ಹಿಂದೂಗಳ ವಿರೋಧದ ನಂತರ ಶಿಕ್ಷಕಿ ಹಿಬಾ ಫಾತಿಮಾಳನ್ನು ಕೆಲಸದಿಂದ ವಜಾ

ಕಾನ್ಪುರ (ಉತ್ತರ ಪ್ರದೇಶ) – ಇಲ್ಲಿನ ಮದರ್ ತೆರೇಸಾ ಉನ್ನತ ಮಾಧ್ಯಮಿಕ ಶಾಲೆಯಲ್ಲಿ ೬ನೇ ತರಗತಿಯ ವಿದ್ಯಾರ್ಥಿಯೊಬ್ಬ ಕೇವಲ ಹಣೆ ಮೇಲೆ ತಿಲಕ ಇಟ್ಟುಕೊಂಡು ಶಾಲೆಗೆ ಬಂದಿದ್ದರಿಂದ ಆತನ ಮೇಲೆ ಹಲ್ಲೆ ಮಾಡಲಾಗಿದೆ. ಶಿಕ್ಷಕಿ ಹಿಬಾ ಫಾತಿಮಾ ವಿದ್ಯಾರ್ಥಿಗೆ ತಿಲಕವನ್ನು ಅಳಿಸಲು ಹೇಳಿದ್ದಲ್ಲದೆ, ಆತನಿಗೆ ಕಪಾಳಮೋಕ್ಷ ಕೂಡ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ. ಈ ಘಟನೆಯ ನಂತರ ವಿದ್ಯಾರ್ಥಿ ಅಳುತ್ತಾ ಮನೆಗೆ ತಲುಪಿ ತನ್ನ ಮನೆಯವರಿಗೆ ಎಲ್ಲ ವಿಷಯವನ್ನು ತಿಳಿಸಿದನು. ಆನಂತರ ಮನೆಯವರು ಶಾಲಾ ಆಡಳಿತ ಮಂಡಳಿ ಹಾಗೂ ಪೊಲೀಸರಿಗೆ ದೂರು ನೀಡಿದರು. ಘಟನೆಯ ಮಾಹಿತಿ ತಿಳಿದ ತಕ್ಷಣ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ನ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಶಾಲೆಗೆ ಆಗಮಿಸಿ ಶಾಲೆಯ ಹೊರಗೆ ಭಾರಿ ಪ್ರತಿಭಟನೆ ನಡೆಸಿದರು. ಅವರು ಆರೋಪಿ ಶಿಕ್ಷಕಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಪೊಲೀಸರ ಸಮ್ಮುಖದಲ್ಲಿ ಶಾಲಾ ಆಡಳಿತ ಮಂಡಳಿ ಮತ್ತು ಎಬಿವಿಪಿ ಕಾರ್ಯಕರ್ತರ ನಡುವೆ ಒಂದು ಗಂಟೆ ಕಾಲ ಚರ್ಚೆ ನಡೆಯಿತು. ಹೆಚ್ಚುತ್ತಿರುವ ಒತ್ತಡದ ನಂತರ ಶಾಲಾ ಆಡಳಿತ ಮಂಡಳಿಯು ಶಿಕ್ಷಕಿಯನ್ನು ಕೆಲಸದಿಂದ ವಜಾಗೊಳಿಸಿತು. ಆನಂತರ ಪ್ರತಿಭಟನೆ ಮಾಡುತ್ತಿದ್ದ ಕಾರ್ಯಕರ್ತರು ಶಾಂತರಾದರು. (ಇದರರ್ಥ ಒಂದು ವೇಳೆ ಹಿಂದುತ್ವವಾದಿಗಳು ಈ ಘಟನೆಗೆ ಆಕ್ಷೇಪ ವ್ಯಕ್ತಪಡಿಸದಿದ್ದರೆ, ಕೇವಲ ಮನೆಯವರ ದೂರಿನ ಮೇರೆಗೆ ಶಾಲೆ ಮತ್ತು ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿರಲಿಲ್ಲ. ಹಿಂದೂಗಳೇ, ಇದರಿಂದ ಹಿಂದುತ್ವವಾದಿ ಸಂಘಟನೆಗಳ ಮಹತ್ವವನ್ನು ಅರಿತುಕೊಳ್ಳಿ ಮತ್ತು ಅವರ ಸಹಾಯವನ್ನು ಪಡೆಯುವುದರ ಜೊತೆಗೆ ಅವರ ಬೆನ್ನಿಗೆ ನಿಲ್ಲಿ! – ಸಂಪಾದಕರು)
ಎಬಿವಿಪಿಯ ಮಹಾನಗರ ಕಾರ್ಯದರ್ಶಿ ಸುಧಾಂಶು ತ್ರಿಪಾಠಿ ಮಾತನಾಡಿ, ತಿಲಕವು ಸನಾತನ ಸಂಸ್ಕೃತಿಯ ಸಂಕೇತವಾಗಿದೆ ಮತ್ತು ಯಾವುದೇ ವಿದ್ಯಾರ್ಥಿಗೆ ಆತನ ಧಾರ್ಮಿಕ ಸಂಕೇತದ ಕಾರಣಕ್ಕಾಗಿ ಕಿರುಕುಳ ನೀಡುವುದು ತಪ್ಪು, ಎಂದು ಹೇಳಿದರು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ