
ಆಸನಸೋಲ್ (ಬಂಗಾಳ) – ಮುಖ್ಯಮಂತ್ರಿ ಶುಭೇಂದು ಅಧಿಕಾರಿ ಅವರು ರಾಜ್ಯದ ಪ್ರಾರ್ಥನಾ ಮಂದಿರಗಳ ಮೇಲಿನ ಧ್ವನಿವರ್ಧಕಗಳ ಧ್ವನಿಯನ್ನು ಮಿತಿಯಲ್ಲಿಡುವಂತೆ ಆದೇಶ ನೀಡಿದ ನಂತರ, ಸ್ಥಳೀಯ ಪೊಲೀಸರು ಆ ಬಗ್ಗೆ ತಪಾಸಣೆ ನಡೆಸಲು ಪ್ರಯತ್ನಿಸುತ್ತಿದ್ದಾಗ ಮತಾಂಧ ಮುಸಲ್ಮಾನರು ವಿರೋಧಿಸಿದರು ಮತ್ತು ಜಹಾಂಗೀರ್ ಮೊಹಲ್ಲಾ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ‘ಅಲ್ಲಾಹೂ ಅಕ್ಬರ್’ (ಅಲ್ಲಾಹನು ಶ್ರೇಷ್ಠನು) ಮತ್ತು ‘ನಾರಾ-ಎ-ತಕ್ಬೀರ್’(ಅಲ್ಲಾ ಎಲ್ಲರಿಗಿಂತ ದೊಡ್ಡವನು) ಎಂಬ ಘೋಷಣೆಗಳನ್ನು ಕೂಗುತ್ತಾ ಪೊಲೀಸ್ ಠಾಣೆಯನ್ನು ಧ್ವಂಸಗೊಳಿಸಿದರು, ಹಾಗೂ ಕಲ್ಲು ತೂರಾಟ ನಡೆಸಿದರು. ಇದನ್ನು ತಡೆಯಲು ಪೊಲೀಸರು ಲಾಠಿ ಪ್ರಹಾರ ನಡೆಸಿ, ಅಶ್ರುವಾಯು ಸಿಡಿಸಿದರು. ಈ ಘಟನೆಯು ರೇಲಪಾರದಲ್ಲಿ ನಡೆದಿದೆ. ಘಟನೆಯ ನಂತರ ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿ, ಹಿಂಸಾಚಾರದಲ್ಲಿ ಭಾಗಿಯಾಗಿದ್ದ ಕೆಲವು ಮುಸಲ್ಮಾನರನ್ನು ಬಂಧಿಸಿದ್ದಾರೆ. ಶಾಂತಿ ಕಾಪಾಡಲು ಮತ್ತು ವದಂತಿಗಳು ಹರಡದಂತೆ ತಡೆಯಲು ತಾತ್ಕಾಲಿಕವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
1. ಪೊಲೀಸ್ ಆಡಳಿತವು ರಾಜ್ಯ ಸರಕಾರದ ನಿರ್ದೇಶನದಂತೆ ಆಸನಸೋಲ್ ನ ಹಲವು ಪ್ರದೇಶಗಳಲ್ಲಿನ ಪ್ರಾರ್ಥನಾ ಮಂದಿರಗಳ ಮೈಕುಗಳ ಧ್ವನಿ ಕಡಿಮೆ ಇಡುವಂತೆ ತಿಳಿಸಿತ್ತು. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಹಗಲಿನ ವೇಳೆಯಲ್ಲಿ ರೇಲಪಾರ್ ಪ್ರದೇಶದಲ್ಲಿ ಪೊಲೀಸರು ಮತ್ತು ಸ್ಥಳೀಯ ಮುಸಲ್ಮಾನರ ನಡುವೆ ಚರ್ಚೆ ನಡೆದಿತ್ತು. ಸಂಜೆಯ ವೇಳೆ ಭಾರಿ ಸಂಖ್ಯೆಯಲ್ಲಿ ಮುಸಲ್ಮಾನರು ಪೊಲೀಸ್ ಠಾಣೆಗೆ ತಲುಪಿದರು. ಘೋಷಣೆಗಳನ್ನು ಕೂಗುತ್ತಾ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದರು. ಪೊಲೀಸ್ ಮತ್ತು ಸಾರ್ವಜನಿಕರ ವಾಹನಗಳನ್ನು ಧ್ವಂಸಗೊಳಿಸಿದರು. ಈ ಘಟನೆಯಲ್ಲಿ ಕೆಲವು ಪೊಲೀಸರು ಗಾಯಗೊಂಡಿದ್ದಾರೆ.
2. ಈ ಘಟನೆಯ ನಂತರ ಪ್ರದೇಶದಲ್ಲಿ ಅರೆಸೇನಾ ಪಡೆಯನ್ನು ನಿಯೋಜಿಸಲಾಗಿದೆ. ಪೊಲೀಸ್ ಉಪ ಆಯುಕ್ತರಾದ ವಿ.ಜಿ.ಸತೀಶ್ ಪಸುಮಾರ್ತಿ ಅವರು ಈ ಬಗ್ಗೆ ಮಾತನಾಡಿ, ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಯಾವುದೇ ಸಮಸ್ಯೆಯಿಲ್ಲ. ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಆರೋಪಿಗಳನ್ನು ಗುರುತಿಸಲಾಗುತ್ತಿದೆ. ಈ ಘಟನೆಯಲ್ಲಿ ಭಾಗಿಯಾಗಿರುವ ಎಲ್ಲಾ ವ್ಯಕ್ತಿಗಳ ವಿರುದ್ಧ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ