ಉತ್ತರ ಪ್ರದೇಶ, ಬಿಹಾರ ಮತ್ತು ಕರ್ನಾಟಕ ರಾಜ್ಯಗಳಲ್ಲಿ ಬಿರುಗಾಳಿ ಸಹಿತ ಮಳೆಗೆ ೩೨ ಮಂದಿ ಬಲಿ !

ನವ ದೆಹಲಿ – ಕಳೆದ ೧೫ ದಿನಗಳಿಂದ ದೇಶಾದ್ಯಂತ ಉಷ್ಣ ಅಲೆಯಿದೆ. ಇಂತಹ ಪರಿಸ್ಥಿತಿಯಲ್ಲಿ ಏಪ್ರಿಲ್ ೩೦ ರಂದು ದೇಶದ ಹಲವು ರಾಜ್ಯಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಿದೆ. ಆದಾಗ್ಯೂ ಇದರಲ್ಲಿ ಉತ್ತರ ಪ್ರದೇಶದಲ್ಲಿ ೧೭ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಬಿಹಾರದಲ್ಲಿ ೫, ಹಾಗೂ ಕರ್ನಾಟಕದ ಬೆಂಗಳೂರು ನಗರದಲ್ಲಿ ೧೦ ಮಂದಿ ಮೃತಪಟ್ಟಿದ್ದಾರೆ.

ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯ ‘ಚುರಾಹ್’ ಭಾಗದಲ್ಲಿ ಹಿಮಪಾತ ಸಂಭವಿಸಿ ಕೆಲವರು ಗಾಯಗೊಂಡಿದ್ದಾರೆ. ಇನ್ನೊಂದೆಡೆ ರಾಜಸ್ಥಾನ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಸೆಕೆಯಿಂದ ಯಾವುದೇ ಸಮಾಧಾನ ಸಿಕ್ಕಿಲ್ಲ. ಮಹಾರಾಷ್ಟ್ರದ ಚಂದ್ರಾಪುರ ದೇಶದ ಅತ್ಯಂತ ಬಿಸಿಯಾದ ಸ್ಥಳವೆಂದು ದಾಖಲಾಗಿದೆ. ಇಲ್ಲಿ ೪೪.೬ ಡಿಗ್ರಿ ತಾಪಮಾನ ದಾಖಲಾಗಿದ್ದರೆ, ರಾಜಸ್ಥಾನದ ಬಾಡಮೇರ್ ಮತ್ತು ಜೈಸಲ್ಮೇರ್‌ನಲ್ಲಿ ೪೪ ಡಿಗ್ರಿ ತಾಪಮಾನವಿತ್ತು.