೧೨೦ ವಾಹನಗಳ ಮೆರವಣಿಗೆ ನಡೆಸಿದ್ದರು

ಗ್ವಾಲಿಯರ್ (ಮಧ್ಯಪ್ರದೇಶ) – ಭಿಂಡ್ ಜಿಲ್ಲೆಯ ಭಾಜಪದ ಕಿಸಾನ್ ಮೋರ್ಚಾದ ಜಿಲ್ಲಾಧ್ಯಕ್ಷ ಸಜ್ಜನ್ ಸಿಂಗ್ ಯಾದವ್ ಅವರನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಇಂಧನ ಉಳಿತಾಯದ ಕರೆಯನ್ನು ನಿರ್ಲಕ್ಷಿಸಿ, ಅವರು ನೂರಾರು ವಾಹನಗಳ ಬೆಂಗಾವಲು ಪಡೆಯೊಂದಿಗೆ ದೊಡ್ಡ ಸ್ವಾಗತ ಮೆರವಣಿಗೆಯನ್ನು ಆಯೋಜಿಸಿದ್ದಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಪಕ್ಷವು ಅವರ ಈ ಕ್ರಮವನ್ನು ಶಿಸ್ತುಭಂಗ ಎಂದು ಪರಿಗಣಿಸಿ, ಅವರನ್ನು ತಕ್ಷಣವೇ ಜಿಲ್ಲಾಧ್ಯಕ್ಷ ಹುದ್ದೆಯಿಂದ ತೆಗೆದುಹಾಕಿದೆ.
ಮೇ ೧೩ ರಂದು ಸಜ್ಜನ್ ಸಿಂಗ್ ಯಾದವ್ ಅವರನ್ನು ಭಿಂಡ್ ಜಿಲ್ಲೆಯ ಭಾಜಪ ಕಿಸಾನ್ ಮೋರ್ಚಾದ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಇದರ ನಂತರ ಅವರು ಗ್ವಾಲಿಯರ್ನಿಂದ ಭಿಂಡ್ಗೆ ತಲುಪಿದಾಗ, ಅವರ ಬೆಂಬಲಿಗರು ಅವರಿಗೆ ಭವ್ಯ ಸ್ವಾಗತ ಕೋರಿದರು. ಈ ಸಮಯದಲ್ಲಿ ಸುಮಾರು ೧೨೦ ವಾಹನಗಳ ಉದ್ದನೆಯ ಬೆಂಗಾವಲು ಪಡೆ ಅವರೊಂದಿಗಿತ್ತು. ಇಡೀ ಮಾರ್ಗದಲ್ಲಿ ಸಂಚಾರ ದಟ್ಟಣೆಯ (ಟ್ರಾಫಿಕ್ ಜಾಮ್) ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಮೆರವಣಿಗೆಯ ವಿಡಿಯೋ ಮತ್ತು ಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಪ್ರಮಾಣದಲ್ಲಿ ಪ್ರಸಾರವಾಗಿದ್ದವು.
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)
ಗೋಪಾಲಗಡ ಸರಕಾರದ್ದಾಗಿದ್ದು ಎಲ್ಲರಿಗೂ ಮುಕ್ತವಾಗಿದೆ : ವದಂತಿಗಳನ್ನು ನಂಬಿ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ !
ಪಾಟಲಿಪುತ್ರ (ಬಿಹಾರ) ಇಲ್ಲಿ ಪ್ರಸಿದ್ಧ ಖಾನ್ ಸರ್ ಅವರ ತರಬೇತಿ ಕೇಂದ್ರದ ಮೇಲೆ ದಾಳಿ