ಹಾಪುಡ (ಉತ್ತರ ಪ್ರದೇಶ) ಮಹಾರಾಣಾ ಪ್ರತಾಪ್ ಜಯಂತಿ ಮೆರವಣಿಗೆಯ ಮೇಲೆ ಕಲ್ಲು ತೂರಾಟ : ಹಿಂದೂಗಳಿಂದಲೂ ಪ್ರತ್ಯುತ್ತರ

ಹಾಪುಡ (ಉತ್ತರ ಪ್ರದೇಶ) – ಇಲ್ಲಿನ ದೆಹರಾ ಗ್ರಾಮದಲ್ಲಿ ಮಹಾರಾಣಾ ಪ್ರತಾಪ್ ಜಯಂತಿಯ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಮೆರವಣಿಗೆಯ ಮೇಲೆ ಮುಸ್ಲಿಮರಿಂದ ಕಲ್ಲು ತೂರಾಟ ನಡೆಸಲಾಯಿತು. ಈ ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಘಟನೆಯ ನಂತರ ಆಕ್ರೋಶಗೊಂಡ ಹಿಂದೂಗಳು ಕೂಡ ತಕ್ಕ ಪ್ರತ್ಯುತ್ತರ ನೀಡಿದರು. ಇದರಿಂದಾಗಿ ಪ್ರದೇಶದಲ್ಲಿ ದೊಡ್ಡ ಸಂಘರ್ಷದ ವಾತಾವರಣ ನಿರ್ಮಾಣವಾಯಿತು. ಹಿಂದೂಗಳ ಆಕ್ರಮಣಕಾರಿ ನಿಲುವಿನ ಮುಂದೆ ಕಲ್ಲು ತೂರಾಟಗಾರರಲ್ಲಿ ಭಯದ ವಾತಾವರಣ ನಿರ್ಮಾಣವಾಯಿತು. ಹಿಂದೂಗಳ ತೀವ್ರ ಪ್ರತಿರೋಧದ ನಂತರ ದಂಗೆಕೋರರು ಜೀವ ಉಳಿಸಿಕೊಳ್ಳಲು ಓಡುತ್ತಿರುವುದು ಕಂಡುಬಂತು. ಈ ಘರ್ಷಣೆಯ ವೇಳೆ ಪ್ರತಿರೋಧ ಒಡ್ಡಿದ ಜನಸಮೂಹವು ಕೆಲವು ದಂಗೆಕೋರರನ್ನು ಹಿಡಿದು ಚೆನ್ನಾಗಿ ಥಳಿಸಿದರು.

೧. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು. ಸದ್ಯ ಪ್ರದೇಶದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಈ ಹಿಂಸಾಚಾರಕ್ಕೆ ಕಾರಣರಾದವರನ್ನು ಗುರುತಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗುತ್ತಿದೆ.

೨. ಈ ಪ್ರಕರಣದಲ್ಲಿ ಇಲ್ಲಿಯವರೆಗೆ ಇಬ್ಬರನ್ನು ಬಂಧಿಸಲಾಗಿದೆ. ಕಲ್ಲು ತೂರಾಟ ನಡೆಸಿದ ಇತರರನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ. ಪೊಲೀಸರು ಮೆರವಣಿಗೆಯನ್ನು ಡ್ರೋನ್ ಮೂಲಕ ಚಿತ್ರೀಕರಿಸಿದ್ದು, ಆ ದೃಶ್ಯಗಳ ಆಧಾರದ ಮೇಲೆ ದೋಷಿಗಳನ್ನು ಪತ್ತೆಹಚ್ಚಲಾಗುತ್ತಿದೆ.

ಸಂಪಾದಕೀಯ ನಿಲುವು

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಅವರ ಕಠಿಣ ಕ್ರಮ ಕೈಗೊಳ್ಳುವ ಸರಕಾರವಿದ್ದರೂ ಸಹ, ಮತಾಂಧರು ಹಿಂದೂಗಳ ಮೇಲೆ ದಾಳಿ ಮಾಡುವ ಧೈರ್ಯ ಕಡಿಮೆಯಾಗುತ್ತಿಲ್ಲ ಎಂದರೆ ಅವರಲ್ಲಿ ಎಂತಹ ಕಟ್ಟರತೆ ತುಂಬಿದೆ ಎಂಬುದು ಇದರಿಂದ ತಿಳಿಯುತ್ತದೆ!