
ಪ್ರದಕ್ಷಿಣೆಗಳನ್ನು ಹೇಗೆ ಹಾಕಬೇಕು ?
೧. ಪ್ರದಕ್ಷಿಣೆಗಳನ್ನು ಹಾಕುವ ಮೊದಲು ದೇವರಿಗೆ ಪ್ರಾರ್ಥನೆ ಮಾಡಬೇಕು.
೨. ಎರಡೂ ಕೈಗಳನ್ನು ಜೋಡಿಸಿ ಭಾವಪೂರ್ಣ ನಾಮಜಪವನ್ನು ಮಾಡುತ್ತಾ ಮಧ್ಯಮ ಗತಿಯಲ್ಲಿ ಪ್ರದಕ್ಷಿಣೆಗಳನ್ನು ಹಾಕಬೇಕು. ಪ್ರದಕ್ಷಿಣೆಗಳನ್ನು ಹಾಕುವಾಗ ಗರ್ಭಗುಡಿಯನ್ನು (ಅಥವಾ ದೇವಸ್ಥಾನವನ್ನು) ಸ್ಪರ್ಶಿಸಬಾರದು.
ಪ್ರದಕ್ಷಿಣೆಗಳನ್ನು ಹಾಕುವಾಗ ದೇವರ ಹಿಂದಿನ ಬದಿಗೆ ಬಂದ ಮೇಲೆ ನಿಂತು ದೇವರಿಗೆ ನಮಸ್ಕಾರ ಮಾಡಿಯೇ ಮುಂದೆ ಹೋಗಬೇಕು.
೩. ದೇವರಿಗೆ ಸಮಸಂಖ್ಯೆಯಲ್ಲಿ (ಉದಾ. ೨, ೪) ಮತ್ತು ದೇವಿಗೆ ವಿಷಮ ಸಂಖ್ಯೆಂiಲ್ಲಿ (ಉದಾ. ೧, ೩) ಪ್ರದಕ್ಷಿಣೆಗಳನ್ನು ಹಾಕಬೇಕು.
೪. ಪ್ರತಿಯೊಂದು ಪ್ರದಕ್ಷಿಣೆಯ ನಂತರ ನಿಂತು ದೇವರಿಗೆ ನಮಸ್ಕಾರ ಮಾಡಿಯೇ ಮುಂದಿನ ಪ್ರದಕ್ಷಿಣೆಯನ್ನು ಹಾಕಬೇಕು.
ಪ್ರದಕ್ಷಿಣೆಯ ನಂತರ ಏನು ಮಾಡಬೇಕು ?
೧. ದೇವರಿಗೆ ಶರಣಾಗತ ಭಾವದಿಂದ ನಮಸ್ಕಾರ ಮತ್ತು ಪ್ರಾರ್ಥನೆ ಯನ್ನು ಮಾಡಬೇಕು.
೨. ಬಲಗೈಯಿಂದ ತೀರ್ಥವನ್ನು ಸ್ವೀಕರಿಸಿದ ನಂತರ, ಮಧ್ಯದ ಬೆರಳು ಮತ್ತು ಅನಾಮಿಕಾದ ತುದಿಗಳನ್ನು ಅಂಗೈಗೆ ಸ್ಪರ್ಶಿಸಿ, ಆ ಬೆರಳುಗಳನ್ನು ಎರಡೂ ಕಣ್ಣುಗಳಿಗೆ ತಾಗಿಸಬೇಕು, ಆಮೇಲೆ ಬೆರಳುಗಳನ್ನು ಹಣೆಯಿಂದ ತಲೆಯ ಹಿಂದಿನವರೆಗೆ ಸವರಬೇಕು.
೩. ದೇವಸ್ಥಾನದಲ್ಲಿ ಸ್ವಲ್ಪ ಹೊತ್ತು ಕುಳಿತು ನಾಮಜಪ ಮಾಡಬೇಕು ಮತ್ತು ಪ್ರಸಾದವನ್ನು ಆದಷ್ಟು ದೇವಸ್ಥಾನದಲ್ಲಿಯೇ ಸೇವಿಸಬೇಕು. ಹೊರಡುವಾಗ ದೇವರಿಗೆ ಮತ್ತೊಮ್ಮೆ ಪ್ರಾರ್ಥನೆ ಮಾಡಬೇಕು. ದೇವಸ್ಥಾನದ ಹೊರಗೆ ಬಂದ ನಂತರ ಅಂಗಣದಿಂದ ಮತ್ತೊಮ್ಮೆ ಕಲಶಕ್ಕೆ ನಮಸ್ಕಾರ ಮಾಡಬೇಕು.
(ಆಧಾರ : ಸನಾತನ ನಿರ್ಮಿತ ಗ್ರಂಥ ‘ದೇವಸ್ಥಾನದಲ್ಲಿ ದೇವತೆಯ ದರ್ಶನ ಪಡೆಯುವಾಗಿನಿಂದ ಮಾಡುವ ಕೃತಿಗಳ ಶಾಸ್ತ್ರ)
ಕೇಂದ್ರ ಸರಕಾರದಿಂದ ‘ಟೆಂಪಲ್ ಬಾಂಡ್ಸ್’ ಯೋಜನೆ ಜಾರಿ !
ದೇವಸ್ಥಾನಗಳಲ್ಲಿನ ‘ವಿಐಪಿ ದರ್ಶನ’ದ ಕುರಿತು ಮದ್ರಾಸ್ ಉಚ್ಚ ನ್ಯಾಯಾಲಯದ ತೀವ್ರ ಅಸಮಾಧಾನ
ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಭದ್ರತೆಯ ಯಾವುದೇ ಲೋಪವಿಲ್ಲ, ಆಭರಣಗಳೂ ಸುರಕ್ಷಿತವಾಗಿವೆ! – ದೇವಸ್ಥಾನದ ಆಡಳಿತ ಮಂಡಳಿಯ ಸ್ಪಷ್ಟೀಕರಣ : Padmanabhaswamy Temple
ಕೇರಳಮ್ನ ಪ್ರಸಿದ್ಧ ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನದ ಆಭರಣಗಳು ನಾಪತ್ತೆ ! : Temple Gold Theft
ಉತ್ತರ ಪ್ರದೇಶದ ಸಹರಾನ್ಪುರದಲ್ಲಿ ದೇವಾಲಯದ ಅರ್ಚಕರ ವಿರುದ್ಧ ಪೋಕ್ಸೊ ಮತ್ತು ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಾದ ನಂತರ ಬ್ರಾಹ್ಮಣ ಸಮುದಾಯದಿಂದ ಪ್ರತಿಭಟನೆ
Ranveer Singh : ನಟ ರಣವೀರ್ ಸಿಂಗ್ ಅವರಿಂದ ಮೈಸೂರಿನ ಚಾಮುಂಡಿ ದೇವಸ್ಥಾನಕ್ಕೆ ಭೇಟಿ ನೀಡಿ ಕ್ಷಮೆಯಾಚನೆ !