ಗ್ರಾಮ ಬಿಟ್ಟು ತೊಲಗುವಂತೆ ಎಚ್ಚರಿಕೆ!

ಬಸ್ತಾರ (ಛತ್ತೀಸಗಢ) – ಜಿಲ್ಲೆಯ ರೇಟಾವಂದ ಗ್ರಾಮದ ಮುಗ್ಧ ಬಡ ಹಿಂದೂಗಳನ್ನು ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡಿದ ಕಾರಣಕ್ಕೆ ಗ್ರಾಮಸ್ಥರು ಪಾದ್ರಿಯೊಬ್ಬನಿಗೆ ಸರಿಯಾಗಿ ಧರ್ಮದೇಟು ನೀಡಿದ್ದಾರೆ. ಈ ಘಟನೆಯ ವಿಡಿಯೋವೊಂದು ಹೊರಬಂದಿದ್ದು, ಅದರಲ್ಲಿ ಗ್ರಾಮಸ್ಥರ ಆಕ್ರೋಶಕ್ಕೆ ಸಿಲುಕಿದ ಪಾದ್ರಿಯ ಅಂಗಿ ಹರಿದಿರುವುದು ಕಂಡುಬಂದಿದೆ. ಪುರುಷರು ಮತ್ತು ಮಹಿಳೆಯರ ಗುಂಪು ಈ ಪಾದ್ರಿಗೆ ಒದೆ, ಏಟು ಹಾಗೂ ಚಪ್ಪಲಿಗಳಿಂದ ಹೊಡೆಯುತ್ತಿರುವುದು ವಿಡಿಯೋದಲ್ಲಿ ಕಾಣಿಸುತ್ತಿದೆ.
ಘಟನಾವಳಿಯ ಪ್ರಕಾರ ಮೂಲತಃ ಒಡಿಶಾದವನಾದ ಈ ಪಾದ್ರಿ ದೀರ್ಘಕಾಲದಿಂದ ರೇಟಾವಂದ ಗ್ರಾಮದಲ್ಲಿ ವಾಸವಾಗಿದ್ದನು. ಅವನು ಸ್ಥಳೀಯ ಹಿಂದೂಗಳನ್ನು ಮತಾಂತರಗೊಳ್ಳಲು ಪ್ರಚೋದಿಸುತ್ತಿದ್ದನು. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಏಪ್ರಿಲ್ 26 ರಂದು ಗ್ರಾಮದಲ್ಲಿ ಸಭೆ ನಡೆಸಿ, ಪಾದ್ರಿಯು ತನ್ನ ಕುಟುಂಬದೊಂದಿಗೆ ಕೂಡಲೇ ಗ್ರಾಮ ಬಿಟ್ಟು ಹೋಗುವಂತೆ ಸೂಚಿಸಿದ್ದರು. ಆದರೆ ಪಾದ್ರಿಯು ಇದನ್ನು ನಿರ್ಲಕ್ಷಿಸಿದ ಕಾರಣ, ಕೊನೆಗೆ ಆಕ್ರೋಶಗೊಂಡ ಗ್ರಾಮಸ್ಥರು ಆತನಿಗೆ ಹೊಡೆದಿದ್ದಾರೆ.
ಪಾದ್ರಿ ಶೀಘ್ರದಲ್ಲೇ ಗ್ರಾಮ ಬಿಡಲಿದ್ದಾನೆ! – ಪೊಲೀಸರ ಭರವಸೆಪೊಲೀಸರು ಸಮಯಕ್ಕೆ ಸರಿಯಾಗಿ ಘಟನಾ ಸ್ಥಳಕ್ಕೆ ಆಗಮಿಸಿ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಪಾದ್ರಿಯು ಶೀಘ್ರವಾಗಿ ಗ್ರಾಮವನ್ನು ತೊರೆಯಬೇಕೆಂದು ಗ್ರಾಮಸ್ಥರು ಸತತವಾಗಿ ಆಗ್ರಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ಪಾದ್ರಿ ಖಂಡಿತವಾಗಿಯೂ ಗ್ರಾಮ ಬಿಟ್ಟು ಹೋಗಲಿದ್ದಾನೆ ಎಂದು ಪೊಲೀಸರು ಗ್ರಾಮಸ್ಥರಿಗೆ ಭರವಸೆ ನೀಡಿದ್ದಾರೆ. ಸಂಪಾದಕೀಯ ನಿಲುವುವಾಸ್ತವವಾಗಿ ಪೊಲೀಸರು ಪಾದ್ರಿಯನ್ನು ಬಂಧಿಸಿ ಅವನ ವಿರುದ್ಧ ಮತಾಂತರ ವಿರೋಧಿ ಕಾನೂನಿನ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕಿತ್ತು. ಹಾಗೆ ಮಾಡದ ಛತ್ತೀಸಗಢದ ಭಾಜಪ ಸರಕಾರವು ಸಂಬಂಧಿತ ಪೊಲೀಸರ ಮೇಲೆಯೇ ಈಗ ಕ್ರಮ ಕೈಗೊಳ್ಳಬೇಕು! |
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!