ಬಂಧಿತರಲ್ಲಿ ಹೆಚ್ಚಿನವರು ಶ್ರೀಲಂಕಾದವರು!

ಚೆನ್ನೈ (ತಮಿಳುನಾಡು) – ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ನಕಲಿ ಮತದಾನ ಮಾಡಿದ ಆರೋಪದ ಮೇಲೆ 25 ವಿದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ. ಚುನಾವಣೆಯ ವೇಳೆ ನಕಲಿ ದಾಖಲೆಗಳನ್ನು ಬಳಸಿ ಮತದಾನ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.
1. ಚೆನ್ನೈ, ಮಧುರೈ ಮತ್ತು ಇತರ ವಿಮಾನ ನಿಲ್ದಾಣಗಳ ಮೂಲಕ ಭಾರತ ಬಿಟ್ಟು ವಿದೇಶಕ್ಕೆ ತೆರಳಲು ಸಿದ್ಧತೆ ನಡೆಸುತ್ತಿದ್ದಾಗ ಪೊಲೀಸ್ ಮತ್ತು ‘ಇಮಿಗ್ರೇಷನ್’ (ವಲಸೆ) ಇಲಾಖೆಯ ಜಂಟಿ ಕಾರ್ಯಾಚರಣೆಯಲ್ಲಿ ಇವರನ್ನು ಬಂಧಿಸಲಾಯಿತು. ಈ ವಿದೇಶಿ ಪ್ರಜೆಗಳ ಬೆರಳುಗಳ ಮೇಲೆ ಮತದಾನದ ನಂತರ ಹಾಕಲಾಗುವ ಷಾಯಿ ಕಂಡುಬಂದಿದೆ. ಸದ್ಯ ಬಂಧಿತರ ವಿಚಾರಣೆ ನಡೆಸಲಾಗುತ್ತಿದೆ.
2. ತನಿಖಾ ಸಂಸ್ಥೆಗಳ ಪ್ರಕಾರ, ಬಂಧಿತರಲ್ಲಿ ಹೆಚ್ಚಿನವರು ಶ್ರೀಲಂಕಾದ ನಾಗರಿಕರಾಗಿದ್ದಾರೆ, ಇನ್ನು ಕೆಲವರು ಬ್ರಿಟನ್ ಮತ್ತು ಕೆನಡಾ ಪಾಸ್ಪೋರ್ಟ್ ಹೊಂದಿದ್ದಾರೆ.
3. ಪೊಲೀಸರ ಮಾಹಿತಿಯ ಪ್ರಕಾರ, ಅನೇಕ ಶಂಕಿತರು ಚುನಾವಣೆ ಘೋಷಣೆಯಾದ ತಕ್ಷಣ ತಮಿಳುನಾಡಿಗೆ ಬಂದಿದ್ದರು ಮತ್ತು ಮತದಾನದ ನಂತರ ಬೆರಳಿನ ಷಾಯಿ ಅಳಿಸಿಹೋಗಲಿ ಎಂಬ ಕಾರಣಕ್ಕೆ ಕೆಲವು ದಿನಗಳ ಕಾಲ ರಾಜ್ಯದಲ್ಲೇ ಉಳಿದುಕೊಂಡಿದ್ದರು.
4. ಅನೇಕ ವಿದೇಶಿ ಪ್ರಜೆಗಳು ಇನ್ನೂ ಭಾರತದಲ್ಲಿರುವ ಸಾಧ್ಯತೆಯಿದೆ ಮತ್ತು ಮತದಾನಕ್ಕೂ ಮೊದಲು ಭಾರತಕ್ಕೆ ಬಂದು ಇನ್ನೂ ಮರಳದವರ ಮಾಹಿತಿಯನ್ನು ತನಿಖಾ ಸಂಸ್ಥೆಗಳು ಪರಿಶೀಲಿಸುತ್ತಿವೆ. ಈ ಸಂಪೂರ್ಣ ಪ್ರಕರಣದ ವಿವರವಾದ ವರದಿಯನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗಿದೆ.
5. ಇಂತಹ ಪ್ರಕರಣಗಳು ಈ ಹಿಂದೆಯೂ ವರದಿಯಾಗಿವೆ. 2025 ರಲ್ಲಿ ಇಮಿಗ್ರೇಷನ್ ಅಧಿಕಾರಿಗಳು ಸುಮಾರು 100 ವಿದೇಶಿ ಪ್ರಜೆಗಳ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವಂತೆ ಚುನಾವಣಾ ಆಯೋಗಕ್ಕೆ ವಿನಂತಿಸಿದ್ದರು.
6. ತನಿಖೆಯ ವೇಳೆ ವಿದೇಶಿ ಪ್ರಜೆಗಳು ಮತದಾರರ ಗುರುತಿನ ಚೀಟಿ ಹೊಂದಿದ್ದು, ತಪ್ಪು ವಿಳಾಸದ ಆಧಾರದ ಮೇಲೆ ಮತದಾನದ ಹಕ್ಕನ್ನು ಪಡೆದಿರುವುದು ಕಂಡುಬಂದಿದೆ. ಈ ವರ್ಷವೂ ಸುಮಾರು 60 ವಿದೇಶಿ ಪ್ರಜೆಗಳ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ.
7. ಚುನಾವಣಾ ಆಯೋಗದ ನಿಯಮಗಳ ಪ್ರಕಾರ, ಬೇರೆ ಯಾವುದೇ ದೇಶದ ಪೌರತ್ವವನ್ನು ಸ್ವೀಕರಿಸದ ವಿದೇಶಿ ಮತದಾರರು ಮಾತ್ರ ಮತ ಚಲಾಯಿಸಬಹುದು. ಅನಿವಾಸಿ ಭಾರತೀಯ (NRI) ಮತದಾರರಾಗಿ ನೋಂದಾಯಿಸಿಕೊಳ್ಳಲು ಭಾರತೀಯ ಪೌರತ್ವವನ್ನು ಉಳಿಸಿಕೊಳ್ಳುವುದು ಮತ್ತು ಮತದಾನದ ಸಮಯದಲ್ಲಿ ಭಾರತೀಯ ಪಾಸ್ಪೋರ್ಟ್ ಅನ್ನು ಹಾಜರುಪಡಿಸುವುದು ಕಡ್ಡಾಯವಾಗಿದೆ.
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine
ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ ವಿಚಾರದಲ್ಲಿ ಪಾಕಿಸ್ತಾನದಿಂದ ಕಾಶ್ಮೀರ ಗಡಿಯಲ್ಲಿ 35 ಡ್ರೋನ್ ವಿರೋಧಿ ಘಟಕಗಳ ನಿಯೋಜನೆ! : Indus Water Treaty Crisis
‘ಮಾನವಾಧಿಕಾರ ಉಲ್ಲಂಘನೆಯಾದರೆ ಭಾರತದ ಮೇಲೆ ಟೀಕಿಸಲು ಹಿಂಜರಿಯುವುದಿಲ್ಲ!'(ವಂತೆ) : US Lawmakers
ಮಾನವ ಹಕ್ಕುಗಳ ಉಲ್ಲಂಘನೆ ವಿರುದ್ಧ ಧ್ವನಿ ಎತ್ತಿದ ಮೆಹರಂಗ್ ಬಲೋಚ್ ಗೆ ಪಾಕಿಸ್ತಾನದಿಂದ ಜೀವಾವಧಿ ಶಿಕ್ಷೆ !
ಇರಾನ್ ಮೇಲಿನ ನಿರ್ಬಂಧಗಳಿಗೆ 60 ದಿನಗಳ ವಿನಾಯಿತಿ ನೀಡಿದ ಅಮೆರಿಕ!
ಮಹಾರಾಷ್ಟ್ರ: ೪ ತಿಂಗಳಲ್ಲಿ ೨೫೪ ಕೋಟಿ ೫೩ ಲಕ್ಷ ರೂಪಾಯಿ ಮೌಲ್ಯದ ಮಾದಕ ವಸ್ತು ಜಪ್ತಿ! – ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್