
ವಾರಣಾಸಿ (ಉತ್ತರ ಪ್ರದೇಶ) – ವಾರಣಾಸಿಯಲ್ಲಿ ಶುಕ್ರವಾರದ ನಮಾಜ್ಗಿಂತ ಮೊದಲು ಜ್ಞಾನವಾಪಿ ಮತ್ತು ಕಾಶಿ ವಿಶ್ವನಾಥ ದೇವಾಲಯದ ಪ್ರವೇಶ ದ್ವಾರ ಸಂಖ್ಯೆ ೪ ರ ಹೊರಗೆ ಸ್ವಲ್ಪ ಸಮಯ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಜ್ಞಾನವಾಪಿ ಸಮೀಪದ ಗೋಡೆಯೊಂದರ ಮೇಲೆ ಮಧುಬನಿ ಶೈಲಿಯ ಚಿತ್ರವನ್ನು ಬಿಡಿಸಲಾಗಿತ್ತು, ಇದರಿಂದಾಗಿ ಈ ಉದ್ವಿಗ್ನತೆ ಉಂಟಾಯಿತು; ಆದರೆ ಅಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದ್ದರಿಂದ ಯಾವುದೇ ಅಹಿತಕರ ಘಟನೆ ಸಂಭವಿಸಲಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ವಾರಣಾಸಿ ಭೇಟಿಗೂ ಮುನ್ನ ಈ ಚಿತ್ರ ಬಿಡಿಸುವ ಕೆಲಸ ಮಾಡಲಾಗಿತ್ತು. ನಮಾಜ್ ಸಮಯದಲ್ಲಿ ಯಾವುದೇ ವಿರೋಧ ವ್ಯಕ್ತವಾಗದಿದ್ದರೂ ಮತ್ತು ನಮಾಜ್ ಶಾಂತಿಯುತವಾಗಿ ನಡೆದಿದ್ದರೂ, ಈ ಹಿಂದೆ ಇದ್ದ ಸ್ಥಿತಿಯನ್ನು ಬದಲಾಯಿಸುವ ಅಗತ್ಯವಿರಲಿಲ್ಲ ಎಂದು ಕೆಲವು ಜನರು ಹೇಳಿದರು. ಇಂತಹ ಕೆಲಸಗಳಿಂದ ಸಾಮಾಜಿಕ ಸೌಹಾರ್ದತೆಯ ಮೇಲೆ ಪರಿಣಾಮ ಬೀರಬಹುದು ಎಂದು ಅವರು ಅಭಿಪ್ರಾಯಪಟ್ಟರು.
ಭೂಮಿ ವಕ್ಫ್ಗೆ ಸೇರಿದ್ದೆಂದು ದಾವೆ ಮಾಡುತ್ತಾ ದೂರು ದಾಖಲು
ವಾರಣಾಸಿಯ ‘ಮುಫ್ತಿ-ಎ-ಬನಾರಸ್’ ಮೌಲಾನಾ ಅಬ್ದುಲ್ ಬಾತಿನ ನೋಮಾನಿ ಅವರು ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಭೂಮಿ ವಕ್ಫ್ಗೆ ಸೇರಿದ್ದಾಗಿದ್ದು ಮತ್ತು ಜ್ಞಾನವಾಪಿ ಸಮಿತಿಯ ಅನುಮತಿಯಿಲ್ಲದೆ ಅದರ ಮೇಲೆ ಚಿತ್ರ ಬಿಡಿಸಲಾಗಿದೆ ಎಂದು ಅವರು ಹೇಳಿದರು. ಈ ಬಗ್ಗೆ ಹಲವು ಬಾರಿ ಅಧಿಕಾರಿಗಳೊಂದಿಗೆ ಮಾತನಾಡಿದ್ದರೂ ಯಾರೂ ಗಮನ ಹರಿಸಲಿಲ್ಲ. ಮುಫ್ತಿ ಅವರು ಲಿಖಿತ ದೂರನ್ನು ಸಲ್ಲಿಸಿದ್ದು, ಚಿತ್ರವನ್ನು ತೆಗೆದುಹಾಕಲು ಮತ್ತೆ ಅಧಿಕಾರಿಗಳನ್ನು ಭೇಟಿ ಮಾಡಲಿದ್ದಾರೆ. ಪೊಲೀಸ್ ಉಪ ಆಯುಕ್ತ (ಕಾಶಿ) ಗೌರವ್ ಬನ್ಸ್ವಾಲ್ ಮಾತನಾಡಿ, ಈ ಚಿತ್ರದಲ್ಲಿ ಯಾವುದೇ ತಪ್ಪು ಅಥವಾ ಆಕ್ಷೇಪಾರ್ಹ ವಿಷಯವಿಲ್ಲ. ಇದು ಕೇವಲ ಒಂದು ಸಾಂಸ್ಕೃತಿಕ ಚಿತ್ರವಾಗಿದೆ. ಈ ಗೋಡೆಯು ಜ್ಞಾನವಾಪಿಯ ವ್ಯಾಪ್ತಿಗೆ ಬರುವುದಿಲ್ಲ. ಯಾರಾದರೂ ಕಾನೂನನ್ನು ಕೈಗೆತ್ತಿಕೊಳ್ಳಲು ಪ್ರಯತ್ನಿಸಿದರೆ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ