
ನವದೆಹಲಿ – ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ಸೈನಿಕರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮನೆಯ ಮೇಲೆ ದಾಳಿ ಮಾಡಿದ್ದಾರೆ ಎಂಬ ಅಪಪ್ರಚಾರವನ್ನು ಪಾಕಿಸ್ತಾನವು ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿಸಿದೆ. ಈ ಸುದ್ದಿಗಳು ಸಂಪೂರ್ಣವಾಗಿ ಸುಳ್ಳು ಮತ್ತು ನಕಲಿ ಆಗಿವೆ. ಕೋಲಕಾತಾ ನಗರಕ್ಕೆ ಸೇನೆ ನುಗ್ಗಿರುವ ಅಥವಾ ಮುಖ್ಯಮಂತ್ರಿಗಳ ಮೇಲೆ ದಾಳಿ ನಡೆದಿರುವ ಯಾವುದೇ ಘಟನೆ ಸಂಭವಿಸಿಲ್ಲ ಎಂದು ಪತ್ರ ಮಾಹಿತಿ ಕಾರ್ಯಾಲಯ (PIB) ಮತ್ತು ಕೋಲಕಾತಾ ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಇದೆಲ್ಲವೂ ವ್ಯವಸ್ಥಿತವಾಗಿ ರೂಪಿಸಿದ ಪಿತೂರಿಯ ಭಾಗವಾಗಿ ಹಬ್ಬಿಸಲಾದ ಅಪಪ್ರಚಾರವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ದಿಕ್ಕು ತಪ್ಪಿಸುವ ಮಾಹಿತಿಯನ್ನು ಹರಡುವವರ ವಿರುದ್ಧ ಪೊಲೀಸರು ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ. ಸಾರ್ವಜನಿಕರು ಇಂತಹ ಯಾವುದೇ ವದಂತಿಗಳನ್ನು ನಂಬಬಾರದು ಎಂದು ಮನವಿ ಮಾಡಲಾಗಿದೆ.
Pakistan propaganda falsely claimed that the Indian Army attacked Mamata Banerjee’s residence
This exposes the absurd & deceptive tactics of Pakistan. A nation indulging in such propaganda must be answered firmly in the language it understands#Bengalpic.twitter.com/gfZEZGnUPe
— Sanatan Prabhat (@SanatanPrabhat) May 6, 2026
ಮಾಡಲಾದ ದಾವೆ ಏನು?
ಸಾಮಾಜಿಕ ಜಾಲತಾಣದ ‘ಅನುಷಿ ತಿವಾರಿ’ ಎಂಬ ಹೆಸರಿನ ಖಾತೆಯಿಂದ, ಬಹಳ ದೊಡ್ಡ ಸಂಖ್ಯೆಯಲ್ಲಿ ಭಾರತೀಯ ಸೇನೆಯು ಕೋಲಕಾತಾ ಪ್ರವೇಶಿಸುತ್ತಿದೆ. ಸಾರ್ವಜನಿಕರು ಸೇನೆಯ ಹಾದಿಯನ್ನು ತಡೆದಿದ್ದಾರೆ. ಈ ಸಮಯದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ ಸೈನಿಕರು ಮಮತಾ ಬ್ಯಾನರ್ಜಿ ಅವರ ಮನೆಯ ಮೇಲೆ ದಾಳಿ ಮಾಡಿದ್ದು, ಅವರು ಗಾಯಗೊಂಡಿದ್ದಾರೆ. ಕೇಂದ್ರ ಸರಕಾರವು ವಿದೇಶಿ ರಾಯಭಾರ ಕಚೇರಿಗಳನ್ನು ಮುಚ್ಚಲು ಆದೇಶಿಸಿದೆ’, ಎಂದು ಹೇಳಲಾಗಿತ್ತು.
ಪಾಕಿಸ್ತಾನದ ಪಿತೂರಿ!
ಈ ಎಲ್ಲಾ ದಾವೆಗಳು ಸುಳ್ಳು ಎಂದು ಪತ್ರ ಮಾಹಿತಿ ಕಾರ್ಯಾಲಯ ತಿಳಿಸಿದೆ. ಇದು ಪಾಕಿಸ್ತಾನಿ ವ್ಯವಸ್ಥೆಯಿಂದ ನಡೆಸಲ್ಪಡುತ್ತಿರುವ ಅಪಪ್ರಚಾರ ಎಂದು ಅವರು ಹೇಳಿದ್ದಾರೆ. ನಗರದಲ್ಲಿ ಪರಿಸ್ಥಿತಿ ಸಂಪೂರ್ಣವಾಗಿ ಹತೋಟಿಯಲ್ಲಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಹಳೆಯ ಮತ್ತು ಈ ಘಟನೆಗೆ ಸಂಬಂಧವಿಲ್ಲದ ವೀಡಿಯೊಗಳನ್ನು ತಪ್ಪಾದ ರೀತಿಯಲ್ಲಿ ಜೋಡಿಸಿ ಶಾಂತಿ ಭಂಗಗೊಳಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!
ನಾವು ಹಿಂದೂ ಧರ್ಮದ ಮೇಲಿನ ದ್ವೇಷದ ವಿರುದ್ಧ ದೃಢವಾಗಿ ನಿಲ್ಲಬೇಕು !
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine
ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ ವಿಚಾರದಲ್ಲಿ ಪಾಕಿಸ್ತಾನದಿಂದ ಕಾಶ್ಮೀರ ಗಡಿಯಲ್ಲಿ 35 ಡ್ರೋನ್ ವಿರೋಧಿ ಘಟಕಗಳ ನಿಯೋಜನೆ! : Indus Water Treaty Crisis
‘ಮಾನವಾಧಿಕಾರ ಉಲ್ಲಂಘನೆಯಾದರೆ ಭಾರತದ ಮೇಲೆ ಟೀಕಿಸಲು ಹಿಂಜರಿಯುವುದಿಲ್ಲ!'(ವಂತೆ) : US Lawmakers
ಕ್ಷುಲ್ಲಕ ಕಾರಣಕ್ಕೆ ಹಿಂದೂ ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಮತಾಂಧ ರಿಕ್ಷಾ ಚಾಲಕ!