ನಸರಾಪುರ (ಮಹಾರಾಷ್ಟ್ರ): ಮೃತ ಬಾಲಕಿಯ ತಂದೆಯಿಂದ ರಾಜಕಾರಣಿಗಳಿಗೆ ಕರೆ
ಕಾಮುಕನಿಗೆ ಗಲ್ಲು ಶಿಕ್ಷೆಯಾಗಲಿ ಎಂದು ಆಗ್ರಹ!

ಪುಣೆ – ಭೋರ್ ತಾಲೂಕಿನ ನಸರಾಪುರ (ಮಹಾರಾಷ್ಟ್ರ)ದಲ್ಲಿ ೪ ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಘಟನೆಯ ನಂತರ ಹಲವು ರಾಜಕೀಯ ನಾಯಕರು ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಿ ಧೈರ್ಯ ತುಂಬುತ್ತಿದ್ದಾರೆ. ಆದರೆ ಈಗ ಸಂತ್ರಸ್ತ ಬಾಲಕಿಯ ತಂದೆ ಯಾವುದೇ ರಾಜಕೀಯ ನಾಯಕರನ್ನು ಭೇಟಿ ಮಾಡದಿರಲು ನಿರ್ಧರಿಸಿದ್ದಾರೆ. “ನನ್ನ ಮಗಳಿಗೆ ನ್ಯಾಯ ಸಿಗುವವರೆಗೆ ಯಾವುದೇ ರಾಜಕೀಯ ವ್ಯಕ್ತಿಗಳು ನಮ್ಮ ಪರಿವಾರದವರನ್ನು ಭೇಟಿಯಾಗಲು ಬರಬಾರದು,” ಎಂದು ಸಂತ್ರಸ್ತೆಯ ತಂದೆ ಹೇಳಿದ್ದಾರೆ. ಆರೋಪಿ ಭೀಮರಾವ್ ಕಾಂಬ್ಳೆಯನ್ನು ಮೇ ೭ ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
"Don't come for publicity, come with justice."
Pune: The father of a 4-year-old victim from Nasrapur (Bhor), slams "Photo-op" visits from politicians, demanding the death penalty instead.
The public has lost faith in politicians. This serves as a stark reminder that the… https://t.co/1Reitfykmq pic.twitter.com/nxtrZLdiab
— Sanatan Prabhat (@SanatanPrabhat) May 3, 2026
ರಾಜಕೀಯ ನಾಯಕರು ಭೇಟಿ ನೀಡುತ್ತಾರೆ, ಫೋಟೋ ತೆಗೆದುಕೊಳ್ಳುತ್ತಾರೆ ಮತ್ತು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಾರೆ. ವಾಸ್ತವದಲ್ಲಿ ಸಂತ್ರಸ್ತೆಗೆ ನ್ಯಾಯ ಕೊಡಿಸಲು ಯಾವುದೇ ದಿಟ್ಟ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ಆದ್ದರಿಂದ ಈ ತೋರಿಕೆಯ ಭೇಟಿಗಳನ್ನು ತಪ್ಪಿಸಬೇಕೆಂದು ಬಾಲಕಿಯ ತಂದೆ ನೋವು ವ್ಯಕ್ತಪಡಿಸಿದ್ದಾರೆ.
ಬಾಲಕಿಯ ತಂದೆ, “ನನ್ನ ಮಗಳಿಗೆ ನ್ಯಾಯ ಸಿಗುವವರೆಗೆ ನಾನು ಯಾವುದೇ ನಾಯಕರನ್ನು ಭೇಟಿ ಮಾಡುವುದಿಲ್ಲ,” ಎಂದು ಸ್ಪಷ್ಟಪಡಿಸಿದ್ದಾರೆ. ಈ ಘಟನೆಯನ್ನು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಗಂಭೀರವಾಗಿ ಪರಿಗಣಿಸಿದ್ದು, ಉಪಮುಖ್ಯಮಂತ್ರಿ ಶಿಂದೆ ಅವರು ತಕ್ಷಣವೇ ಪುಣೆ ಗ್ರಾಮಾಂತರ ಪೊಲೀಸ್ ಅಧೀಕ್ಷಕ ಸಂದೀಪ್ ಗಿಲ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ.
ನಸರಾಪುರ (ಮಹಾರಾಷ್ಟ್ರ) ಘಟನೆಯ ತನಿಖೆಗೆ ಎಸ್ಐಟಿ (SIT) ರಚನೆ!
ಮುಖ್ಯಮಂತ್ರಿಯವರು ವಿಶೇಷ ತನಿಖಾ ತಂಡವನ್ನು (SIT) ರಚಿಸುವುದಾಗಿ ಘೋಷಿಸಿದ್ದು, ಈ ತಂಡದಲ್ಲಿ ೬ ಸದಸ್ಯರಿದ್ದಾರೆ. ಈ ೬ ಸದಸ್ಯರಲ್ಲಿ ಇಬ್ಬರು ಮಹಿಳಾ ಪೊಲೀಸರು ಇರಲಿದ್ದಾರೆ. |
ಅಪರಾಧ ಒಪ್ಪಿಕೊಂಡ ಆರೋಪಿ!
“ದನದ ಕೊಟ್ಟಿಗೆಯಲ್ಲಿರುವ ಹಸುವಿನ ಕರುವನ್ನು ತೋರಿಸುತ್ತೇನೆ” ಎಂದು ಹೇಳಿ ಬಾಲಕಿಯನ್ನು ಕೊಟ್ಟಿಗೆಗೆ ಕರೆದೊಯ್ದಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ಕೊಟ್ಟಿಗೆಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ, ಪುರಾವೆಗಳನ್ನು ನಾಶಪಡಿಸಲು ಹತ್ಯೆ ಮಾಡಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ಆರೋಪಿ ಭೀಮರಾವ್ ಕಾಂಬ್ಳೆ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯು ಯಾವಾಗಲೂ ಚಿಕ್ಕ ಹೆಣ್ಣುಮಕ್ಕಳ ಮೇಲೆ ಕೆಟ್ಟ ದೃಷ್ಟಿ ಹೊಂದಿದ್ದ ಎಂಬ ಮಾಹಿತಿ ಪೊಲೀಸರಿಂದ ಲಭ್ಯವಾಗಿದೆ.

ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !