
ಮುಂಬಯಿ – ಎಂ.ಕೆ. ಸ್ಟಾಲಿನ್ ಈಗ ತಮಿಳುನಾಡಿನ ಮಾಜಿ ಮುಖ್ಯಮಂತ್ರಿಯಾಗಿದ್ದಾರೆ. ಅವರ ಸ್ವಂತ ಕ್ಷೇತ್ರದಲ್ಲಿಯೇ ಅವರ ಸೋಲಾಗಿದೆ. ಅವರ ಮಗ ಉದಯನಿಧಿ ಸ್ಟಾಲಿನ್ ಸೆಪ್ಟೆಂಬರ್ 2023 ರಲ್ಲಿ ಸನಾತನ ಧರ್ಮವನ್ನು ಮುಗಿಸುವ (ನಿರ್ಮೂಲನೆ ಮಾಡುವ) ಹೇಳಿಕೆ ನೀಡಿದ್ದರು. ಸನಾತನ ಧರ್ಮವು ಡೆಂಗ್ಯೂ ಮತ್ತು ಮಲೇರಿಯಾ ರೋಗಗಳಂತಿದೆ ಎಂದು ಅವರು ಹೇಳಿದ್ದರು! ಇದರ ಮೂಲಕ ಅವರು ಸನಾತನ ಧರ್ಮವನ್ನು ತೀವ್ರವಾಗಿ ಅವಮಾನಿಸಿದ್ದರು. ಇದರ ವಿರುದ್ಧ ದೇಶಾದ್ಯಂತ ಜನಾಕ್ರೋಶ ಭುಗಿಲೆದ್ದಿತು. ಇಂದು ತಮಿಳುನಾಡಿನ ಎಲ್ಲ ಸನಾತನ ಧರ್ಮೀಯ ಬಂಧು-ಭಗಿನಿಯರು ಸನಾತನ ಧರ್ಮದ ಸಂಘಟಿತ ಶಕ್ತಿಯನ್ನು ಈ ಸ್ಟಾಲಿನ್ ಕುಟುಂಬಕ್ಕೆ ತೋರಿಸಿಕೊಟ್ಟಿದ್ದಾರೆ ಎಂದು ಸನಾತನ ಸಂಸ್ಥೆಯ ವಕ್ತಾರ ಶ್ರೀ. ಅಭಯ ವರ್ತಕ್ ಅವರು ತಮಿಳುನಾಡು ಚುನಾವಣಾ ಫಲಿತಾಂಶದ ಕುರಿತು ಸ್ಪಷ್ಟ ನಿಲುವು ವ್ಯಕ್ತಪಡಿಸಿದ್ದಾರೆ.
ಶ್ರೀ. ವರ್ತಕ್ ಅವರು ಮುಂದುವರಿದು, ಸಾಮಾನ್ಯವಾಗಿ ಸನಾತನ ಸಂಸ್ಥೆಯು ಯಾವುದೇ ರೀತಿಯ ರಾಜಕೀಯ ವಿದ್ಯಮಾನಗಳ ಕುರಿತು ಹೇಳಿಕೆ ನೀಡುವುದಿಲ್ಲ, ಆದರೆ ಸನಾತನ ಧರ್ಮೀಯರ ಬಗ್ಗೆ ಈ ಕುಟುಂಬ ಮತ್ತು ಡಿಎಂಕೆ ಪಕ್ಷವು ಒಂದು ನಿಲುವನ್ನು ತೆಗೆದುಕೊಂಡಿದ್ದರಿಂದ ಇಂದು ನಾವು ಇದರ ಬಗ್ಗೆ ಖಂಡಿತವಾಗಿ ಪ್ರತಿಕ್ರಿಯೆ ನೀಡಬೇಕೆನಿಸುತ್ತಿದೆ ಎಂದರು. ತಮಿಳುನಾಡಿನ ಧರ್ಮಪ್ರೇಮಿ ಜನತೆಯನ್ನು ನಾವು ಅಭಿನಂದಿಸುತ್ತೇವೆ!
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ