
ಪ್ರಯಾಗರಾಜ್ (ಉತ್ತರ ಪ್ರದೇಶ) – ಗಂಗಾನದಿಯ ಪಾತ್ರದಲ್ಲಿ ಮಾಂಸಾಹಾರಿ ಆಹಾರ ಎಸೆಯುವುದರಿಂದ ಹಿಂದೂ ಸಮುದಾಯದ ಭಾವನೆಗಳಿಗೆ ಧಕ್ಕೆಯಾಗಬಹುದು ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಮಾರ್ಚ್ ತಿಂಗಳಲ್ಲಿ ಗಂಗಾನದಿಯಲ್ಲಿ ದೋಣಿಯೊಂದರಲ್ಲಿ ಇಫ್ತಾರ್ ಕೂಟವನ್ನು ಆಯೋಜಿಸಿದ ಪ್ರಕರಣದಲ್ಲಿ ಪ್ರಕರಣ ದಾಖಲಾಗಿದ್ದ 14 ಮುಸ್ಲಿಂ ಪುರುಷರ ಪೈಕಿ 5 ಜನರಿಗೆ ಜಾಮೀನು ಮಂಜೂರು ಮಾಡುವಾಗ ನ್ಯಾಯಮೂರ್ತಿ ರಾಜೀವ್ ಲೋಚನ್ ಶುಕ್ಲಾ ಅವರು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
1. ನ್ಯಾಯಾಲಯವು, ಆರೋಪಿಗಳು ವ್ಯಕ್ತಪಡಿಸಿದ ಪಶ್ಚಾತ್ತಾಪದ ಭಾವನೆಯನ್ನು ಜಾಮೀನು ಮಂಜೂರು ಮಾಡಲು ಪರಿಗಣಿಸಬಹುದು ಎಂದು ಹೇಳಿದೆ. ಕೇವಲ ಆರೋಪಿಗಳು ಮಾತ್ರವಲ್ಲ, ಅವರ ಕುಟುಂಬದವರು ಕೂಡ ಸಮಾಜಕ್ಕಾದ ನೋವಿನ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ.
2. ನ್ಯಾಯಾಲಯವು, ಈ ಹಿಂದೆ ಆರೋಪಿಗಳ ಮೇಲೆ ಹೊರಿಸಲಾದ ಯಾವುದೇ ಅಪರಾಧಕ್ಕೆ 7 ವರ್ಷಗಳಿಗಿಂತ ಹೆಚ್ಚಿನ ಶಿಕ್ಷೆಯ ಅವಕಾಶವಿಲ್ಲ ಎಂದು ಗಮನಿಸಿದೆ. ಅಲ್ಲದೆ, ದೋಣಿ ಚಾಲಕನ ದೋಣಿಯನ್ನು ಆರೋಪಿಗಳು ಬಲವಂತವಾಗಿ ವಶಪಡಿಸಿಕೊಂಡಿದ್ದಾರೆ ಎಂಬ ದೋಣಿ ಚಾಲಕನ ದೂರಿನ ಬಗ್ಗೆಯೂ ನ್ಯಾಯಾಲಯ ಸಂಶಯ ವ್ಯಕ್ತಪಡಿಸಿದೆ. ಪ್ರಕರಣ ದಾಖಲಾಗುವ ಮುನ್ನ ಸಂಬಂಧಪಟ್ಟ ದೋಣಿ ಚಾಲಕ ತನಗಾದ ಸುಲಿಗೆ ಅಥವಾ ಬಲವಂತದ ಬಗ್ಗೆ ಯಾವುದೇ ದೂರು ನೀಡಿರಲಿಲ್ಲ ಎಂದು ಹೇಳಿದೆ. ದೋಣಿ ಚಾಲಕನು ಈ ಆರೋಪಗಳನ್ನು ಮಾಡುವಲ್ಲಿ ಮಾಡಿರುವ ವಿಳಂಬವು ಆತನ ಕಥೆಯ ಬಗ್ಗೆ ಅನುಮಾನವನ್ನು ಉಂಟುಮಾಡುತ್ತದೆ ಎಂದು ಹೇಳಿದೆ.
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!