ನ್ಯಾಯವಾದಿ ಅಮಿತಾ ಸಚ್ದೇವ ಅವರಿಂದ ಅರ್ಜಿ ಸಲ್ಲಿಕೆ

ನವದೆಹಲಿ – ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರು ಇತ್ತೀಚೆಗೆ ಸನಾತನ ಧರ್ಮದ ನಿರ್ಮೂಲನೆ ಕುರಿತು ಮಾಡಿದ ಹೇಳಿಕೆಯನ್ನು ಪರಿಗಣನೆಗೆ ತೆಗೆದುಕೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿಯೊಂದನ್ನು ಸಲ್ಲಿಸಲಾಗಿದೆ. ನ್ಯಾಯವಾದಿ ಅಮಿತಾ ಸಚ್ದೇವ ಅವರು ಈ ನ್ಯಾಯಾಂಗ ನಿಂದನೆ ಅರ್ಜಿಯನ್ನು ಸಲ್ಲಿಸಿದ್ದು, ಸುಪ್ರೀಂ ಕೋರ್ಟ್ನ ಆದೇಶದ ಹೊರತಾಗಿಯೂ ಪೊಲೀಸರು ಸ್ಟಾಲಿನ್ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅದರಲ್ಲಿ ಪ್ರತಿಪಾದಿಸಿದ್ದಾರೆ. ಈ ಪ್ರಕರಣದ ವಿಚಾರಣೆಯು ಮೇ ೧೯ ರಂದು ನಡೆಯಲಿದೆ.
ಡಿಎಂಕೆ ನಾಯಕ ಉದಯನಿಧಿಯವರು ಸೆಪ್ಟೆಂಬರ್ ೨೦೨೩ ರಲ್ಲಿ ಸನಾತನ ಧರ್ಮವನ್ನು ಮಲೇರಿಯಾ ಮತ್ತು ಡೆಂಗ್ಯೂ ನಂತಹ ಕಾಯಿಲೆಗಳಿಗೆ ಹೋಲಿಸಿ, ಅದರ ನಿರ್ಮೂಲನೆಗೆ ಕರೆ ನೀಡಿದ್ದರು. ಸನಾತನ ಧರ್ಮವು ಜಾತಿ ವ್ಯವಸ್ಥೆ ಮತ್ತು ಐತಿಹಾಸಿಕ ತಾರತಮ್ಯದ ಆಧಾರದ ಮೇಲಿದೆ ಎಂದು ಅವರು ಹೇಳಿದ್ದರು. ಈ ಹೇಳಿಕೆಯ ಹಿನ್ನೆಲೆಯಲ್ಲಿ ಅವರ ವಿರುದ್ಧ ಹಲವು ಕ್ರಿಮಿನಲ್ ದೂರುಗಳು ಹಾಗೂ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೋರಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿಗಳು ಸಲ್ಲಿಕೆಯಾಗಿದ್ದವು.
ಪದೇ ಪದೇ ಸನಾತನ ಧರ್ಮವನ್ನು ಅವಮಾನಿಸುತ್ತಿರುವ ಉದಯನಿಧಿ ಸ್ಟಾಲಿನ್!
ನ್ಯಾಯವಾದಿ ಸಚ್ದೇವ ಅವರು ಈಗ ಸಲ್ಲಿಸಿರುವ ಅರ್ಜಿಯಲ್ಲಿ, ಉದಯನಿಧಿ ಸ್ಟಾಲಿನ್ ಅವರು ಮೇ ೧೨ ರಂದು ತಮಿಳುನಾಡು ವಿಧಾನಸಭೆಯ ಮೊದಲ ಅಧಿವೇಶನದಲ್ಲಿ ಸನಾತನ ಧರ್ಮವನ್ನು ನಿರ್ಮೂಲನೆ ಮಾಡಲು ಮತ್ತೆ ಕರೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ಜನರ ಮಧ್ಯೆ ಒಡಕು ಉಂಟುಮಾಡುವ ಸನಾತನ ಧರ್ಮವು ಖಂಡಿತವಾಗಿಯೂ ನಾಶವಾಗಬೇಕು, ಎಂದು ಅವರು ಹೇಳಿದ್ದರು. ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ಬಾಕಿ ಇರುವಾಗ ಮತ್ತು ನ್ಯಾಯಾಲಯವು ಈ ಹಿಂದೆ ಅವರ ಹೇಳಿಕೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರೂ ಸಹ, ಉದಯನಿಧಿಯವರು ಇಂತಹದೇ ಹೇಳಿಕೆಗಳನ್ನು ನೀಡುವುದನ್ನು ಮುಂದುವರಿಸಿದ್ದಾರೆ. ಇದು ನ್ಯಾಯಾಂಗ ಪ್ರಕ್ರಿಯೆಯನ್ನು ಉದ್ದೇಶಪೂರ್ವಕವಾಗಿ ಗೌರವಿಸದಿರುವುದಾಗಿದೆ.
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
India-Nepal Border Dispute : ನೇಪಾಳದೊಂದಿಗಿನ ಗಡಿ ವಿವಾದದಲ್ಲಿ ಮೂರನೇ ಪಕ್ಷದ ಅಗತ್ಯವಿಲ್ಲ! – ಭಾರತ
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)
ಗೋಪಾಲಗಡ ಸರಕಾರದ್ದಾಗಿದ್ದು ಎಲ್ಲರಿಗೂ ಮುಕ್ತವಾಗಿದೆ : ವದಂತಿಗಳನ್ನು ನಂಬಿ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ !