
ತುಮಕೂರು – ಇಲ್ಲಿನ ಮದರಸಾವೊಂದರಲ್ಲಿ ಮೌಲ್ವಿಯ ನಿರಂತರ ಕಿರುಕುಳಕ್ಕೆ ಬೇಸತ್ತು ಅಲ್ಲಿಂದ ಓಡಿಬಂದಿದ್ದ 24 ಮುಸ್ಲಿಂ ಮಕ್ಕಳು ಬೆಂಗಳೂರು ರೈಲು ನಿಲ್ದಾಣದಲ್ಲಿ ಪತ್ತೆಯಾಗಿದ್ದಾರೆ. ಬಿಹಾರದಿಂದ ಈ ಮಕ್ಕಳು ತುಮಕೂರಿನ ಅಮಲಾಪುರದಲ್ಲಿರುವ ಜಾಮಿಯಾ ಅರೇಬಿಯಾ ಹಸೀನಿಯಾ ಟ್ರಸ್ಟ್ ಮದರಸಾದಲ್ಲಿ ಕಲಿಯಲು ಬಂದಿದ್ದರು. ಮೌಲ್ವಿಯ ವಿರುದ್ಧ ಬಾಲ ನ್ಯಾಯ ಕಾಯ್ದೆ ಮತ್ತು ಬಾಲ ಕಾರ್ಮಿಕ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಈ ಘಟನೆಯ ತನಿಖೆ ನಡೆಸುತ್ತಿದ್ದಾರೆ.
ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಈ ಮಕ್ಕಳನ್ನು ಕಂಡು ರೈಲ್ವೆ ಭದ್ರತಾ ಪಡೆ ವಿಚಾರಣೆ ನಡೆಸಿದಾಗ ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ. ಮದರಸಾದ ಮೌಲ್ವಿ ಎಷ್ಟು ಕ್ರೂರವಾಗಿದ್ದನೆಂದರೆ, ಆತ ಕಲಿಯಲು ಬಂದ ಮಕ್ಕಳಿಂದ ಕಲ್ಲು ಹೊರುವ ಕೆಲಸ ಮಾಡಿಸುತ್ತಿದ್ದ ಎಂದು ಮಕ್ಕಳು ಆರೋಪಿಸಿದ್ದಾರೆ. ಪ್ರತಿದಿನ ಕಲ್ಲು ಮತ್ತು ಮಣ್ಣನ್ನು ಹೊರಲು ಹಚ್ಚಲಾಗುತ್ತಿತ್ತು. ಕೆಲಸ ಮಾಡಲು ನಿರಾಕರಿಸಿದರೆ ಮೌಲ್ವಿ ಅವರಿಗೆ ಮನಬಂದಂತೆ ಥಳಿಸಿ ಕಿರುಕುಳ ನೀಡುತ್ತಿದ್ದ. ಹಲವು ಬಾರಿ ಮಕ್ಕಳಿಗೆ ಸರಿಯಾಗಿ ಊಟವನ್ನೂ ನೀಡುತ್ತಿರಲಿಲ್ಲ ಎಂಬ ಆರೋಪವೂ ಇದೆ. ದೈಹಿಕ ದೌರ್ಜನ್ಯ, ಕಿರುಕುಳ ಮತ್ತು ಬಲವಂತದ ದುಡಿಮೆಗೆ ಬೇಸತ್ತು ಕೊನೆಗೆ ಈ ಮಕ್ಕಳು ಅಲ್ಲಿಂದ ಓಡಿಬಂದಿದ್ದಾರೆ.
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
Japan Illegal Mosque : ಜಪಾನ್ : ಪಾಕಿಸ್ತಾನ ನಿರ್ಮಿಸಿದ ಅಕ್ರಮ ಮಸೀದಿ ಧ್ವಂಸ !
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)
ಗೋಪಾಲಗಡ ಸರಕಾರದ್ದಾಗಿದ್ದು ಎಲ್ಲರಿಗೂ ಮುಕ್ತವಾಗಿದೆ : ವದಂತಿಗಳನ್ನು ನಂಬಿ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ !