ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ: ಇದುವರೆಗೆ ೪೩೩ ಜನರ ಬಂಧನ!

ಕೋಲಕಾತಾ (ಬಂಗಾಳ) – ರಾಜ್ಯ ವಿಧಾನಸಭೆಯ ಚುನಾವಣೆಯಲ್ಲಿ ಭಾಜಪ ಮಮತಾ ಬ್ಯಾನರ್ಜಿ ಅವರನ್ನು ಹೀನಾಯವಾಗಿ ಸೋಲಿಸಿದ ನಂತರ, ತೃಣಮೂಲ ಕಾಂಗ್ರೆಸ್ಸಿನ ಗೂಂಡಾಗಳು ನಡೆಸಿದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ ೨೦೦ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, ೪೩೩ ಜನರನ್ನು ಬಂಧಿಸಿದ್ದಾರೆ ಎಂದು ಬಂಗಾಳದ ಪೊಲೀಸ್ ಮಹಾನಿರ್ದೇಶಕ ಸಿದ್ಧನಾಥ ಗುಪ್ತಾ ಮಾಹಿತಿ ನೀಡಿದ್ದಾರೆ. ಕಳೆದ ೪೮ ಗಂಟೆಗಳಲ್ಲಿ ಇಡೀ ಬಂಗಾಳದಲ್ಲಿ ಸುಮಾರು ೧,೧೦೦ ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದೂ ಅವರು ತಿಳಿಸಿದರು.

ಶಾಂತಿ ಕಾಪಾಡುವಂತೆ ಪೊಲೀಸರಿಂದ ಕರೆ!

ಪೊಲೀಸ್ ಮಹಾನಿರ್ದೇಶಕ ಸಿದ್ಧನಾಥ ಗುಪ್ತಾ ಅವರು ಈ ಪರಿಸ್ಥಿತಿ ಬಗ್ಗೆ ಮಾತನಾಡಿ, ದೂರುಗಳಿದ್ದರೆ, ಜನರು ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಬೇಕು. ಸಂಬಂಧಪಟ್ಟವರ ಮೇಲೆ ಪೊಲೀಸರು ಕಾನೂನು ಕ್ರಮ ಜರುಗಿಸುತ್ತಾರೆ. ಆದರೆ, ಯಾರೂ ಕಾನೂನನ್ನು ಕೈಗೆತ್ತಿಕೊಳ್ಳುವ ಅಗತ್ಯವಿಲ್ಲ. ನಾಗರಿಕರು ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಬೇಕು, ಎಂದು ಕರೆ ನೀಡಿದರು.

ಸಂಪಾದಕೀಯ ನಿಲುವು

  • ಬಂಗಾಳದಲ್ಲಿ ಕಾನೂನು- ಸುವ್ಯವಸ್ಥೆ ಎಂಬುದು ಅಸ್ತಿತ್ವದಲ್ಲಿದೆಯೇ?, ಎಂಬ ಸಂಶಯ ಉಂಟಾಗುತ್ತದೆ!
  • ಬಂಗಾಳದಲ್ಲಿ ಭಾಜಪ ಅಧಿಕಾರಕ್ಕೆ ಬಂದಿದೆ; ಆದರೆ ಅಲ್ಲಿ ಎಷ್ಟು ದೊಡ್ಡ ಮಟ್ಟದ ಕಾರ್ಯ ಮಾಡಬೇಕಿದೆ, ಎಂಬುದು ಈ ಘಟನೆಯಿಂದ ಅರಿವಾಗುತ್ತದೆ. ಭಾಜಪಾಗೆ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಅನಿವಾರ್ಯವಾಗಲಿದೆ!