ರಾಹುಲ್ ಗಾಂಧಿ ಅವರು ಸ್ವಾತಂತ್ರ್ಯವೀರ ಸಾವರ್ಕರ್ ಅವರ ಪಾದರಕ್ಷೆಯ ಧೂಳಿಗೂ ಸಮಾನರಲ್ಲ ಎಂದು ಹೇಳಿಕೆ ನೀಡಿದ್ದರು

ಘಾಜಿಯಾಬಾದ್ (ಉತ್ತರ ಪ್ರದೇಶ) / ಭಾಗ್ಯನಗರ (ತೆಲಂಗಾಣ) – ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ನ ನಾಯಕ ರಾಹುಲ ಗಾಂಧಿ ಅವರ ವಿರುದ್ಧ ಆಕ್ಷೇಪಾರ್ಹ ಭಾಷೆಯಲ್ಲಿ ಟೀಕೆ ಮಾಡಿದ ಪ್ರಕರಣದಲ್ಲಿ ತೆಲಂಗಾಣ ಪೊಲೀಸರು ದೂರದರ್ಶನದ ಪತ್ರಕರ್ತ ಅಶೋಕ ಶ್ರೀವಾಸ್ತವ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ತೆಲಂಗಾಣ ಪೊಲೀಸರು ಘಾಜಿಯಾಬಾದ್ನಲ್ಲಿರುವ ಶ್ರೀವಾಸ್ತವ ಅವರ ನಿವಾಸಕ್ಕೆ ಹೋಗಿ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಆ ಸಮಯದಲ್ಲಿ ಶ್ರೀವಾಸ್ತವ ಅವರು ಮನೆಯಲ್ಲಿ ಇರಲಿಲ್ಲ.
ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಕಲಂ ೩೫(೩) ರ ಅಡಿಯಲ್ಲಿ ನೋಟಿಸ್ ನೀಡಲು ಭಾಗ್ಯನಗರದ ಇಬ್ಬರು ಪೊಲೀಸ್ ಉಪನಿರೀಕ್ಷಕರ ತಂಡವು ಘಾಜಿಯಾಬಾದ್ನ ಲಿಂಕ್ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯ ಸೂರ್ಯನಗರ ಪ್ರದೇಶಕ್ಕೆ ತಲುಪಿತ್ತು.
ಅಶೋಕ್ ಶ್ರೀವಾಸ್ತವ ಏನು ಹೇಳಿದ್ದರು?
’ಡಿಡಿ ನ್ಯೂಸ್’ ವಾಹಿನಿಯ ಚರ್ಚೆಯೊಂದರಲ್ಲಿ ಭಾಜಪ ವಕ್ತಾರ ತುಹಿನ್ ಸಿನ್ಹಾ, ರಾಜಕೀಯ ವಿಶ್ಲೇಷಕ ಸೈಯದ್ ಜಾವೇದ್ ಮತ್ತು ಇತರ ಅತಿಥಿಗಳ ಉಪಸ್ಥಿತಿಯಲ್ಲಿ ಶ್ರೀವಾಸ್ತವ ಅವರು ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದರು. ಸ್ವಾತಂತ್ರ್ಯವೀರ ಸಾವರ್ಕರ್ ಅವರ ಕುರಿತು ಪ್ರಸ್ತಾಪಿಸುತ್ತಾ ಶ್ರೀವಾಸ್ತವ ಅವರು, ‘ನೀವು ಸಾವರ್ಕರ್ ಅವರ ಪಾದರಕ್ಷೆಯ ತುದಿಗೂ ಸಮಾನರಲ್ಲ. ನೀವು ಅವರ ಪಾದರಕ್ಷೆಯ ಧೂಳಿನ ಸಾವಿರದ ಒಂದು ಭಾಗದಷ್ಟೂ ಇಲ್ಲ. ರಾಹುಲ್ ಗಾಂಧಿ ಅವರು ವೀರ್ ಸಾವರ್ಕರ್ ಅವರ ಪಾದರಕ್ಷೆಯ ತಳಕ್ಕೆ ಅಂಟಿಕೊಂಡಿರುವ ಧೂಳಿನ ಕಣಕ್ಕೂ ಸಮಾನರಲ್ಲ’ ಎಂದು ಹೇಳಿದ್ದರು.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ