ಅಂಗಡಿಯ ಬಳಿ ನಿಂತು ಹಿಂದೂ ಯುವತಿಯರ ಜೊತೆ ಅಸಭ್ಯ ವರ್ತನೆ

ಖೇಡ (ಗುಜರಾತ್) – ಜಿಲ್ಲೆಯ ಚಾಂದಣ್ ಗ್ರಾಮದಲ್ಲಿರುವ ಜಾಗವನ್ನು ಒತ್ತುವರಿ ಮಾಡಿಕೊಂಡು ಅಲ್ಲಿ ಅಕ್ರಮ ಅಂಗಡಿಗಳನ್ನು ನಿರ್ಮಿಸುವುದು ಮತ್ತು ಅಲ್ಲಿಯ ಹಿಂದೂ ಯುವತಿಯರ ಜೊತೆಗೆ ಅಸಭ್ಯ ವರ್ತನೆ ನಡೆಸಿರುವ ಘಟನೆಗಳು ಬೆಳಕಿಗೆ ಬಂದಿವೆ. ಗ್ರಾಮದ ಮಧ್ಯ ಭಾಗದಲ್ಲಿರುವ ಖಾಲಿ ಜಾಗವನ್ನು ಮುಸ್ಲಿಮರು ಅತಿಕ್ರಮಣ ಮಾಡಿಕೊಂಡು ಅಲ್ಲಿ ಅಕ್ರಮ ಅಂಗಡಿಗಳನ್ನು ಕಟ್ಟಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಅಂಗಡಿಗಳ ಬಳಿ ಮುಸ್ಲಿಂ ಯುವಕರ ಗುಂಪುಗಳು ಜಮಾಯಿಸುತ್ತವೆ ಮತ್ತು ಅಲ್ಲಿಂದ ಹಾದುಹೋಗುವ ಹಿಂದೂ ಮಹಿಳೆಯರು ಹಾಗೂ ಯುವತಿಯರನ್ನು ನೋಡಿ ಅಶ್ಲೀಲ ಸನ್ನೆಗಳನ್ನು ಹಾಗೂ ಅಸಭ್ಯ ಟಿಪ್ಪಣಿಗಳನ್ನು ಮಾಡುತ್ತಾರೆಂದು ಹಿಂದೂಗಳು ಆರೋಪಿಸಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತುವರಿ ತೆರವುಗೊಳಿಸುವಂತೆ ಆಗ್ರಹಿಸಲಾಗಿದೆ.
೧. ಈ ಅಂಗಡಿಗಳ ಸುತ್ತ-ಮುತ್ತ ದೇವಸ್ತಾನಗಳು ಮತ್ತು ಚಬೂತರಾ ಚೌಕಗಳಿವೆ, ಅಲ್ಲಿ ನವರಾತ್ರಿ ಮತ್ತು ಭಜನೆಯಂತಹ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ. ಈ ಕಾರ್ಯಕ್ರಮಗಳ ಸಮಯದಲ್ಲಿಯೂ ಈ ಯುವಕರು ತಡರಾತ್ರಿಯವರೆಗೆ ಅಂಗಡಿಗಳನ್ನು ತೆರೆದಿಟ್ಟು ಭಕ್ತರ ಬಗ್ಗೆ ಅಸಭ್ಯವಾಗಿ ಟಿಪ್ಪಣಿ ಮಾಡುತ್ತಾರೆ ಎಂದು ಆರೋಪಿಸಲಾಗಿದೆ. ಅಲ್ಲದೆ, ಗರ್ಬಾ ನೃತ್ಯ ಮಾಡುವ ಮಹಿಳೆಯರ ವೀಡಿಯೊ ಮತ್ತು ಫೋಟೋಗಳನ್ನು ರಹಸ್ಯವಾಗಿ ತೆಗೆಯಲಾಗುತ್ತಿದ್ದು, ಇದರಿಂದಾಗಿ ಈ ಹಿಂದೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
೨. ಸ್ಥಳೀಯ ಹಿಂದೂ ಸಂಘಟನೆಯ ಪದಾಧಿಕಾರಿ ಧವಳಸಿಂಹ ಝಾಲಾ ಅವರು ಈ ಬಗ್ಗೆ ಮಾತನಾಡಿ, ಕಳೆದ ಮೂರು ವರ್ಷಗಳಿಂದ ಇಂತಹ ಘಟನೆಗಳು ನಡೆಯುತ್ತಿವೆ. ಈ ವರ್ಷ ನವರಾತ್ರಿಯ ಸಂದರ್ಭದಲ್ಲಿ ಕೆಲವು ಮುಸ್ಲಿಂ ಯುವಕರು ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ವೇಗವಾಗಿ ದ್ವಿಚಕ್ರ ವಾಹನಗಳನ್ನು ಚಲಾಯಿಸುತ್ತಾ ಅಶ್ಲೀಲವಾಗಿ ವರ್ತಿಸುತ್ತಿದ್ದರು. ಅಪ್ರಾಪ್ತ ಹಿಂದೂ ಹುಡುಗಿಯ ಮೇಲಿನ ಸಾಮೂಹಿಕ ಅತ್ಯಾಚಾರದ ನಂತರ ಗ್ರಾಮಸ್ಥರು ದಾಖಲೆಗಳನ್ನು ಪರಿಶೀಲಿಸಿದಾಗ, ಈ ಅಂಗಡಿಗಳು ಅಕ್ರಮ ಜಮೀನಿನಲ್ಲಿರುವುದು ಪತ್ತೆಯಾಗಿದೆ. ಪ್ರಸ್ತುತ ಆಡಳಿತ ಮಂಡಳಿಯು ಈ ಅಂಗಡಿಗಳ ಮಾಲೀಕರಿಗೆ ನೋಟಿಸ್ ಜಾರಿ ಮಾಡಿದ್ದು, ಸಂಬಂಧಪಟ್ಟವರು ಸಿಂಧುತ್ವವಿರುವ ದಾಖಲೆಗಳನ್ನು ಸಲ್ಲಿಸುವಂತೆ ಆದೇಶಿಸಿದೆ. ದಾಖಲೆಗಳಿಲ್ಲದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಲಾಗಿದೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ