ಪ್ರಧಾನ ಕಾರ್ಯದರ್ಶಿ ಮಿಲಿಂದ್ ಪರಾಂಡೆ ಅವರ ಪ್ರಶ್ನೆ

ಶಿರಡಿ (ಅಹಲ್ಯಾನಗರ) – ದೇಶದ ಎಲ್ಲಾ ಹಿಂದೂ ದೇವಸ್ಥಾನಗಳನ್ನು ಹಿಂದೂಗಳಿಗೇ ಹಸ್ತಾಂತರಿಸಬೇಕು. ದೇವಸ್ಥಾನಗಳನ್ನು ನಿರ್ವಹಿಸುವುದು ಸರಕಾರ ಅಥವಾ ನ್ಯಾಯಾಲಯದ ಕೆಲಸವಲ್ಲ. ಯಾವುದೇ ಚರ್ಚ್ ಅಥವಾ ಮಸೀದಿ ಸರಕಾರದ ನಿಯಂತ್ರಣದಲ್ಲಿಲ್ಲ ಆದರೆ ಕೇವಲ ಹಿಂದೂ ದೇವಸ್ಥಾನಗಳನ್ನು ಮಾತ್ರ ಸರಕಾರೀಕರಣ ಮಾಡುವುದು ಏಕೆ? ಎಂದು ವಿಶ್ವ ಹಿಂದೂ ಪರಿಷತ್ತಿನ ಕೇಂದ್ರ ಸಂಘಟನಾ ಪ್ರಧಾನ ಕಾರ್ಯದರ್ಶಿ ಶ್ರೀ. ಮಿಲಿಂದ್ ಪರಾಂಡೆ ಅವರು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ. ಅವರು ಶಿರಡಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದರು.
🚩 “Hand over Hindu temples to Hindus!” – Milind Parande, Organising General Secretary, VHP@MParandeVHP questioned why only Hindu temples remain under government control while churches & mosques are managed independently.
🚩 Key points:
• @VHPDigital to approach MPs & CMs… pic.twitter.com/eKC4amRmNg— Sanatan Prabhat (@SanatanPrabhat) May 9, 2026
ದೇವಸ್ಥಾನಗಳ ನಿರ್ವಹಣೆಯನ್ನು ಹಿಂದೂಗಳೇ ಮಾಡುತ್ತಾರೆ!
ಶ್ರೀ. ಮಿಲಿಂದ ಪರಾಂಡೆ ಮಾತನಾಡಿ, ‘ಹಿಂದೂ ದೇವಸ್ಥಾನಗಳ ನಿರ್ವಹಣೆಯನ್ನು ಹಿಂದೂಗಳೇ ಮಾಡಬೇಕು ಎಂಬ ಉದ್ದೇಶದೊಂದಿಗೆ ದೇಶದ ವಿವಿಧ ಹಿಂದೂ ಸಂಘಟನೆಗಳು ಒಂದಾಗಿವೆ. ನಾವು ಈ ವಿಷಯವಾಗಿ ದೇಶದ ಎಲ್ಲಾ ಸಂಸದರು ಮತ್ತು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಜಾಗೃತಿ ಮೂಡಿಸುತ್ತಿದ್ದೇವೆ. ಈ ವರ್ಷದ ಅಂತ್ಯದ ವೇಳೆಗೆ ಎಲ್ಲಾ ಜನಪ್ರತಿನಿಧಿಗಳು ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ‘ದೇವಸ್ಥಾನ ಮುಕ್ತಿ’ ವಿಷಯವನ್ನು ಪ್ರಸ್ತಾಪಿಸಲಿದ್ದಾರೆ ಎಂದರು.
ಲವ್ ಜಿಹಾದ್ ತಡೆಯಲು ದೇಶದಲ್ಲಿ ‘ಧರ್ಮ ಸ್ವಾತಂತ್ರ್ಯ ಕಾಯ್ದೆ’ ಅಗತ್ಯ!
ಪರಾಂಡೆ ಮಾತು ಮುಂದುವರೆಸುತ್ತಾ, ದೇಶದಲ್ಲಿ ಒಂದು ನಿರ್ದಿಷ್ಟ ವರ್ಗದವರು ಯೋಜಿತ ರೀತಿಯಲ್ಲಿ ‘ಲವ್ ಜಿಹಾದ್’ ಘಟನೆಗಳನ್ನು ನಡೆಸುತ್ತಿದ್ದಾರೆ. ಹಿಂದೂ ಸಮಾಜವು ಇದರ ವಿರುದ್ಧ ಸಮರ್ಥವಾಗಿ ನಿಲ್ಲುವುದು ಅಗತ್ಯವಾಗಿದೆ. ವಿದೇಶಿ ಮಿಷನರಿಗಳಿಗೆ ಮತಾಂತರಕ್ಕಾಗಿ ಸಿಗುವ ನಿಧಿಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಹೇಳಿದರು. ಸಂಸತ್ತಿನ ಅಂಕಿಅಂಶಗಳು ಹೇಳುವಂತೆ, ಕಳೆದ ವರ್ಷ ಎಫ್.ಸಿ.ಆರ್.ಎ. (ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ) ಅಡಿಯಲ್ಲಿ ಮಿಷನರಿಗಳಿಗೆ 18 ಸಾವಿರ ಕೋಟಿ ರೂಪಾಯಿ ನೀಡಲಾಗಿದೆ. ಹಿಂದೂ ಧರ್ಮದ ವಿರುದ್ಧವಾಗಿ ಹಣವನ್ನು ಬಳಸಲಾಗುತ್ತಿದೆ, ಇದನ್ನು ನಿಷೇಧಿಸಬೇಕು. ಧರ್ಮ ರಕ್ಷಣೆಗಾಗಿ ಪ್ರತಿಯೊಂದು ರಾಜ್ಯದಲ್ಲೂ ವಿಧೇಯಕ ಅಂಗೀಕಾರವಾಗಬೇಕು. ಭಾಜಪ ಆಡಳಿತವಿರುವ ರಾಜ್ಯಗಳಲ್ಲಿರುವ ಧರ್ಮ ಸ್ವಾತಂತ್ರ್ಯ ಕಾಯ್ದೆಯನ್ನು ಈಗ ಇಡೀ ದೇಶಾದ್ಯಂತ ಜಾರಿಗೆ ತರಬೇಕು ಎಂದು ಅವರು ಒತ್ತಾಯಿಸಿದರು.
ಬಂಗಾಳದ ಬದಲಾವಣೆ ದೇಶದ ಭದ್ರತೆಗೆ ಪೂರಕ!
ಬಂಗಾಳದಲ್ಲಿ ಮೊದಲ ಬಾರಿಗೆ ಭಾಜಪ ಅಧಿಕಾರಕ್ಕೆ ಬಂದಿದ್ದಕ್ಕೆ ಸಂತೋಷ ವ್ಯಕ್ತಪಡಿಸಿದ ಅವರು, ಹಿಂದೂ ಹಿತವೇ ದೇಶದ ಹಿತ. ಬಂಗಾಳದಲ್ಲಿ ಬಾಂಗ್ಲಾದೇಶಿ ನುಸುಳುಕೋರರಿಂದಾಗಿ ಆಂತರಿಕ ಭದ್ರತೆಗೆ ದೊಡ್ಡ ಪ್ರಶ್ನೆ ಎದುರಾಗಿತ್ತು. ಈಗ ಅಲ್ಲಿ ಹಿಂದುತ್ವನಿಷ್ಠ ಸಿದ್ಧಾಂತದ ಸರಕಾರ ಬಂದಿರುವುದರಿಂದ ದೇಶದ ಗಡಿಗಳು ಮತ್ತು ಭದ್ರತೆ ಇನ್ನಷ್ಟು ಬಲಗೊಳ್ಳಲಿವೆ ಎಂದು ಅಭಿಪ್ರಾಯಪಟ್ಟರು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ