
ತುಮಕೂರು – ಇಲ್ಲಿನ ಮದರಸಾವೊಂದರಲ್ಲಿ ಮೌಲ್ವಿಯ ನಿರಂತರ ಕಿರುಕುಳಕ್ಕೆ ಬೇಸತ್ತು ಅಲ್ಲಿಂದ ಓಡಿಬಂದಿದ್ದ 24 ಮುಸ್ಲಿಂ ಮಕ್ಕಳು ಬೆಂಗಳೂರು ರೈಲು ನಿಲ್ದಾಣದಲ್ಲಿ ಪತ್ತೆಯಾಗಿದ್ದಾರೆ. ಬಿಹಾರದಿಂದ ಈ ಮಕ್ಕಳು ತುಮಕೂರಿನ ಅಮಲಾಪುರದಲ್ಲಿರುವ ಜಾಮಿಯಾ ಅರೇಬಿಯಾ ಹಸೀನಿಯಾ ಟ್ರಸ್ಟ್ ಮದರಸಾದಲ್ಲಿ ಕಲಿಯಲು ಬಂದಿದ್ದರು. ಮೌಲ್ವಿಯ ವಿರುದ್ಧ ಬಾಲ ನ್ಯಾಯ ಕಾಯ್ದೆ ಮತ್ತು ಬಾಲ ಕಾರ್ಮಿಕ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಈ ಘಟನೆಯ ತನಿಖೆ ನಡೆಸುತ್ತಿದ್ದಾರೆ.
ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಈ ಮಕ್ಕಳನ್ನು ಕಂಡು ರೈಲ್ವೆ ಭದ್ರತಾ ಪಡೆ ವಿಚಾರಣೆ ನಡೆಸಿದಾಗ ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ. ಮದರಸಾದ ಮೌಲ್ವಿ ಎಷ್ಟು ಕ್ರೂರವಾಗಿದ್ದನೆಂದರೆ, ಆತ ಕಲಿಯಲು ಬಂದ ಮಕ್ಕಳಿಂದ ಕಲ್ಲು ಹೊರುವ ಕೆಲಸ ಮಾಡಿಸುತ್ತಿದ್ದ ಎಂದು ಮಕ್ಕಳು ಆರೋಪಿಸಿದ್ದಾರೆ. ಪ್ರತಿದಿನ ಕಲ್ಲು ಮತ್ತು ಮಣ್ಣನ್ನು ಹೊರಲು ಹಚ್ಚಲಾಗುತ್ತಿತ್ತು. ಕೆಲಸ ಮಾಡಲು ನಿರಾಕರಿಸಿದರೆ ಮೌಲ್ವಿ ಅವರಿಗೆ ಮನಬಂದಂತೆ ಥಳಿಸಿ ಕಿರುಕುಳ ನೀಡುತ್ತಿದ್ದ. ಹಲವು ಬಾರಿ ಮಕ್ಕಳಿಗೆ ಸರಿಯಾಗಿ ಊಟವನ್ನೂ ನೀಡುತ್ತಿರಲಿಲ್ಲ ಎಂಬ ಆರೋಪವೂ ಇದೆ. ದೈಹಿಕ ದೌರ್ಜನ್ಯ, ಕಿರುಕುಳ ಮತ್ತು ಬಲವಂತದ ದುಡಿಮೆಗೆ ಬೇಸತ್ತು ಕೊನೆಗೆ ಈ ಮಕ್ಕಳು ಅಲ್ಲಿಂದ ಓಡಿಬಂದಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ