ಪ್ರಾರ್ಥನಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳ ೫೦೦ ಮೀಟರ್ ವ್ಯಾಪ್ತಿಯಲ್ಲಿರುವ ಸರಕಾರಿ ಮದ್ಯದ ಅಂಗಡಿಗಳನ್ನು ಮುಚ್ಚಿ! : Tamil Nadu CM Joseph Vijay

ತಮಿಳುನಾಡಿನ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರ ಆದೇಶ

ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್

ಚೆನ್ನೈ (ತಮಿಳುನಾಡು) – ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ತಕ್ಷಣ ಜೋಸೆಫ್ ವಿಜಯ ಅವರು, ಮುಂದಿನ ೨ ವಾರಗಳಲ್ಲಿ ರಾಜ್ಯಾದ್ಯಂತ ಪ್ರಾರ್ಥನಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳ ೫೦೦ ಮೀಟರ್ ವ್ಯಾಪ್ತಿಯಲ್ಲಿರುವ ‘ತಮಿಳುನಾಡು ರಾಜ್ಯ ಮಾರುಕಟ್ಟೆ ನಿಗಮ’ ದ ಮೂಲಕ ನಡೆಸುತ್ತಿರುವ ೭೧೭ ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ನಿರ್ದೇಶನ ನೀಡಿದ್ದಾರೆ. ಸರಕಾರದ ವತಿಯಿಂದ ರಾಜ್ಯಾದ್ಯಂತ ಒಟ್ಟು ೪ ಸಾವಿರದ ೭೬೫ ಮದ್ಯದ ಅಂಗಡಿಗಳನ್ನು ನಡೆಸಲಾಗುತ್ತಿದೆ.

ಸಂಪಾದಕೀಯ ನಿಲುವು

ಗೋವಾ ಸೇರಿದಂತೆ ಹಲವು ರಾಜ್ಯಗಳಲ್ಲಿ ಇಂತಹ ಆದೇಶ ನೀಡುವಂತೆ ಹಿಂದೂಗಳು ಒತ್ತಡ ಹೇರುವುದು ಅಗತ್ಯವಾಗಿದೆ!