
ಮುಂಬಯಿ, ಮೇ ೧೨ (ವಾರ್ತೆ) – ಮಹಾರಾಷ್ಟ್ರದ ರಾಜ್ಯಪಾಲರಾದ ಜಿಷ್ಣು ದೇವ್ ವರ್ಮಾ ಅವರಿಗೆ ಸನಾತನ ಸಂಸ್ಥೆಯ ವತಿಯಿಂದ ಮೇ ೧೭ ರಂದು ಆಯೋಜಿಸಲಾದ ಶ್ರೀ ರಾಜಮಾತಂಗಿ ಮಹಾಯಾಗದ ಆಮಂತ್ರಣವನ್ನು ನೀಡಲಾಯಿತು. ಸನಾತನ ಸಂಸ್ಥೆಯ ರಾಷ್ಟ್ರೀಯ ವಕ್ತಾರರಾದ ಶ್ರೀ. ಚೇತನ್ ರಾಜಹಂಸ ಮತ್ತು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ ಶ್ರೀ. ರಮೇಶ್ ಶಿಂದೆ ಅವರು ಮೇ ೧೨ ರಂದು ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ಈ ಮಹಾಯಾಗದ ಆಮಂತ್ರಣ ನೀಡಿದರು. ಈ ಸಂದರ್ಭದಲ್ಲಿ ರಾಜ್ಯಪಾಲರಾದ ಜಿಷ್ಣು ದೇವ್ ವರ್ಮಾ ಅವರು, “ಯಾಗಕ್ಕೆ ಬರಲು ಪ್ರಯತ್ನಿಸುತ್ತೇನೆ” ಎಂದು ತಿಳಿಸಿದರು. ಈ ವೇಳೆ ಸನಾತನ ಸಂಸ್ಥೆಯ ಸೌ. ಧನಶ್ರೀ ಕೇಳಶೀಕರ್, ಶ್ರೀ. ಅಶೋಕ್ ದಾಭೋಲ್ಕರ್ ಮತ್ತು ಶ್ರೀ. ಪ್ರೀತಮ್ ನಾಚಣಕರ್ ಉಪಸ್ಥಿತರಿದ್ದರು.

ಶ್ರೀ. ಚೇತನ್ ರಾಜಹಂಸ ಅವರು ರಾಜ್ಯಪಾಲರಿಗೆ ಸನಾತನ ಸಂಸ್ಥೆಯ ಕಾರ್ಯಗಳ ಬಗ್ಗೆ ಸಂಕ್ಷಿಪ್ತವಾಗಿ ಮಾಹಿತಿ ನೀಡಿದರು, ಹಾಗೂ ಗೋವಾದ ರಾಮನಾಥಿಯಲ್ಲಿರುವ ಸನಾತನ ಆಶ್ರಮಕ್ಕೆ ಭೇಟಿ ನೀಡುವಂತೆ ಆಮಂತ್ರಣ ನೀಡಿದರು. ಈ ವೇಳೆ ಶ್ರೀ. ರಾಜಹಂಸ ಅವರು ರಾಜ್ಯಪಾಲರಿಗೆ ಸನಾತನದ ಗ್ರಂಥಗಳನ್ನು ಉಡುಗೊರೆಯಾಗಿ ನೀಡಿದರು.
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)
ಗೋಪಾಲಗಡ ಸರಕಾರದ್ದಾಗಿದ್ದು ಎಲ್ಲರಿಗೂ ಮುಕ್ತವಾಗಿದೆ : ವದಂತಿಗಳನ್ನು ನಂಬಿ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ !
ಪಾಟಲಿಪುತ್ರ (ಬಿಹಾರ) ಇಲ್ಲಿ ಪ್ರಸಿದ್ಧ ಖಾನ್ ಸರ್ ಅವರ ತರಬೇತಿ ಕೇಂದ್ರದ ಮೇಲೆ ದಾಳಿ