಘಟನೆ ಬೆಳಕಿಗೆ ಬಂದ ತಕ್ಷಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಯಿತು. ಕಳ್ಳರನ್ನು ಹಿಡಿಯಲು ಕಟ್ರಾ-ರಿಯಾಸಿ ಪೊಲೀಸರು ಕೂಡಲೇ ವಿಶೇಷ ತಂಡವನ್ನು ರಚಿಸಿದರು. ಪೊಲೀಸರು ತಾಂತ್ರಿಕ ಕಣ್ಗಾವಲು ಮತ್ತು ತಮ್ಮ ಗುಪ್ತಚರ ಜಾಲದ ಸಹಾಯದಿಂದ ಕುಲ್ಗಾಮ್ನಲ್ಲಿ ಆರೋಪಿಗಳನ್ನು ಬಂಧಿಸಿದರು. ಈ ಕಾರ್ಯಾಚರಣೆಯ ವೇಳೆ ಪೊಲೀಸರು ಕಳುವಾಗಿದ್ದ ಹಸುವನ್ನು ರಕ್ಷಿಸಿದ್ದಾರೆ. ಇದರೊಂದಿಗೆ ಕೃತ್ಯಕ್ಕೆ ಬಳಸಿದ್ದ ಆಲ್ಟೋ ಕಾರನ್ನು ಕೂಡ ಪೊಲೀಸರು ಜಪ್ತಿ ಮಾಡಿದ್ದಾರೆ.
ಫ್ರಾನ್ಸ್ ಸರಕಾರವು ಇನ್ನು ಮುಂದೆ ‘ಶೂನ್ಯ ಸಹಿಷ್ಣುತೆ’ಯ ನೀತಿಯನ್ನು ಅಳವಡಿಸಿಕೊಳ್ಳಲಿ !
ಅಂಬರನಾಥದಲ್ಲಿ ಕಸದ ರಾಶಿಯಲ್ಲಿ ಗೋವಂಶದ ಅವಶೇಷಗಳು ಪತ್ತೆ!
ಬೆಂಗಳೂರಿನ 97 ಲಕ್ಷ ಮತದಾರರಲ್ಲಿ 3.5–4 ಲಕ್ಷ ಮತದಾರರು ಅಸಿಂಧು ಮತದಾರರಾಗಿರಬಹುದು!”
ಕೋರ್ಟ್ ಆದೇಶ: ಕಾಶಿಯಲ್ಲಿ ರೈಲ್ವೆ ಜಾಗದ ಮಸೀದಿ ತೆರವು
ಭಾವಪೂರ್ಣ ಧಾರ್ಮಿಕ ವಿಧಿಗಳೊಂದಿಗೆ ಸಂಪನ್ನಗೊಂಡ ಶ್ರೀ ರಾಜಮಾತಂಗಿ ಮಹಾಯಜ್ಞ !
ಪ್ರಬಲ ಪ್ರತಾಪ ಸಿಂಗ ಜುದೇವ ಅವರಿಗೆ ಪ್ರತಿಷ್ಠಿತ ‘ಹಿಂದೂ ಕೇಸರಿ’ ಪ್ರಶಸ್ತಿ ನೀಡಿ ಗೌರವ!