ಆರೋಪಿಗಳ ಬಂಧನ

ನವದೆಹಲಿ – ದೆಹಲಿಯಲ್ಲಿ ಒಂದು ಚಲಿಸುವ ಬಸ್ಸಿನಲ್ಲಿ ಚಾಲಕ ಮತ್ತು ನಿರ್ವಾಹಕನು ಓರ್ವ ಮಹಿಳೆಯ ಮೇಲೆ ೨ ಗಂಟೆಗಳ ಕಾಲ ಅತ್ಯಾಚಾರ ನಡೆಸಿದ್ದಾರೆ. ಪೊಲೀಸರು ಬಸ್ಸನ್ನು ಜಪ್ತಿ ಮಾಡಿದ್ದು, ಚಾಲಕ ಮತ್ತು ನಿರ್ವಾಹಕನನ್ನು ಬಂಧಿಸಿದ್ದಾರೆ. ಈ ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಸಂತ್ರಸ್ತ ಮಹಿಳೆ ಪೀತಂಪುರದ ನಿವಾಸಿಯಾಗಿದ್ದು, ಮಂಗೋಲಪುರಿಯ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದಾಳೆ. ಅವಳಿಗೆ ೨ ಮಕ್ಕಳಿದ್ದಾರೆ. ಸಂತ್ರಸ್ತ ಮಹಿಳೆಯು ತನ್ನ ದೂರಿನಲ್ಲಿ, ೧೧ ಮೇ ರಂದು ತಡರಾತ್ರಿ ಕೆಲಸ ಮುಗಿಸಿ ಹಿಂತಿರುಗುತ್ತಿದ್ದಾಗ, ರಾಣಿ ಬಾಗ್ನ ಸರಸ್ವತಿ ವಿಹಾರ್ ಬಸ್ ನಿಲ್ದಾಣದಲ್ಲಿ ಬಸ್ ಚಾಲಕ ಮತ್ತು ನಿರ್ವಾಹಕನು ಅವಳಿಗೆ ಸಮಯ ಕೇಳುವ ನೆಪದಲ್ಲಿ ತನ್ನನ್ನು ಬಸ್ಸಿನೊಳಗೆ ಎಳೆದೊಯ್ದರು ಎಂದು ಹೇಳಿದ್ದಾಳೆ. ಅವಳ ಮೇಲೆ ಅತ್ಯಾಚಾರ ಎಸಗಿ ನಂತರ ಹೊರಗೆ ತಳ್ಳಿದ್ದಾರೆ. ಮಹಿಳೆಯ ದೂರಿನ ಮೇರೆಗೆ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರು ಚಾಲಕ ಉಮೇಶ್ ಮತ್ತು ನಿರ್ವಾಹಕ ರಾಮೇಂದ್ರ ಎಂಬುವವರನ್ನು ಬಂಧಿಸಿದ್ದಾರೆ.
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ನಾಗಪುರ: ಮಾನಸಿಕ ಒತ್ತಡದಿಂದಾಗಿ ‘ನೀಟ್’ ಪರೀಕ್ಷೆಯ ವಿದ್ಯಾರ್ಥಿನಿ ಆತ್ಮಹತ್ಯೆ
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !
ಬೆಂಗಳೂರಿನಲ್ಲಿ ಕಸ ಹಾಯುವ ಸೈಬುಲ್ನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ!