ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕರ ವಿರುದ್ಧ ದೂರು ದಾಖಲು !

ನಾಗಪುರ – ‘ನಮ್ಮನ್ನು ಹಿಂದೂ ರಾಷ್ಟ್ರವೆಂದು ಘೋಷಿಸಲು ಹೇಳುತ್ತಾರೆ; ಆದರೆ ನಾವು ಹೇಳುವುದೇನೆಂದರೆ, ಭಾರತವು ಈಗಾಗಲೇ ಹಿಂದೂ ರಾಷ್ಟ್ರವೇ ಆಗಿದೆ, ಅದನ್ನು ಘೋಷಿಸುವ ಅಗತ್ಯವೇ ಇಲ್ಲ’, ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ.ಪೂ. ಸರಸಂಘಚಾಲಕರಾದ ಡಾ. ಮೋಹನ್ ಜಿ ಭಾಗವತ್ ಅವರು ಕೆಲವು ದಿನಗಳ ಹಿಂದೆ ಇಲ್ಲಿನ ಕಾರ್ಯಕ್ರಮವೊಂದರಲ್ಲಿ ಮಾರ್ಗದರ್ಶನ ನೀಡಿದ್ದರು. ಈ ಪ್ರಕರಣದಲ್ಲಿ ಅವರ ವಿರುದ್ಧ ನಾಗಪುರದ ಸಾಮಾಜಿಕ ಕಾರ್ಯಕರ್ತ ಜನಾರ್ದನ್ ಮೂನ್ ಅವರು ಪೊಲೀಸರಿಗೆ ಲಿಖಿತ ದೂರನ್ನು ನೀಡಿದ್ದಾರೆ. ‘ಸರಸಂಘಚಾಲಕರ ಹೇಳಿಕೆಯು ಸಂವಿಧಾನದ ಜಾತ್ಯತೀತತೆ, ಸಮಾನತೆ, ಸರ್ವಧರ್ಮ ಸಮಭಾವ ಮತ್ತು ರಾಷ್ಟ್ರೀಯ ಏಕತೆಯ ಮೂಲಭೂತ ತತ್ವಗಳಿಗೆ ವಿರುದ್ಧವಾಗಿದೆ. ಇದರಿಂದ ಸಮಾಜದಲ್ಲಿ ಧಾರ್ಮಿಕ ಧ್ರುವೀಕರಣ ಮತ್ತು ದ್ವೇಷ ನಿರ್ಮಾಣವಾಗುವ ಸಾಧ್ಯತೆಯಿದೆ’, ಎಂದು ದೂರುದಾರರು ಹೇಳಿದ್ದಾರೆ.
Nagpur: Complaint filed against the Sarsanghchalak of the RSS
Claim: Calling India a Hindu Rashtra is “anti-constitutional.”
The Congress party altered the original Constitution written by Dr. Babasaheb Ambedkar to insert the words ‘Secularism’ and ‘Socialism.’
Does the… pic.twitter.com/O27Jy3HRdz
— Sanatan Prabhat (@SanatanPrabhat) May 3, 2026
ದೂರಿನಲ್ಲಿ ಮುಂದೆ ಹೀಗೆ ಹೇಳಲಾಗಿದೆ,
೧. ಭಾರತವನ್ನು ಒಂದು ನಿರ್ದಿಷ್ಟ ಧರ್ಮದೊಂದಿಗೆ ಜೋಡಿಸುವ ಪ್ರಯತ್ನವು ಸಂವಿಧಾನದ ಜಾತ್ಯತೀತ ತತ್ವಗಳಿಗೆ ಅಸಂಗತವಾಗಿದ್ದು, ಇದು ಸ್ವಾತಂತ್ರ್ಯ ಹೋರಾಟದ ಬಲಿದಾನ, ಸಾಂವಿಧಾನಿಕ ಮೌಲ್ಯಗಳು ಮತ್ತು ಪ್ರಜಾಪ್ರಭುತ್ವದ ಮೂಲ ಆತ್ಮಕ್ಕೆ ಧಕ್ಕೆ ತರುವಂತದ್ದಾಗಿದೆ.
೨. ಭಾರತವು ವಿವಿಧ ಧರ್ಮ, ಭಾಷೆ, ಸಂಸ್ಕೃತಿ ಮತ್ತು ಪರಂಪರೆಗಳ ದೇಶವಾಗಿದ್ದು, ಸಂವಿಧಾನವು ನೀಡಿದ ‘ಜಾತ್ಯತೀತ ರಾಷ್ಟ್ರ’ ಎಂಬ ಪರಿಕಲ್ಪನೆಯು ದೇಶದ ಐಕ್ಯತೆಯ ಮೂಲಾಧಾರವಾಗಿದೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ