ಕೇರಳದ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಪ್ರಮಾಣ ವಚನ ಸ್ವೀಕಾರ

೨೦ ಸಚಿವರೂ ಪ್ರಮಾಣ ವಚನ ಸ್ವೀಕಾರ

ತಿರುವನಂತಪುರಂ (ಕೇರಳ) – ಕಾಂಗ್ರೆಸ್ ನಾಯಕ ವಿ.ಡಿ. ಸತೀಶನ್ ಅವರು ಕೇರಳದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರು ಮುಖ್ಯಮಂತ್ರಿಯವರ ನಂತರ ಅವರ ಸಚಿವ ಸಂಪುಟದ ಇತರ ೨೦ ಸಚಿವರಿಗೂ ಪದವಿ ಪ್ರಮಾಣ ವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ, ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಭಾಜಪ ನಾಯಕ ರಾಜೀವ್ ಚಂದ್ರಶೇಖರ್ ಅವರೊಂದಿಗೆ ಕಾಂಗ್ರೆಸ್ ಆಡಳಿತದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೂ ಪಾಲ್ಗೊಂಡಿದ್ದರು. ಕಾಂಗ್ರೆಸ್ ಸಂಸದ ಶಶಿ ತರೂರ್ ವಿದೇಶದಲ್ಲಿದ್ದ ಕಾರಣ ಉಪಸ್ಥಿತರಿರಲಿಲ್ಲ.