
ಪ್ರಯಾಗರಾಜ್ (ಉತ್ತರ ಪ್ರದೇಶ) – ಗಂಗಾನದಿಯ ಪಾತ್ರದಲ್ಲಿ ಮಾಂಸಾಹಾರಿ ಆಹಾರ ಎಸೆಯುವುದರಿಂದ ಹಿಂದೂ ಸಮುದಾಯದ ಭಾವನೆಗಳಿಗೆ ಧಕ್ಕೆಯಾಗಬಹುದು ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಮಾರ್ಚ್ ತಿಂಗಳಲ್ಲಿ ಗಂಗಾನದಿಯಲ್ಲಿ ದೋಣಿಯೊಂದರಲ್ಲಿ ಇಫ್ತಾರ್ ಕೂಟವನ್ನು ಆಯೋಜಿಸಿದ ಪ್ರಕರಣದಲ್ಲಿ ಪ್ರಕರಣ ದಾಖಲಾಗಿದ್ದ 14 ಮುಸ್ಲಿಂ ಪುರುಷರ ಪೈಕಿ 5 ಜನರಿಗೆ ಜಾಮೀನು ಮಂಜೂರು ಮಾಡುವಾಗ ನ್ಯಾಯಮೂರ್ತಿ ರಾಜೀವ್ ಲೋಚನ್ ಶುಕ್ಲಾ ಅವರು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
1. ನ್ಯಾಯಾಲಯವು, ಆರೋಪಿಗಳು ವ್ಯಕ್ತಪಡಿಸಿದ ಪಶ್ಚಾತ್ತಾಪದ ಭಾವನೆಯನ್ನು ಜಾಮೀನು ಮಂಜೂರು ಮಾಡಲು ಪರಿಗಣಿಸಬಹುದು ಎಂದು ಹೇಳಿದೆ. ಕೇವಲ ಆರೋಪಿಗಳು ಮಾತ್ರವಲ್ಲ, ಅವರ ಕುಟುಂಬದವರು ಕೂಡ ಸಮಾಜಕ್ಕಾದ ನೋವಿನ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ.
2. ನ್ಯಾಯಾಲಯವು, ಈ ಹಿಂದೆ ಆರೋಪಿಗಳ ಮೇಲೆ ಹೊರಿಸಲಾದ ಯಾವುದೇ ಅಪರಾಧಕ್ಕೆ 7 ವರ್ಷಗಳಿಗಿಂತ ಹೆಚ್ಚಿನ ಶಿಕ್ಷೆಯ ಅವಕಾಶವಿಲ್ಲ ಎಂದು ಗಮನಿಸಿದೆ. ಅಲ್ಲದೆ, ದೋಣಿ ಚಾಲಕನ ದೋಣಿಯನ್ನು ಆರೋಪಿಗಳು ಬಲವಂತವಾಗಿ ವಶಪಡಿಸಿಕೊಂಡಿದ್ದಾರೆ ಎಂಬ ದೋಣಿ ಚಾಲಕನ ದೂರಿನ ಬಗ್ಗೆಯೂ ನ್ಯಾಯಾಲಯ ಸಂಶಯ ವ್ಯಕ್ತಪಡಿಸಿದೆ. ಪ್ರಕರಣ ದಾಖಲಾಗುವ ಮುನ್ನ ಸಂಬಂಧಪಟ್ಟ ದೋಣಿ ಚಾಲಕ ತನಗಾದ ಸುಲಿಗೆ ಅಥವಾ ಬಲವಂತದ ಬಗ್ಗೆ ಯಾವುದೇ ದೂರು ನೀಡಿರಲಿಲ್ಲ ಎಂದು ಹೇಳಿದೆ. ದೋಣಿ ಚಾಲಕನು ಈ ಆರೋಪಗಳನ್ನು ಮಾಡುವಲ್ಲಿ ಮಾಡಿರುವ ವಿಳಂಬವು ಆತನ ಕಥೆಯ ಬಗ್ಗೆ ಅನುಮಾನವನ್ನು ಉಂಟುಮಾಡುತ್ತದೆ ಎಂದು ಹೇಳಿದೆ.
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!