ಬಾಂಬ್ ಇಡುತ್ತಿದ್ದ ವ್ಯಕ್ತಿ ಸಾವು : ಭಯೋತ್ಪಾದನಾ ನಿಗ್ರಹ ದಳದಿಂದ ತನಿಖೆ ಪ್ರಾರಂಭ !

ಪಟಿಯಾಲಾ (ಪಂಜಾಬ) – ಇಲ್ಲಿನ ಶಂಭು ಮತ್ತು ರಾಜಪುರ ರೈಲ್ವೆ ನಿಲ್ದಾಣಗಳ ನಡುವಿನ ಮೀಸಲಾದ ‘ಸರಕು ಸಾಗಣೆ ರೈಲ್ವೆ ಹಳಿ’ಯ ಮೇಲೆ ಬಾಂಬ್ ಇಡುತ್ತಿದ್ದಾಗಲೇ ಅದು ಸ್ಫೋಟಗೊಂಡು, ಬಾಂಬ್ ಇಡುತ್ತಿದ್ದ ವ್ಯಕ್ತಿಯು ಮೃತಪಟ್ಟಿದ್ದಾನೆ. ಏಪ್ರಿಲ್ ೨೭ ರ ತಡರಾತ್ರಿ ಈ ಘಟನೆ ಸಂಭವಿಸಿದೆ. ಈ ಸ್ಫೋಟದಿಂದಾಗಿ ರೈಲ್ವೆ ಹಳಿಗೆ ದೊಡ್ಡ ಪ್ರಮಾಣದಲ್ಲಿ ಹಾನಿಯಾಗಿದೆ. ಘಟನಾ ಸ್ಥಳದಿಂದ ಅಜ್ಞಾತ ವ್ಯಕ್ತಿಯೊಬ್ಬನ ಛಿದ್ರಗೊಂಡ ಮೃತದೇಹವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಈ ವ್ಯಕ್ತಿಯು ರೈಲ್ವೆ ಹಳಿಯ ಮೇಲೆ ಬಾಂಬ್ ಇಡಲು ಪ್ರಯತ್ನಿಸುತ್ತಿರಬಹುದು ಮತ್ತು ಅದೇ ಸಮಯದಲ್ಲಿ ಬಾಂಬ್ ಸ್ಫೋಟಗೊಂಡಿದ್ದರಿಂದ ಅವನು ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಪಟಿಯಾಲಾದ ಪೊಲೀಸ್ ಅಧೀಕ್ಷಕರು ಮತ್ತು ಪೊಲೀಸ್ ಉಪಮಹಾನಿರೀಕ್ಷಕರು ದೊಡ್ಡ ಪೊಲೀಸ್ ಪಡೆಯೊಂದಿಗೆ, ಹಾಗೆಯೇ ಬಾಂಬ್ ಪತ್ತೆ ದಳದೊಂದಿಗೆ ಘಟನಾ ಸ್ಥಳಕ್ಕೆ ಧಾವಿಸಿದರು. ಪೊಲೀಸರು ಘಟನಾ ಸ್ಥಳದಿಂದ ಎರಡು ಮೋಟಾರ್ ಸೈಕಲಗಳು, ವಾಯರ್, ಇತರ ಸ್ಫೋಟಕ ಸಾಮಗ್ರಿಗಳು ಮತ್ತು ಒಂದು ಒಡೆದ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡಿದ್ದಾರೆ.
ಪ್ರಸ್ತುತ ಅಲ್ಲಿ ದುರಸ್ತಿ ಕಾರ್ಯಕ್ಕಾಗಿ ಒಂದು ಬದಿಯ ಹಳಿಯನ್ನು ಬಂದ್ ಮಾಡಲಾಗಿದ್ದರೂ, ಇನ್ನೊಂದು ಬದಿಯಿಂದ ರೈಲು ಸಂಚಾರ ಮುಂದುವರಿದಿದೆ. ಪೊಲೀಸರು ಸದ್ಯ ಎಲ್ಲಾ ಆಯಾಮಗಳಿಂದ ಈ ಘಟನೆಯ ತನಿಖೆ ನಡೆಸುತ್ತಿದ್ದು, ಶೀಘ್ರದಲ್ಲೇ ದೊಡ್ಡ ವಿಷಯವೊಂದು ಬಹಿರಂಗವಾಗಲಿದೆ ಎಂದು ಅವರು ಹೇಳಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ