ಬಾಂಗ್ಲಾದೇಶದ ಗೈಬಂಧಾ ಜಿಲ್ಲೆಯಲ್ಲಿ ಅಪ್ರಾಪ್ತ ಹಿಂದೂ ಬಾಲಕಿಯ ಅಪಹರಣ

ಗೈಬಂಧಾ (ಬಾಂಗ್ಲಾದೇಶ) – ಇಲ್ಲಿನ ಶಾಲೆಯಿಂದ ಮನೆಗೆ ಮರಳುತ್ತಿದ್ದ ಅಪ್ರಾಪ್ತ ಹಿಂದೂ ಬಾಲಕಿಯೊಬ್ಬಳನ್ನು ಅಪಹರಿಸಲಾಗಿದೆ. ಈ ಘಟನೆಯಿಂದ ಸ್ಥಳೀಯ ಹಿಂದೂ ಸಮುದಾಯದಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ. ಸಂತ್ರಸ್ತ ಬಾಲಕಿಯ ತಂದೆ ನಿತಾಯಿ ದಾಸ್ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅವರು ನೀಡಿದ ಮಾಹಿತಿಯ ಪ್ರಕಾರ ಪೊಲೀಸರು ದೂರನ್ನು ದಾಖಲಿಸಿಕೊಂಡಿದ್ದರೂ, ಇದುವರೆಗೂ ಬಾಲಕಿಯ ಪತ್ತೆಯಾಗಿಲ್ಲ. ಬಾಲಕಿಯ ಕುಟುಂಬದವರು ಇದರ ಹಿಂದೆ ಅಪಹರಣವಲ್ಲದೆ ಬಲವಂತದ ಮತಾಂತರದ ಸಂಚು ಇದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ. ಬಾಂಗ್ಲಾದೇಶದ ಅಲ್ಪಸಂಖ್ಯಾತ ಹಿಂದೂ ಬಾಲಕಿಯರನ್ನು ಗುರಿಯಾಗಿಸಿಕೊಂಡು ಇಂತಹ ಘಟನೆಗಳು ಪದೇ ಪದೇ ನಡೆಯುತ್ತಿವೆ ಎಂದು ಸಾಮಾಜಿಕ ಕಾರ್ಯಕರ್ತರು ಗಮನಕ್ಕೆ ತಂದಿದ್ದಾರೆ.

ಸಂಪಾದಕೀಯ ನಿಲುವು

ಬಾಂಗ್ಲಾದೇಶದಲ್ಲಿ ಯಾವುದೇ ಪಕ್ಷದ ಸರಕಾರ ಅಧಿಕಾರಕ್ಕೆ ಬಂದರೂ, ಅಲ್ಲಿನ ಹಿಂದೂಗಳ ಮೇಲಿನ ದೌರ್ಜನ್ಯಗಳು ನಿಲ್ಲುವುದಿಲ್ಲ, ಇದನ್ನು ಗಮನದಲ್ಲಿಡಿ!