ಭಾಜಪ ಕ್ರಮ ಕೈಗೊಳ್ಳಬಹುದೆಂಬ ಭೀತಿ!

ಕೋಲಕಾತಾ (ಬಂಗಾಳ) – ಬಂಗಾಳದಲ್ಲಿ ಭಾಜಪಕ್ಕೆ ಬಹುಮತ ಸಿಕ್ಕಿದ ನಂತರ ತೃಣಮೂಲ ಕಾಂಗ್ರೆಸ್ಸಿನ ಕೆಲವು ನಾಯಕರಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ. ಭಾಜಪ ತಮ್ಮ ವಿರುದ್ಧ ಕ್ರಮ ಜರುಗಿಸುವ ಭಯದಿಂದ ಅವರು ಈಗ ಭಾಜಪ ಸೇರಲು ಬಯಸುತ್ತಿದ್ದಾರೆ ಅಥವಾ ಭಾಜಪದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಇದೇ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್ ವಕ್ತಾರೆ ರಿಜು ದತ್ತಾ ಅವರು ಭಾಜಪ ನಾಯಕ ಶುಭೇಂದು ಅಧಿಕಾರಿ ಅವರ ಪದೇ ಪದೇ ಕ್ಷಮೆ ಕೋರುತ್ತಿದ್ದಾರೆ. ಭಾಜಪದಿಂದ ಈ ಬಗ್ಗೆ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.
ಶುಭೇಂದು ಅಧಿಕಾರಿ ಅವರ ಬಗ್ಗೆ ಆಕ್ಷೇಪಾರ್ಹ ಟಿಪ್ಪಣಿ ಮಾಡಿದ್ದ ದತ್ತಾ
ವಾಸ್ತವವಾಗಿ ರಿಜು ದತ್ತಾ ಅವರು ಕಳೆದ ಕೆಲವು ದಿನಗಳಲ್ಲಿ ಶುಭೇಂದು ಅಧಿಕಾರಿ ಅವರ ಬಗ್ಗೆ ಅವಹೇಳನಕಾರಿ ಟಿಪ್ಪಣಿ ಮಾಡಿದ್ದರು. ಅದರ ವಿಡಿಯೋ ಹೊರಬಂದಿತ್ತು. ಅವರಿಗೆ ಈಗ ತಮ್ಮ ಹೇಳಿಕೆಯ ಬಗ್ಗೆ ಪಶ್ಚಾತ್ತಾಪವಾಗುತ್ತಿದೆ; ಹಾಗಾಗಿಯೇ ಅವರು ಶುಭೇಂದು ಅಧಿಕಾರಿ ಅವರ ಕ್ಷಮೆ ಕೇಳುತ್ತಿದ್ದಾರೆ. ನಾನು ಒತ್ತಡದಿಂದಾಗಿ ಹಾಗೆ ಮಾಡಿದ್ದೆ. ಆ ಸಮಯದಲ್ಲಿ ನನ್ನ ಮತ್ತು ನನ್ನ ಕುಟುಂಬದ ಸುರಕ್ಷತೆಗಾಗಿ ಆ ವಿಷಯಗಳನ್ನು ಹೇಳಲು ನನಗೆ ಒತ್ತಾಯಿಸಲಾಗಿತ್ತು. ನಾನೊಬ್ಬ ಕೇವಲ ವಕ್ತಾರ, ನಾಯಕನಲ್ಲ, ಎಂದು ದತ್ತಾ ಸ್ಪಷ್ಟನೆ ನೀಡಿದ್ದಾರೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ