ಬಂಗಾಳದ ಮುಖ್ಯಮಂತ್ರಿ ಶುಭೆಂದು ಅಧಿಕಾರಿಯವರಿಂದ ಪೊಲೀಸರಿಗೆ ಆದೇಶ

ಕೊಲಕಾತಾ (ಬಂಗಾಳ) – ಬಂಗಾಳದಲ್ಲಿನ ಭಾಜಪ ಸರಕಾರದ ನೂತನವಾಗಿ ಆಯ್ಕೆಯಾದ ಮುಖ್ಯಮಂತ್ರಿ ಶುಭೆಂದು ಅಧಿಕಾರಿಯವರು ಆಡಳಿತಾತ್ಮಕ ಸಭೆಯಲ್ಲಿ ಪೊಲೀಸ್ ಅಧಿಕಾರಿಗಳಿಗೆ ಸ್ಪಷ್ಟವಾಗಿ, ಯಾವುದೇ ಧಾರ್ಮಿಕ ಸ್ಥಳದ ಮೇಲಿನ ಧ್ವನಿವರ್ಧಕದ ಶಬ್ದವು ನಿಗದಿತ ಶಬ್ದಮಿತಿಯ ಹೊರಗೆ ಹೋಗಬಾರದು. ಈ ನಿಯಮದ ಜಾರಿಗೆ ಯಾವುದೇ ಒತ್ತಾಯ ಅಥವಾ ಬಲವಂತ ಮಾಡದೆ ಮಾತುಕತೆ ಮತ್ತು ತಿಳಿಹೇಳುವ ಮಾರ್ಗವನ್ನು ಅಳವಡಿಸಿಕೊಳ್ಳಲು ಹೇಳಲಾಗಿದೆ. ಧಾರ್ಮಿಕ ಸ್ವಾತಂತ್ರ್ಯವನ್ನು ಗೌರವಿಸುವುದು ಅವಶ್ಯಕವಾಗಿದೆ; ಆದರೆ ಅದೇ ಸಮಯದಲ್ಲಿ ಸಾಮಾನ್ಯ ಜನರ ಅನುಕೂಲತೆ ಮತ್ತು ಶಾಂತಿಯೂ ಅಷ್ಟೇ ಮುಖ್ಯವಾಗಿದೆ. ಆದ್ದರಿಂದ ಧ್ವನಿವರ್ಧಕಗಳ ಶಬ್ದವು ಸಂಬಂಧಪಟ್ಟ ಧಾರ್ಮಿಕ ಆವರಣದ ಹೊರಗೆ ಅತಿಯಾದ ಮಟ್ಟದಲ್ಲಿ ತಲುಪದಂತೆ ಖಚಿತಪಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.
ಹಬ್ಬಗಳಿಗಾಗಿ ಪ್ರತ್ಯೇಕ ವ್ಯವಸ್ಥೆ !
ದುರ್ಗಾಪೂಜೆ, ಈದ್ ಅಥವಾ ಇತರ ಸಮುದಾಯಗಳ ದೊಡ್ಡ ಹಬ್ಬಗಳ ಸಮಯದಲ್ಲಿ ವಿಶೇಷ ಪರಿಸ್ಥಿತಿ ಇರುತ್ತದೆ ಎಂದು ಮುಖ್ಯಮಂತ್ರಿಗಳು ಸಭೆಯಲ್ಲಿ ಸ್ಪಷ್ಟಪಡಿಸಿದರು. ಅಂತಹ ಸಮಯದಲ್ಲಿ ಆ ಹಬ್ಬಗಳನ್ನು ವಿಭಿನ್ನ ದೃಷ್ಟಿಕೋನದಿಂದ ನೋಡಲಾಗುವುದು.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ