
ಮುಂಬಯಿ – ಎಂ.ಕೆ. ಸ್ಟಾಲಿನ್ ಈಗ ತಮಿಳುನಾಡಿನ ಮಾಜಿ ಮುಖ್ಯಮಂತ್ರಿಯಾಗಿದ್ದಾರೆ. ಅವರ ಸ್ವಂತ ಕ್ಷೇತ್ರದಲ್ಲಿಯೇ ಅವರ ಸೋಲಾಗಿದೆ. ಅವರ ಮಗ ಉದಯನಿಧಿ ಸ್ಟಾಲಿನ್ ಸೆಪ್ಟೆಂಬರ್ 2023 ರಲ್ಲಿ ಸನಾತನ ಧರ್ಮವನ್ನು ಮುಗಿಸುವ (ನಿರ್ಮೂಲನೆ ಮಾಡುವ) ಹೇಳಿಕೆ ನೀಡಿದ್ದರು. ಸನಾತನ ಧರ್ಮವು ಡೆಂಗ್ಯೂ ಮತ್ತು ಮಲೇರಿಯಾ ರೋಗಗಳಂತಿದೆ ಎಂದು ಅವರು ಹೇಳಿದ್ದರು! ಇದರ ಮೂಲಕ ಅವರು ಸನಾತನ ಧರ್ಮವನ್ನು ತೀವ್ರವಾಗಿ ಅವಮಾನಿಸಿದ್ದರು. ಇದರ ವಿರುದ್ಧ ದೇಶಾದ್ಯಂತ ಜನಾಕ್ರೋಶ ಭುಗಿಲೆದ್ದಿತು. ಇಂದು ತಮಿಳುನಾಡಿನ ಎಲ್ಲ ಸನಾತನ ಧರ್ಮೀಯ ಬಂಧು-ಭಗಿನಿಯರು ಸನಾತನ ಧರ್ಮದ ಸಂಘಟಿತ ಶಕ್ತಿಯನ್ನು ಈ ಸ್ಟಾಲಿನ್ ಕುಟುಂಬಕ್ಕೆ ತೋರಿಸಿಕೊಟ್ಟಿದ್ದಾರೆ ಎಂದು ಸನಾತನ ಸಂಸ್ಥೆಯ ವಕ್ತಾರ ಶ್ರೀ. ಅಭಯ ವರ್ತಕ್ ಅವರು ತಮಿಳುನಾಡು ಚುನಾವಣಾ ಫಲಿತಾಂಶದ ಕುರಿತು ಸ್ಪಷ್ಟ ನಿಲುವು ವ್ಯಕ್ತಪಡಿಸಿದ್ದಾರೆ.
ಶ್ರೀ. ವರ್ತಕ್ ಅವರು ಮುಂದುವರಿದು, ಸಾಮಾನ್ಯವಾಗಿ ಸನಾತನ ಸಂಸ್ಥೆಯು ಯಾವುದೇ ರೀತಿಯ ರಾಜಕೀಯ ವಿದ್ಯಮಾನಗಳ ಕುರಿತು ಹೇಳಿಕೆ ನೀಡುವುದಿಲ್ಲ, ಆದರೆ ಸನಾತನ ಧರ್ಮೀಯರ ಬಗ್ಗೆ ಈ ಕುಟುಂಬ ಮತ್ತು ಡಿಎಂಕೆ ಪಕ್ಷವು ಒಂದು ನಿಲುವನ್ನು ತೆಗೆದುಕೊಂಡಿದ್ದರಿಂದ ಇಂದು ನಾವು ಇದರ ಬಗ್ಗೆ ಖಂಡಿತವಾಗಿ ಪ್ರತಿಕ್ರಿಯೆ ನೀಡಬೇಕೆನಿಸುತ್ತಿದೆ ಎಂದರು. ತಮಿಳುನಾಡಿನ ಧರ್ಮಪ್ರೇಮಿ ಜನತೆಯನ್ನು ನಾವು ಅಭಿನಂದಿಸುತ್ತೇವೆ!
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ನಾಗಪುರ: ಮಾನಸಿಕ ಒತ್ತಡದಿಂದಾಗಿ ‘ನೀಟ್’ ಪರೀಕ್ಷೆಯ ವಿದ್ಯಾರ್ಥಿನಿ ಆತ್ಮಹತ್ಯೆ
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !