
ಹರಿದ್ವಾರ (ಉತ್ತರಾಖಂಡ) – ಇಲ್ಲಿನ ನಿಷೇಧಿತ ಪ್ರದೇಶದಲ್ಲಿ ಆನ್ಲೈನ್ ಮೂಲಕ ಮಾಂಸಾಹಾರವನ್ನು ವಿತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸ್ಥಳೀಯ ಪಾಲಿಕೆ ಆಡಳಿತವು ‘ರ್ಯಾಪಿಡೋ’ ಆನ್ಲೈನ್ ವಿತರಣಾ ಸಂಸ್ಥೆಗೆ ಇ-ಮೇಲ್ ಮೂಲಕ ಖಡಕ್ ಎಚ್ಚರಿಕೆ ನೀಡಿದೆ. ನಿಷೇಧಿತ ಪ್ರದೇಶದಲ್ಲಿ ಇಂತಹ ವಸ್ತುಗಳನ್ನು ವಿತರಿಸಬಾರದು ಮತ್ತು ತಮ್ಮ ಉದ್ಯೋಗಿಗಳಿಗೆ ಈ ಬಗ್ಗೆ ಸ್ಪಷ್ಟ ಸೂಚನೆಗಳನ್ನು ನೀಡಬೇಕೆಂದು ಸಂಸ್ಥೆಗೆ ಸೂಚಿಸಲಾಗಿದೆ. ಹರಿದ್ವಾರವು ಮಾಂಸ ಮತ್ತು ಮದ್ಯ ನಿಷೇಧಿತ ಪ್ರದೇಶವಾಗಿದ್ದರೂ ಸಹ, ಕೆಲವು ಆನ್ಲೈನ್ ವಿತರಣಾ ಸಂಸ್ಥೆಗಳು ಇಲ್ಲಿ ಮಾಂಸಾಹಾರವನ್ನು ತಲುಪಿಸುತ್ತಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಹಿಂದೂತ್ವನಿಷ್ಠ ಸಂಘಟನೆಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ.
ಪತ್ನಿಯ ಭಾವಚಿತ್ರದ ಮೇಲೆ ಉಗುಳಿ ಗಂಗಾನದಿಯಲ್ಲಿ ವಿಸರ್ಜಿನೆ !
ಹರಿದ್ವಾರದ ಜಗತ್ಪ್ರಸಿದ್ಧ ಹರ್ ಕಿ ಪೈಡಿಯಲ್ಲಿನ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವ್ಯಕ್ತಿಯೊಬ್ಬ ತನ್ನ ಪತ್ನಿಯ ಭಾವಚಿತ್ರದ ಮೇಲೆ ಉಗುಳಿ, ಅದನ್ನು ಗಂಗಾನದಿಯಲ್ಲಿ ಹರಿಬಿಡುತ್ತಿರುವುದು ಕಂಡುಬಂದಿದೆ. ತನ್ನ ಪತ್ನಿಯ ‘ರೀಲ್ಸ್’ (ಸಾಮಾಜಿಕ ಮಾಧ್ಯಮಗಳ ವಿಡಿಯೋ) ಮಾಡುವ ಹವ್ಯಾಸದಿಂದ ಬೇಸತ್ತಿದ್ದ ಈ ವ್ಯಕ್ತಿ, ಕೋಪದಲ್ಲಿ ಜೀವಂತ ಪತ್ನಿಗೇ ‘ಪಿಂಡದಾನ’ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ.
ನಾಯಿಯನ್ನು ಗಂಗಾನದಿಯಲ್ಲಿ ಸ್ನಾನ ಮಾಡಿಸಿದ ಘಟನೆ!
ಕೆಲವು ದಿನಗಳ ಹಿಂದಷ್ಟೇ ಮಹಿಳೆಯೊಬ್ಬಳು ನಾಯಿಯನ್ನು ಗಂಗೆಯಲ್ಲಿ ಸ್ನಾನ ಮಾಡಿಸಿದ್ದರಿಂದ ದೊಡ್ಡ ವಿವಾದ ಸೃಷ್ಟಿಯಾಗಿತ್ತು. ಪ್ರಸ್ತುತ ಇಂತಹ ಹಲವಾರು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದರಿಂದ ತೀರ್ಥ ಪುರೋಹಿತರು ಮತ್ತು ಹಿಂದೂತ್ವನಿಷ್ಠ ಸಂಘಟನೆಗಳಲ್ಲಿ ಆಕ್ರೋಶ ವ್ಯಕ್ತವಾಗಿವೆ. ಈ ಪ್ರಕರಣಗಳ ಬಗ್ಗೆ ತನಿಖೆ ನಡೆಸಿ ದೋಷಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ. ಗಂಗಾನದಿಯ ಬಗ್ಗೆ ಕೋಟ್ಯಂತರ ಜನರ ಶ್ರದ್ಧೆ-ಭಕ್ತಿಯಿದೆ; ಆದರೆ ಪದೇ-ಪದೇ ಇಂತಹ ಘಟನೆಗಳು ನಡೆಯುತ್ತಿವೆ. ಕೆಲವೊಮ್ಮೆ ಯುವತಿಯರು ಸಿನಿಮಾದ ಹಾಡುಗಳಿಗೆ ನೃತ್ಯ ಮಾಡುವುದು, ಇನ್ನು ಕೆಲವೊಮ್ಮೆ ಯುವಕರು ಗಂಗಾ ನದಿಯ ದಡದಲ್ಲಿ ಮದ್ಯಪಾನ ಮಾಡುವ ವಿಡಿಯೋಗಳು ಕೂಡ ಪ್ರಸಾರವಾಗುತ್ತಿವೆ.
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)
ಗೋಪಾಲಗಡ ಸರಕಾರದ್ದಾಗಿದ್ದು ಎಲ್ಲರಿಗೂ ಮುಕ್ತವಾಗಿದೆ : ವದಂತಿಗಳನ್ನು ನಂಬಿ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ !
ಪಾಟಲಿಪುತ್ರ (ಬಿಹಾರ) ಇಲ್ಲಿ ಪ್ರಸಿದ್ಧ ಖಾನ್ ಸರ್ ಅವರ ತರಬೇತಿ ಕೇಂದ್ರದ ಮೇಲೆ ದಾಳಿ