ಕೇಂದ್ರ ಕಾನೂನು ಸಚಿವ ಅರ್ಜುನ ರಾಮ ಮೇಘವಾಲ್ ಅವರಿಂದ ಹಿಂದೂ ಜನಜಾಗೃತಿ ಸಮಿತಿಗೆ ಭರವಸೆ

ರಾಂಚಿ (ಜಾರ್ಖಂಡ) – ನಾಸಿಕ್ (ಮಹಾರಾಷ್ಟ್ರ)ದಲ್ಲಿರುವ ಟಿ.ಸಿ.ಎಸ್. ನಂತಹ ಪ್ರತಿಷ್ಠಿತ ಬಹುರಾಷ್ಟ್ರೀಯ ಸಂಸ್ಥೆಯಲ್ಲಿ ಅನೇಕ ಹಿಂದೂ ಮಹಿಳಾ ಉದ್ಯೋಗಿಗಳ ಲೈಂಗಿಕ ಶೋಷಣೆ, ಮತಾಂತರಕ್ಕಾಗಿ ಒತ್ತಡ, ಬಲವಂತವಾಗಿ ಗೋಮಾಂಸ ತಿನ್ನಿಸುವುದು ಮತ್ತು ನಮಾಜ್ ಮಾಡಲು ಒತ್ತಾಯಿಸುವಂತಹ ಭಯಾನಕ ಘಟನೆಗಳು ಬೆಳಕಿಗೆ ಬಂದಿವೆ. ಇವು ಕೇವಲ ಒಂದು ಸ್ಥಳಕ್ಕೆ ಸೀಮಿತವಾಗಿಲ್ಲ. ಇದು ದೇಶವ್ಯಾಪಿ ನಡೆಯುತ್ತಿರುವ ಕಾರ್ಪೊರೇಟ್ ಜಿಹಾದ್ನ ಭಾಗವಾಗಿರಬಹುದು. ಈ ಗಂಭೀರ ವಿಷಯಕ್ಕೆ ಸಂಬಂಧಿಸಿದಂತೆ ಹಿಂದೂ ಜನಜಾಗೃತಿ ಸಮಿತಿಯ ಈಶಾನ್ಯ ಭಾರತ ರಾಜ್ಯ ಸಮನ್ವಯಕಾರರಾದ ಶ್ರೀ. ಶಂಭು ಗವಾರೆ ಅವರು ಕೇಂದ್ರ ವಿಧಿ ಮತ್ತು ನ್ಯಾಯ ಸಚಿವ (ಸ್ವತಂತ್ರ ಉಸ್ತುವಾರಿ) ಹಾಗೂ ಕೇಂದ್ರ ಸಂಸ್ಕೃತಿ ಮತ್ತು ಸಂಸದೀಯ ಕಾರ್ಯ ಸಚಿವ ಶ್ರೀ. ಅರ್ಜುನ ರಾಮ ಮೇಘವಾಲ್ ಮತ್ತು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶ್ರೀಮತಿ ಅನ್ನಪೂರ್ಣ ದೇವಿ ಅವರನ್ನು ಭೇಟಿ ಮಾಡಿದರು.

ಈ ಪ್ರಕರಣದ ತನಿಖೆಗಾಗಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕೇಂದ್ರ ರಕ್ಷಣಾ ರಾಜ್ಯ ಸಚಿವ ಶ್ರೀ. ಸಂಜಯ ಸೇಠ, ವಿಶ್ವ ಹಿಂದೂ ಪರಿಷತ್ತಿನ ಜಾರ್ಖಂಡ ರಾಜ್ಯ ಅಧ್ಯಕ್ಷ ಶ್ರೀ. ಚಂದ್ರಕಾಂತ ರಾಯಪತ, ಸಮಿತಿಯ ಪೂಜಾ ಚೌಹಾಣ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು. ಈ ವೇಳೆ ಭರವಸೆ ನೀಡಿದ ಕೇಂದ್ರ ಸಚಿವ ಶ್ರೀ. ಅರ್ಜುನ ಮೇಘವಾಲ್ ಅವರು, ಬಹುರಾಷ್ಟ್ರೀಯ ಸಂಸ್ಥೆಗಳಲ್ಲಿನ ಕಾರ್ಪೊರೇಟ್ ಜಿಹಾದ್ ಮತ್ತು ಮತಾಂತರದ ವಿಷಯಗಳು ಗಂಭೀರವಾಗಿದ್ದು, ಈ ಬಗ್ಗೆ ಕೇಂದ್ರ ಗೃಹ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.
ಇದೇ ವಿಷಯವಾಗಿ ರಾಂಚಿ ಮಹಾನಗರ ಪಾಲಿಕೆಯ ಮೇಯರ್ ರೋಶನಿ ಖಲಖೋ ಮತ್ತು ಉಪಮೇಯರ್ ಶ್ರೀ. ನೀರಜ ಕುಮಾರ್ ಅವರಿಗೂ ಮನವಿ ಸಲ್ಲಿಸಲಾಯಿತು.
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ
ಕ್ಷುಲ್ಲಕ ಕಾರಣಕ್ಕೆ ಹಿಂದೂ ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಮತಾಂಧ ರಿಕ್ಷಾ ಚಾಲಕ!
ಆದಿವಾಸಿಗಳ ಮನೆ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ: ಪೊಲೀಸ್ ಮಧ್ಯಸ್ಥಿಕೆ ಬಳಿಕ ಕೆಲಸ ಪುನರಾರಂಭ