ಪ್ರಯಾಣಿಕನ ಬಂಧನ

ಚೆನ್ನೈ (ತಮಿಳುನಾಡು) – ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮೇ ೩ ರ ಬೆಳಿಗ್ಗೆ ಏರ್ ಅರೇಬಿಯಾ ವಿಮಾನವು ರನ್ವೇ ಮೇಲೆ ಇಳಿಯುತ್ತಿದ್ದಾಗ ಪ್ರಯಾಣಿಕನೊಬ್ಬ ತುರ್ತು ಬಾಗಿಲನ್ನು ತೆರೆದಿದ್ದಾನೆ. ಘಟನೆಯ ನಂತರ ಪೈಲಟ್ ತಕ್ಷಣವೇ ವಿಮಾನವನ್ನು ನಿಲ್ಲಿಸಿ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಆ ನಂತರ ಭದ್ರತಾ ಪಡೆ, ಬಾಂಬ್ ಪತ್ತೆ ದಳ ಮತ್ತು ಇತರ ಭದ್ರತಾ ಸಂಸ್ಥೆಗಳು ಸ್ಥಳಕ್ಕೆ ಧಾವಿಸಿದವು. ಭದ್ರತಾ ಸಿಬ್ಬಂದಿಗಳು ಆರೋಪಿ ಪ್ರಯಾಣಿಕನನ್ನು ಬಂಧಿಸಿದ್ದಾರೆ. ಮಹಮ್ಮದ್ ಶರೀಫ್ ಮಹಮ್ಮದ್ ನಜ್ಮುದ್ದೀನ್ (ವಯಸ್ಸು ೨೯ ವರ್ಷ) ಬಂಧಿತ ಆರೋಪಿ. ಈತ ತಮಿಳುನಾಡಿನ ಪುದುಕ್ಕೊಟ್ಟೈ ನಿವಾಸಿಯಾಗಿದ್ದಾನೆ. ಪ್ರಸ್ತುತ ಈತನ ವಿಚಾರಣೆ ನಡೆಯುತ್ತಿದ್ದು, ಆತನ ಮಾನಸಿಕ ಸ್ಥಿತಿಯನ್ನೂ ಸಹ ತಪಾಸಣೆ ಮಾಡಲಾಗುತ್ತಿದೆ. ಈ ಘಟನೆಯಿಂದಾಗಿ ಸ್ವಲ್ಪ ಸಮಯದವರೆಗೆ ವಿಮಾನ ನಿಲ್ದಾಣದ ಕಾರ್ಯಕಲಾಪಗಳಲ್ಲಿ ವ್ಯತ್ಯಯ ಉಂಟಾಯಿತು. ಈ ವಿಮಾನವು ಶಾರ್ಜಾದಿಂದ ಚೆನ್ನೈಗೆ ಬಂದಿತ್ತು ಮತ್ತು ಇದರಲ್ಲಿ ೨೩೧ ಪ್ರಯಾಣಿಕರಿದ್ದರು.
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)
ಗೋಪಾಲಗಡ ಸರಕಾರದ್ದಾಗಿದ್ದು ಎಲ್ಲರಿಗೂ ಮುಕ್ತವಾಗಿದೆ : ವದಂತಿಗಳನ್ನು ನಂಬಿ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ !
ಪಾಟಲಿಪುತ್ರ (ಬಿಹಾರ) ಇಲ್ಲಿ ಪ್ರಸಿದ್ಧ ಖಾನ್ ಸರ್ ಅವರ ತರಬೇತಿ ಕೇಂದ್ರದ ಮೇಲೆ ದಾಳಿ