ಮಿತ್ರ ಪಕ್ಷಗಳಿಂದ ವ್ಯಕ್ತವಾಗಿತ್ತು ವಿರೋಧ

ಚೆನ್ನೈ (ತಮಿಳುನಾಡು) – ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಜೋಸೆಫ್ ವಿಜಯ ಅವರು ಜ್ಯೋತಿಷಿ ರಿಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರನ್ನು ತಮ್ಮ ‘ವಿಶೇಷ ಕರ್ತವ್ಯಾಧಿಕಾರಿ’ಯನ್ನಾಗಿ (OSD) ನೇಮಕ ಮಾಡಿದ್ದರು. ಆದರೆ, ಈ ನಿರ್ಧಾರಕ್ಕೆ ಅವರ ಸರಕಾರಕ್ಕೆ ಬೆಂಬಲ ನೀಡುತ್ತಿರುವ ಪಕ್ಷಗಳಿಂದಲೇ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ನೇಮಕಾತಿ ಆದೇಶ ಹೊರಬಿದ್ದ ಕೆಲವೇ ಗಂಟೆಗಳಲ್ಲಿ ಅದನ್ನು ರದ್ದುಗೊಳಿಸಲಾಗಿದೆ.
TVK government forced to revoke the appointment of astrologer Rickey Radhan Pandit Vettrivel as OSD to CM Joseph Vijay after massive backlash from Congress and Left allies.
Pandit is a well-known celebrity and political astrologer with nearly 40 years of experience in Vedic… pic.twitter.com/53j3uE4zDq
— Sanatan Prabhat (@SanatanPrabhat) May 13, 2026
ರಾಧನ್ ಪಂಡಿತ್ ಅವರು ಚುನಾವಣೆಯಲ್ಲಿ ಜೋಸೆಫ್ ವಿಜಯ ಅವರ ವಿಜಯದ ಬಗ್ಗೆ ಭವಿಷ್ಯ ನುಡಿದಿದ್ದರು. ಚುನಾವಣಾ ಪ್ರಚಾರದ ಸಮಯದಲ್ಲಿ ಅವರು ಪಕ್ಷದ ವಕ್ತಾರರಾಗಿ ಮತ್ತು ಮುಖ್ಯಮಂತ್ರಿಗಳ ಅತ್ಯಂತ ನಂಬಿಕಸ್ತ ಸಲಹೆಗಾರರಾಗಿ ಜವಾಬ್ದಾರಿ ನಿಭಾಯಿಸಿದ್ದರು. ರಿಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರಿಗೆ ಜ್ಯೋತಿಷ್ಯ ಮತ್ತು ಸಂಖ್ಯಾಶಾಸ್ತ್ರದಲ್ಲಿ ಸುಮಾರು 40 ವರ್ಷಗಳ ಅನುಭವವಿದೆ. ಕೇವಲ ಜೋಸೆಫ್ ವಿಜಯ ಮಾತ್ರವಲ್ಲದೆ, ತಮಿಳುನಾಡಿನ ದಿವಂಗತ ಮುಖ್ಯಮಂತ್ರಿ ಜಯಲಲಿತಾ ಅವರು ಕೂಡ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ರಾಧನ್ ಪಂಡಿತ್ ಅವರ ಸಲಹೆ ಪಡೆಯುತ್ತಿದ್ದರು ಎಂದು ಹೇಳಲಾಗುತ್ತದೆ.
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
Japan Illegal Mosque : ಜಪಾನ್ : ಪಾಕಿಸ್ತಾನ ನಿರ್ಮಿಸಿದ ಅಕ್ರಮ ಮಸೀದಿ ಧ್ವಂಸ !
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)
ಗೋಪಾಲಗಡ ಸರಕಾರದ್ದಾಗಿದ್ದು ಎಲ್ಲರಿಗೂ ಮುಕ್ತವಾಗಿದೆ : ವದಂತಿಗಳನ್ನು ನಂಬಿ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ !