
ಬೆಂಗಳೂರು – ಕಾಣೆಯಾದ ಹಸುಗಳನ್ನು ಹುಡುಕುವಂತಹ ಕೆಲಸಗಳಲ್ಲಿ ಸಮಯ ವ್ಯರ್ಥ ಮಾಡುವ ಬದಲು, ಗಂಭೀರ ಮತ್ತು ನೈಜ ಅಪರಾಧಗಳ ತನಿಖೆಯತ್ತ ಗಮನ ಹರಿಸಬೇಕು ಎಂದು ಕರ್ನಾಟಕ ಉಚ್ಚ ನ್ಯಾಯಾಲಯವು ಪ್ರಕರಣವೊಂದರ ವಿಚಾರಣೆಯ ಸಂದರ್ಭದಲ್ಲಿ ಪೊಲೀಸರಿಗೆ ಸೂಚನೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರು ಪ್ರಕರಣವೊಂದರಲ್ಲಿ ಕಾಣೆಯಾದ ಹಸುಗಳಿಗಾಗಿ ಹುಡುಕಾಟ ಆರಂಭಿಸಿದ್ದರು. ಈ ಪ್ರಕರಣದ ವಿಚಾರಣೆಯ ವೇಳೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಪೊಲೀಸರ ತನಿಖಾ ಆದ್ಯತೆಗಳ ಬಗ್ಗೆ ಪ್ರಶ್ನೆ ಎತ್ತುತ್ತಾ ಈ ಮೇಲಿನ ಸೂಚನೆಯನ್ನು ನೀಡಿದ್ದಾರೆ.
ಪೊಲೀಸರು ವಿವೇಚನೆಯಿಂದ ವರ್ತಿಸಬೇಕು!
ನ್ಯಾಯಮೂರ್ತಿಗಳು ಮಾತು ಮುಂದುವರೆಸುತ್ತಾ, “ಪೊಲೀಸರು ಏನು ಮಾಡುತ್ತಿದ್ದಾರೆ? ಅವರು ನೈಜ ಅಪರಾಧಗಳನ್ನು ಪತ್ತೆಹಚ್ಚಬೇಕು. ಅನೇಕ ಗಂಭೀರ ಅಪರಾಧಗಳು ಬಾಕಿ ಇರುವಾಗ, ಕಾಣೆಯಾದ ಹಸುಗಳನ್ನು ಹುಡುಕುವುದು ಪೊಲೀಸರ ಪ್ರಾಥಮಿಕ ಕೆಲಸವಾಗಲು ಸಾಧ್ಯವಿಲ್ಲ. ಹಲವು ಬಾರಿ ಕ್ಷುಲ್ಲಕ ದೂರುಗಳ ಮೇಲೆ ಪೊಲೀಸರು ಅನಗತ್ಯ ಸಮಯ ವ್ಯರ್ಥ ಮಾಡುತ್ತಾರೆ. ಇದರಿಂದಾಗಿ ಪ್ರಮುಖ ಪ್ರಕರಣಗಳ ತನಿಖೆ ವಿಳಂಬವಾಗುತ್ತದೆ.” ಕಾಣೆಯಾದ ಹಸುಗಳನ್ನು ಹುಡುಕುವಂತಹ ಪ್ರಕರಣಗಳಿಂದ ಪೊಲೀಸ್ ಪಡೆಯ ದಕ್ಷತೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಹಾಗೂ ಗಂಭೀರ ಪ್ರಕರಣಗಳ ಅಪರಾಧಿಗಳನ್ನು ಹಿಡಿಯಲು ಪೊಲೀಸರು ಹೆಚ್ಚಿನ ತತ್ಪರತೆ ತೋರಿಸುವುದು ಅಗತ್ಯವಾಗಿದೆ. ಹಸುಗಳು ಕಾಣೆಯಾಗುವಂತಹ ಪ್ರಕರಣಗಳನ್ನು ‘ಕ್ರಿಮಿನಲ್ ಪ್ರಕರಣ’ಗಳಾಗಿ ಪರಿಗಣಿಸುವಾಗ ಪೊಲೀಸರು ವಿವೇಚನೆಯಿಂದ ನಿರ್ಧಾರ ಕೈಗೊಳ್ಳಬೇಕು,” ಎಂದು ನ್ಯಾಯಾಲಯ ಹೇಳಿದೆ. ಈ ಹಿಂದೆಯೂ ಇತರ ಪ್ರಕರಣಗಳಲ್ಲಿ ಉಚ್ಚ ನ್ಯಾಯಾಲಯವು ಪೊಲೀಸರ ತನಿಖೆಯ ಮಂದಗತಿ ಮತ್ತು ಆದ್ಯತೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿತ್ತು.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ